AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election 2024: ಬ್ರಿಜ್ ಭೂಷಣ್ ಶರಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ನೀಡಿದ ಬಿಜೆಪಿ

ಬ್ರಿಜ್ ಭೂಷಣ್ ಶರಣ್ ಸಿಂಗ್ ಬದಲಿಗೆ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಟಿಕೆಟ್​​​ ನೀಡಲಾಗಿದೆ. ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾಆರಿ ಟಿಕೆಟ್​​​ ನೀಡಿಲ್ಲ. ಉತ್ತರಪ್ರದೇಶದ ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಕರಣ್ ಭೂಷಣ್ ಸಿಂಗ್ ಸ್ಪರ್ಧಿಸಲಿದ್ದಾರೆ.

Lok Sabha Election 2024: ಬ್ರಿಜ್ ಭೂಷಣ್ ಶರಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ನೀಡಿದ ಬಿಜೆಪಿ
ಅಕ್ಷಯ್​ ಪಲ್ಲಮಜಲು​​
|

Updated on:May 02, 2024 | 5:16 PM

Share

ದೆಹಲಿ, ಮೇ.2: ಬ್ರಿಜ್​ ಭೂಷಣ್​ ಶರಣ್​ಸಿಂಗ್ ( Brij Bhushan Sharan Singh) ಪರವಾಗಿ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಉತ್ತರಪ್ರದೇಶದ ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದ ಟಿಕೆಟ್​​​ ನೀಡಲಾಗಿದೆ. ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ ಶರಣ್​ಸಿಂಗ್​​​ಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಇಲ್ಲ ಎಂದು ಹೇಳಲಾಗಿತ್ತು. ಇದೀಗ ಅವರ ಮಗನಿಗೆ ಟಿಕೆಟ್​​​ ನೀಡಲಾಗಿತ್ತು. ಇನ್ನು ಉತ್ತರಪ್ರದೇಶದ ರಾಯ್ ಬರೇಲಿಯಿಂದ ಯೋಗಿ ದಿನೇಶ್ ಪ್ರತಾಪ್ ಸಿಂಗ್ ಅವರಿಗೆ ನೀಡಲಾಗಿದೆ.

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ ಶರಣ್​ಸಿಂಗ್ಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ನೀಡಿಲ್ಲ, ಗೃಹ ಸಚಿವ ಅಮಿತ್​ ಶಾ ಲಕ್ನೋದಲ್ಲಿ ಈ ವಿಚಾರದ ಕುರಿತು ಬ್ರಿಜ್​ ಭೂಷಣ್​ ಅವರ ಬಳಿ ಚರ್ಚಿಸಲಿದ್ದು ಬ್ರಿಜ್​ ಭೂಷಣ್​ ಒಪ್ಪಿದರೆ ಅವರ ಕುಟುಂಬದಲ್ಲಿ ಯಾರಿಗಾದರೂ ಟಿಕೆಟ್ ನೀಡುವುದಾಗಿ ಚರ್ಚೆ ನಡೆದಿತ್ತು, ಇದೀಗ ಅದರಂತೆ ಅವರ ಮಗನಿಗೆ ಟಿಕೆಟ್​​ ನೀಡಲಾಗಿದೆ. ಇನ್ನು ಭಾರೀ ಚರ್ಚೆಯಲ್ಲಿರುವ ರಾಯ್ ಬರೇಲಿ ಲೋಕಸಭೆ ಕ್ಷೇತ್ರಕ್ಕೂ ಈ ಅಭ್ಯರ್ಥಿಯನ್ನು ಬಿಜೆಪಿ ಘೋಷಣೆ ಮಾಡಿದೆ.

ಕರಣ್ ಭೂಷಣ್ ಸಿಂಗ್ ಪ್ರಸ್ತುತ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಜತೆಗೆ ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರೂ ಆಗಿದ್ದಾರೆ. ತಂದೆಯ ಮೇಲೆ ಆರೋಪ ಇದ್ದರ ಕಾರಣ ಈ ಭಾರೀ ಪಕ್ಷ ಅವರಿಗೆ ಟಿಕೆಟ್​​​ ನೀಡಿಲ್ಲ, ಅವರ ಮಗನಿಗೆ ಲೋಕಸಭೆಯಲ್ಲಿ ಟಿಕೆಟ್​​​ ನೀಡಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ಗಿಲ್ಲ ಬಿಜೆಪಿ ಟಿಕೆಟ್​

ರಾಯ್ ಬರೇಲಿಯಲ್ಲಿ ದಿನೇಶ್ ಪ್ರತಾಪ್ ಸಿಂಗ್ ಸ್ಪರ್ಧೆ:

ಯೋಗಿ ಸರ್ಕಾರದ ಸಚಿವ ದಿನೇಶ್ ಪ್ರತಾಪ್ ಸಿಂಗ್ ಈ ಬಾರಿ ಬಿಜೆಪಿಯಿಂದ ರಾಯ್ ಬರೇಲಿಯಲ್ಲಿ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್​​​ನ ಭದ್ರಕೋಟೆಯಲ್ಲಿ ಈ ಬಾರಿ ಬಿಜೆಪಿ ತನ್ನ ಶಕ್ತಿಪ್ರದರ್ಶನ ಮಾಡಲಿದೆ. 2019ರಲ್ಲಿ ಸೋನಿಯಾ ಗಾಂಧಿಯವರ ಬಿಜೆಪಿ ವಿರುದ್ಧ 1.6 ಲಕ್ಷ ಮತಗಳಲ್ಲಿ ಗೆಲುವು ಸಾಧಿಸಿದ್ದರು. ಮೇ 3 ರಂದು ರಾಯ್‌ಬರೇಲಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಫಿರೋಜ್ ಗಾಂಧಿ 1960 ರಿಂದ ಈ ಕ್ಷೇತ್ರದಿಂದಲ್ಲೇ ಸ್ಪರ್ಧಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:58 pm, Thu, 2 May 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್