AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಶಿವಸೇನೆಯು ಮುಂಬೈ ವಾಯುವ್ಯ ಕ್ಷೇತ್ರದಿಂದ ಬಾಲಿವುಡ್ ನಟ ಗೋವಿಂದರನ್ನು ಕಣಕ್ಕಿಳಿಸುವ ಸಾಧ್ಯತೆ

ಶಿವಸೇನೆ(ಶಿಂಧೆ ಬಣ)ಯು ಬಾಲಿವುಡ್ ನಟ ಗೋವಿಂದ ಅವರನ್ನು ಮುಂಬೈ ವಾಯವ್ಯ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆ ಇದೆ. ಐದು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ನಟ ಭೇಟಿ ಮಾಡಿದ್ದರು. ಈ ಬಾರಿ ವಾಯವ್ಯ ಕ್ಷೇತ್ರದಿಂದ ಹಾಲಿ ಸಂಸದ ಗಜಾನನ ಕೀರ್ತಿಕರ್‌ಗೆ ಟಿಕೆಟ್ ನೀಡಲು ಶಿಂಧೆ ಬಣ ಸಿದ್ಧವಿಲ್ಲ. ನಟ ಗೋವಿಂದ 2004 ರಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಉತ್ತರ ಮುಂಬೈನಿಂದ ಸಂಸದರಾಗಿದ್ದರು.

Lok Sabha Election: ಶಿವಸೇನೆಯು ಮುಂಬೈ ವಾಯುವ್ಯ ಕ್ಷೇತ್ರದಿಂದ ಬಾಲಿವುಡ್ ನಟ ಗೋವಿಂದರನ್ನು ಕಣಕ್ಕಿಳಿಸುವ ಸಾಧ್ಯತೆ
ನಟ ಗೋವಿಂದ
ನಯನಾ ರಾಜೀವ್
|

Updated on:Mar 22, 2024 | 2:29 PM

Share

ಶಿವಸೇನೆ(ಶಿಂಧೆ ಬಣ)ಯು ಬಾಲಿವುಡ್ ನಟ ಗೋವಿಂದ(Govinda) ಅವರನ್ನು ಮುಂಬೈ ವಾಯವ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆ(Lok Sabha Election)ಗೆ ಕಣಕ್ಕಿಳಿಸುವ ಸಾಧ್ಯತೆ ಇದೆ. ಐದು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ನಟ ಭೇಟಿ ಮಾಡಿದ್ದರು. ಈ ಬಾರಿ ವಾಯವ್ಯ ಕ್ಷೇತ್ರದಿಂದ ಹಾಲಿ ಸಂಸದ ಗಜಾನನ ಕೀರ್ತಿಕರ್‌ಗೆ ಟಿಕೆಟ್ ನೀಡಲು ಶಿಂಧೆ ಬಣ ಸಿದ್ಧವಿಲ್ಲ. ನಟ ಗೋವಿಂದ 2004 ರಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಉತ್ತರ ಮುಂಬೈನಿಂದ ಸಂಸದರಾಗಿದ್ದರು.

ಪಕ್ಷಗಳು ಒಂದರ ಹಿಂದೆ ಒಂದರಂತೆ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುತ್ತಿವೆ. ಈಗಾಗಲೇ ಲೋಕಸಭಾ ಚುನಾವಣೆಯ ಘೋಷಣೆಗಳಾಗಿವೆ. ಏಪ್ರಿಲ್ 19ರಿಂದ ಚುನಾವಣೆ ಆರಂಭವಾಗಲಿದ್ದು, ಜೂನ್ 1ರವರೆಗೆ 7 ಹಂತಗಳಲ್ಲಿ ನಡೆಯಲಿದೆ. ಜೂನ್ 4ಕ್ಕೆ ಫಲಿತಾಂಶ ಹೊರಬರಲಿದೆ.

ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದ ಚುನಾವಣಾ ಆಯೋಗವು ಮಹಾರಾಷ್ಟ್ರದಲ್ಲಿ ಮೊದಲ, ಎರಡನೇ, ಮೂರನೇ, ನಾಲ್ಕು ಮತ್ತು ಐದನೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದೆ. ಇದರಲ್ಲಿ ಮೊದಲ ಹಂತದಲ್ಲಿ

ಏಪ್ರಿಲ್ 19 ರಂದು 5 ಸ್ಥಾನಗಳು, ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು 8 ಸ್ಥಾನಗಳು, ಮೂರನೇ ಹಂತದಲ್ಲಿ ಮೇ 7 ರಂದು 11 ಸ್ಥಾನಗಳು, ನಾಲ್ಕನೇ ಹಂತದಲ್ಲಿ ಮೇ 13 ರಂದು 11 ಸ್ಥಾನಗಳು ಮತ್ತು ಐದನೇ ಹಂತದಲ್ಲಿ ಮೇ 20 ರಂದು ಹಂತ 13 ಸ್ಥಾನಗಳಲ್ಲಿ ಚುನಾವಣೆ ನಡೆಯಲಿದೆ.

ಮತ್ತಷ್ಟು ಓದಿ: ತಮಿಳುನಾಡು: 9 ಲೋಕಸಭಾ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬಿಜೆಪಿ; ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧೆ

ಈ ಬಾರಿ ಮಹಾರಾಷ್ಟ್ರದಲ್ಲಿ ಮಹಾಯುತಿ ಮತ್ತು ಮಹಾವಿಕಾಸ್ ಅಘಾಡಿ ನಡುವೆ ಪ್ರಮುಖ ಸ್ಪರ್ಧೆ ನಡೆಯಲಿದೆ. ಮಹಾಯುತಿಯಲ್ಲಿ ಬಿಜೆಪಿ, ಎನ್‌ಸಿಪಿ ಮತ್ತು ಶಿವಸೇನೆ ಒಟ್ಟಾಗಿವೆ. ಆದರೆ ಮಹಾವಿಕಾಸ್ ಅಘಾಡಿ ಶಿವಸೇನೆ ಯುಬಿಟಿ, ಎನ್‌ಸಿಪಿ ಶರದ್ ಪವಾರ್ ಮತ್ತು ಕಾಂಗ್ರೆಸ್ ಹೊಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:20 pm, Fri, 22 March 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ