AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಲೋಕಸಭಾ ಚುನಾವಣೆಗೆ ಯಾವ ರಾಜ್ಯದಲ್ಲಿ ಯಾವಾಗ ಮತದಾನ?

ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಆಂಧ್ರ ಪ್ರದೇಶ, ಚಂಡೀಗಢ, ದೆಹಲಿ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಹರ್ಯಾಣ, ಕೇರಳ, ಲಕ್ಷದ್ವೀಪ, ಲಡಾಖ್, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ಪುದುಚೇರಿ, ಸಿಕ್ಕಿಂ, ತಮಿಳುನಾಡು, ಪಂಜಾಬ್, ತೆಲಂಗಾಣ, ಉತ್ತರಾಖಂಡ ಮತ್ತು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯುನಲ್ಲಿ ಒಂದೇ ಹಂತದ ಮತದಾನ ನಡೆಯಲಿದೆ.

Lok Sabha Election: ಲೋಕಸಭಾ ಚುನಾವಣೆಗೆ ಯಾವ ರಾಜ್ಯದಲ್ಲಿ ಯಾವಾಗ ಮತದಾನ?
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Mar 16, 2024 | 7:29 PM

Share

ದೆಹಲಿ ಮಾರ್ಚ್ 16: ಮುಖ್ಯ ಚುನಾವಣಾ ಆಯುಕ್ತ(chief election commissioner of india) ರಾಜೀವ್ ಕುಮಾರ್ ಇಂದು (ಶನಿವಾರ) 2024 ರ ಲೋಕಸಭಾ ಚುನಾವಣೆಯ (Lok Sabha Election) ದಿನಾಂಕಗಳನ್ನು ಪ್ರಕಟಿಸಿದ್ದಾರೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಏಪ್ರಿಲ್ 19 ರಿಂದ ಮತದಾನ ಆರಂಭವಾಗಲಿದ್ದು, ದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಒಟ್ಟು 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದೇ ದಿನ ಮತದಾನ ನಡೆಯಲಿದ್ದು, ಮೂರು ರಾಜ್ಯಗಳಲ್ಲಿ ಎಲ್ಲಾ ಏಳು ಹಂತಗಳಲ್ಲಿ ಮತದಾನವನ್ನು ನಡೆಯಲಿದೆ. ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಹಂತದಲ್ಲಿ ಚುನಾವಣೆ ನಡೆಯಲಿದೆ.

ಜಮ್ಮು ಮತ್ತು ಕಾಶ್ಮೀರವನ್ನು ಹೊರತುಪಡಿಸಿ, ಬಹುತೇಕ ಎಲ್ಲಾ ಕೇಂದ್ರಾಡಳಿತ ಪ್ರದೇಶಗಳಲ್ಲಿ  ಒಂದೇ ಹಂತದಲ್ಲಿ ಮತದಾನ ಮಾಡುತ್ತವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಐದು ಹಂತದಲ್ಲಿ ಚುನಾವಣೆ ನಡೆಯಲಿದೆ.

ಯಾವ ರಾಜ್ಯ, ಕೇಂದ್ರಾಡಳಿತ ಪ್ರದೇಶದಲ್ಲಿ ಎಷ್ಟು ಹಂತಗಳಲ್ಲಿ ಮತದಾನ?

ಈ ರಾಜ್ಯಗಳಲ್ಲಿ ನಡೆಯಲಿದೆ ಒಂದೇ ಹಂತದ ಮತದಾನ

ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಆಂಧ್ರ ಪ್ರದೇಶ, ಚಂಡೀಗಢ, ದೆಹಲಿ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಹರ್ಯಾಣ, ಕೇರಳ, ಲಕ್ಷದ್ವೀಪ, ಲಡಾಖ್, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ಪುದುಚೇರಿ, ಸಿಕ್ಕಿಂ, ತಮಿಳುನಾಡು, ಪಂಜಾಬ್, ತೆಲಂಗಾಣ, ಉತ್ತರಾಖಂಡ ಮತ್ತು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು.

ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳು

ಕರ್ನಾಟಕ, ರಾಜಸ್ಥಾನ, ತ್ರಿಪುರ, ಮಣಿಪುರ

ಮೂರು ಹಂತದಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳು

ಛತ್ತೀಸ್‌ಗಢ, ಅಸ್ಸಾಂ

ನಾಲ್ಕು ಹಂತದಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳು

ಒಡಿಶಾ, ಮಧ್ಯಪ್ರದೇಶ, ಜಾರ್ಖಂಡ್

ಐದು ಹಂತದಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳು

ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ

ಏಳು ಹಂತದಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳು ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ

ಏಳು ಹಂತದ ಚುನಾವಣೆ ದಿನಾಂಕ

ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ಏಳು ಹಂತದ ಚುನಾವಣೆ ನಡೆಯಲಿದೆ

ಯಾವ ರಾಜ್ಯದಲ್ಲಿ ಯಾವ ದಿನದಂದು ಮತದಾನ?

  • ಉತ್ತರ ಪ್ರದೇಶ: ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1
  • ಬಿಹಾರ: ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1
  • ಪಶ್ಚಿಮ ಬಂಗಾಳ: ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1
  • ಮಹಾರಾಷ್ಟ್ರ: ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20
  • ಜಮ್ಮು ಮತ್ತು ಕಾಶ್ಮೀರ: ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20
  • ಒಡಿಶಾ: ಮೇ 13, ಮೇ 20, ಮೇ 25 ಮತ್ತು ಜೂನ್ 1
  • ಮಧ್ಯಪ್ರದೇಶ: ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13
  • ಜಾರ್ಖಂಡ್: ಮೇ 13, ಮೇ 20, ಮೇ 25 ಮತ್ತು ಜೂನ್ 1
  • ಛತ್ತೀಸ್‌ಗಢ: ಏಪ್ರಿಲ್ 19, ಏಪ್ರಿಲ್ 26, ಮೇ 7
  • ಅಸ್ಸಾಂ: ಏಪ್ರಿಲ್ 19, ಏಪ್ರಿಲ್ 26, ಮೇ 7
  • ಕರ್ನಾಟಕ: ಏಪ್ರಿಲ್ 26, ಮೇ 7
  • ರಾಜಸ್ಥಾನ: ಏಪ್ರಿಲ್ 19, ಏಪ್ರಿಲ್ 26
  • ತ್ರಿಪುರ: ಏಪ್ರಿಲ್ 19, ಏಪ್ರಿಲ್ 26
  • ಮಣಿಪುರ: ಏಪ್ರಿಲ್ 19, ಏಪ್ರಿಲ್ 26
  • ಕೇರಳ: ಏಪ್ರಿಲ್ 26

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ 7 ಹಂತದ ಮತದಾನ; ಇಲ್ಲಿದೆ ವೇಳಾಪಟ್ಟಿ

ಏಪ್ರಿಲ್ 19 ರಂದು 1 ನೇ ಹಂತದ ಮತದಾನ, ಏಪ್ರಿಲ್ 26 ರಂದು 2 ನೇ ಹಂತದ ಮತದಾನ, ಮೇ 7 ರಂದು 3 ನೇ ಹಂತದ ಮತದಾನ, ಮೇ 13 ರಂದು 4 ನೇ ಹಂತದ ಮತದಾನ, ಮೇ 20 ರಂದು 5 ನೇ ಹಂತದ ಮತದಾನ, ಮೇ 25 ರಂದು 6 ನೇ ಹಂತದ ಮತದಾನ ಮತ್ತು ಜೂನ್ 1ರಂದು 7 ನೇ ಹಂತದ ಮತದಾನ ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Sat, 16 March 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ