AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ಜನವರಿ 17ರಂದು ಸಮಾಜವಾದಿ ಪಕ್ಷದೊಂದಿಗೆ ಕಾಂಗ್ರೆಸ್​ ಮಾತುಕತೆ

ಲೋಕಸಭೆ ಚುನಾವಣೆ ಹಿನ್ನೆಲೆ ಸೀಟು ಹಂಚಿಕೆ ಕುರಿತು ಜನವರಿ  17ರಂದು ಸಮಾಜವಾದಿ ಪಕ್ಷ(SP)ದೊಂದಿಗೆ ಕಾಂಗ್ರೆಸ್​ ಸಭೆ ನಡೆಸಲಿದೆ. ದೆಹಲಿಯಲ್ಲಿರುವ ರಾಜ್ಯಸಭಾ ಸಂಸದ ಮುಕುಲ್ ವಾಸ್ನಿಕ್ ಅವರ ಮನೆಯಲ್ಲಿ ಸಭೆ ನಡೆಯಲಿದೆ. ಆದಾಗ್ಯೂ, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮಿತ್ರಪಕ್ಷವಾಗಿರುವ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ದೊಂದಿಗೆ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ನೇರ ಮಾತುಕತೆ ನಡೆಸುವುದಿಲ್ಲ. ಆರ್‌ಎಲ್‌ಡಿ ಜತೆಗಿನ ಮಾತುಕತೆ ಸಮಾಜವಾದಿ ಪಕ್ಷದ ಮೂಲಕ ನಡೆಯಲಿದೆ.

ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ಜನವರಿ 17ರಂದು ಸಮಾಜವಾದಿ ಪಕ್ಷದೊಂದಿಗೆ ಕಾಂಗ್ರೆಸ್​ ಮಾತುಕತೆ
ರಾಹುಲ್ ಗಾಂಧಿ-ಅಖಿಲೇಶ್​ ಯಾದವ್Image Credit source: NDTV
ನಯನಾ ರಾಜೀವ್
|

Updated on: Jan 16, 2024 | 9:35 AM

Share

ಲೋಕಸಭೆ ಚುನಾವಣೆ ಹಿನ್ನೆಲೆ ಸೀಟು ಹಂಚಿಕೆ ಕುರಿತು ಜನವರಿ  17ರಂದು ಸಮಾಜವಾದಿ ಪಕ್ಷ(SP)ದೊಂದಿಗೆ ಕಾಂಗ್ರೆಸ್​ ಸಭೆ ನಡೆಸಲಿದೆ. ದೆಹಲಿಯಲ್ಲಿರುವ ರಾಜ್ಯಸಭಾ ಸಂಸದ ಮುಕುಲ್ ವಾಸ್ನಿಕ್ ಅವರ ಮನೆಯಲ್ಲಿ ಸಭೆ ನಡೆಯಲಿದೆ. ಆದಾಗ್ಯೂ, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮಿತ್ರಪಕ್ಷವಾಗಿರುವ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ದೊಂದಿಗೆ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ನೇರ ಮಾತುಕತೆ ನಡೆಸುವುದಿಲ್ಲ. ಆರ್‌ಎಲ್‌ಡಿ ಜತೆಗಿನ ಮಾತುಕತೆ ಸಮಾಜವಾದಿ ಪಕ್ಷದ ಮೂಲಕ ನಡೆಯಲಿದೆ.

ಉತ್ತರ ಪ್ರದೇಶವು 80 ಲೋಕಸಭಾ ಸ್ಥಾನಗಳನ್ನು ಹೊಂದಿದೆ, ಇದು ದೇಶದಲ್ಲೇ ಅತಿ ಹೆಚ್ಚು. ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಅಪ್ನಾ ದಳ (ಎಸ್) 2019 ರಲ್ಲಿ 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ 15 ಸ್ಥಾನಗಳನ್ನು ಗೆದ್ದಿತ್ತು ಮತ್ತು ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು.

ಕಾಂಗ್ರೆಸ್ ಪಕ್ಷಕ್ಕೆ ಸೀಟು ಹೊಂದಾಣಿಕೆಯನ್ನು ಘೋಷಿಸುವ ಮೊದಲು ಎಎಪಿಯೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಲಿದೆ. ಏತನ್ಮಧ್ಯೆ, ಮುಂಬರುವ ಸಂಸತ್ತಿನ ಚುನಾವಣೆಗೆ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆಯನ್ನು ಘೋಷಿಸುವ ಮೊದಲ ರಾಜ್ಯ ಮಹಾರಾಷ್ಟ್ರವಾಗಿದೆ.

ಮತ್ತಷ್ಟು ಓದಿ: Uttar Pradesh Politics: ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಬಿಎಸ್​ಪಿ, ಮೈತ್ರಿ ಇಲ್ಲ ಎಂದ ಮಾಯಾವತಿ

ಬಿಎಸ್​ಪಿ ಏಕಾಂಗಿ ಸ್ಪರ್ಧೆ ಮುಂಬರಲಿರುವ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಬಿಎಸ್​ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್​ಪಿ ವರಿಷ್ಠೆ ಮಾಯಾವತಿ(Mayawati) ಸ್ಪಷ್ಟಪಡಿಸಿದ್ದಾರೆ. ಲಕ್ನೋದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಯಾವತಿ, ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಸ್ವತಂತ್ರವಾಗಿಯೇ ಸ್ಪರ್ಧಿಸುತ್ತೇವೆ ಎಂದು ತಿಳಿಸಿದ್ದಾರೆ.

ಮಾಯಾವತಿ ಅವರು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿ ಗೋಸುಂಬೆ ಎಂದು ಕರೆದಿದ್ದಾರೆ. ತನ್ನ ಚಾಣಾಕ್ಷ ರಾಜಕೀಯ ತಂತ್ರಗಳಿಗೆ ಹೆಸರುವಾಸಿಯಾಗಿರುವ ಮಾಯಾವತಿ, ಲೋಕಸಭಾ ಚುನಾವಣೆಯ ಸ್ವತಂತ್ರ ನಿಲುವನ್ನು ತಿಳಿಸಲು ತಮ್ಮ ಜನ್ಮದಿನವನ್ನೇ ಆಯ್ಕೆಮಾಡಿಕೊಂಡಿದ್ದಾರೆ.

ಮೈತ್ರಿ ಮಾಡಿಕೊಳ್ಳದೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರವು ದಿಟ್ಟ ಹೆಜ್ಜೆ ಎಂದೇ ಹೇಳಬಹುದು, ಇದು ವಿಶಿಷ್ಟವಾದ ಚುನಾವಣಾ ತಂತ್ರಕ್ಕೆ ವೇದಿಕೆಯನ್ನು ಸಿದ್ಧಪಡಿಸುವುದಂತೂ ಸತ್ಯ. ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಇಂಡಿಯಾ ಮೈತ್ರಿ ಕೂಟಕ್ಕೆ ಸೇರುವುದಿಲ್ಲ ಎಂದು ಹೇಳಿದ್ದಾರೆ.

ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದು ಬಿಎಸ್‌ಪಿಗೆ ಅನಾನುಕೂಲವಾಗಿದೆ ಎಂದು ಅವರು ಹೇಳಿದ್ದಾರೆ. ಮೇಲ್ವರ್ಗದ ಮತಗಳು ಬಿಎಸ್ಪಿಗೆ ವರ್ಗಾವಣೆಯಾಗುವುದಿಲ್ಲ, ದಲಿತ ಮತಗಳು ವರ್ಗಾವಣೆಯಾಗುತ್ತವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!