ಲೋಕಸಭಾ ಚುನಾವಣೆ: ಆಂಧ್ರಪ್ರದೇಶದಿಂದ ಪ್ರಧಾನಿ ಮೋದಿ ಮೊದಲ ರ್‍ಯಾಲಿ ಆರಂಭ

ಪ್ರಧಾನಿ ನರೇಂದ್ರ ಮೋದಿಯವರು ಆಂಧ್ರಪ್ರದೇಶದಿಂದ ಮೊದಲ ಚುನಾವಣಾ ರ್‍ಯಾಲಿ ಆರಂಭಿಸಲಿದ್ದಾರೆ. ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಮತ್ತು ಜೆಎಸ್‌ಪಿ ಮುಖ್ಯಸ್ಥ ಪವನ್ ಕಲ್ಯಾಣ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಲೋಕಸಭಾ ಚುನಾವಣೆ: ಆಂಧ್ರಪ್ರದೇಶದಿಂದ ಪ್ರಧಾನಿ ಮೋದಿ ಮೊದಲ ರ್‍ಯಾಲಿ ಆರಂಭ
ನರೇಂದ್ರ ಮೋದಿImage Credit source: Hindustan Times
Follow us
|

Updated on: Mar 17, 2024 | 9:25 AM

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ಆಂಧ್ರಪ್ರದೇಶದ ಪಲನಾಡುವಿನಿಂದ ಮೊದಲ ಚುನಾವಣಾ ರ್‍ಯಾಲಿಯನ್ನು ಆರಂಭಿಸಲಿದ್ದಾರೆ. ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಮತ್ತು ಜೆಎಸ್‌ಪಿ ಮುಖ್ಯಸ್ಥ ಪವನ್ ಕಲ್ಯಾಣ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ . ಚಂದ್ರಬಾಬು ನಾಯ್ಡು ಅವರು ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನವನ್ನು ನೀಡಿದರು ಮತ್ತು ಮಾರ್ಚ್ 17 ರಂದು ಚಿಲಕಲೂರಿಪೇಟಾ ರ್ಯಾಲಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು ಎಂದು ಟಿಡಿಪಿ ನಾಯಕ ತಿಳಿಸಿದ್ದಾರೆ.

ಮಾರ್ಚ್ 9 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ಭಾರತೀಯ ಜನತಾ ಪಕ್ಷವು ಟಿಡಿಪಿಯೊಂದಿಗೆ ಸೀಟು ಹಂಚಿಕೆ ಮಾತುಕತೆಯನ್ನು ಅಂತಿಮಗೊಳಿಸಿತ್ತು. ಮುಂಬರುವ ಲೋಕಸಭೆ ಚುನಾವಣೆಗೆ ಇದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಮೊದಲ ರ್ಯಾಲಿಯಾಗಿದ್ದು, ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಈ ರ್‍ಯಾಲಿಯಲ್ಲಿ ಟಿಡಿಪಿ ಔಪಚಾರಿಕವಾಗಿ ಎನ್‌ಡಿಎಗೆ ಸೇರ್ಪಡೆಗೊಳ್ಳಲಿದೆ, ಬಿಜೆಪಿಯೊಂದಿಗಿನ ಮೈತ್ರಿ ನಂತರ. ಜನಸೇನಾ ಪಕ್ಷವು ಈಗಾಗಲೇ ಎನ್‌ಡಿಎ ಸದಸ್ಯತ್ವ ಹೊಂದಿದೆ.

2014 ರಲ್ಲಿ ಜನಸೇನಾ ಪಕ್ಷ ಮತ್ತು ಟಿಡಿಪಿ ಎನ್‌ಡಿಎ ಭಾಗವಾಗಿದ್ದಾಗ ಪಿಎಂ ಮೋದಿ, ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಆಂಧ್ರಪ್ರದೇಶದಲ್ಲಿ ಜಂಟಿ ಚುನಾವಣಾ ರ್‍ಯಾಲಿಯನ್ನು ನಡೆಸಿದ್ದರು. ಜನಸೇನಾ ಪಕ್ಷವು ಟಿಡಿಪಿ-ಬಿಜೆಪಿ ಮೈತ್ರಿಯೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ಆದಾಗ್ಯೂ, ಬೆಂಬಲಿಸಿತ್ತು.

ಮತ್ತಷ್ಟು ಓದಿ: 25-26 ಕ್ಷೇತ್ರಗಳಲ್ಲಿ ಗೆದ್ದು ನಿಮ್ಮನ್ನು ನೋಡಲು ಬರುತ್ತೇನೆ ಅಂತ ಮೋದಿಗೆ ಮಾತುಕೊಟ್ಟಿದ್ದೇನೆ: ಯಡಿಯೂರಪ್ಪ

ಬಿಜೆಪಿ ಆರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದು , ಜನಸೇನೆಯು ಸಾರ್ವತ್ರಿಕ ಚುನಾವಣೆಯಲ್ಲಿ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಕೆಲವು ಮಾಧ್ಯಮ ವರದಿಗಳು ತಿಳಿಸಿವೆ. ಉಳಿದ 17 ಕ್ಷೇತ್ರಗಳಲ್ಲಿ ಟಿಡಿಪಿ ಸ್ಪರ್ಧಿಸಬಹುದು.

ಬಿಜೆಪಿಯು ಪಕ್ಷವು ದಕ್ಷಿಣ ರಾಜ್ಯದಲ್ಲಿ ಸುಮಾರು ಆರು ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಬಹುದು. ಆಂಧ್ರಪ್ರದೇಶ ಚುನಾವಣೆಯಲ್ಲಿ ಟಿಡಿಪಿ ಉಳಿದ 145 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು