Lok Sabha Election 2024 : ರಾಹುಲ್​​​ ಅಮೇಥಿಯಂತೆ ವಯನಾಡಿನಲ್ಲೂ ತನ್ನ ನೆಲೆ ಕಳೆದುಕೊಳ್ಳಲಿದ್ದಾರೆ: ಪ್ರಧಾನಿ ಮೋದಿ

Maharashtra: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮೊದಲ ಹಂತದ ಚುನಾವಣೆಯಲ್ಲಿ ಭಾಗಿಯಾದ ಹಾಗೂ ಮೊದಲ ಬಾರಿಗೆ ಮತದಾನ ಮಾಡಿದ ಎಲ್ಲರಿಗೂ ಧನ್ಯವಾಗಳು ಎಂದು ಹೇಳಿದ್ದಾರೆ. ಈ ಬಾರಿ ಮೊದಲ ಹಂತದ ಚುನಾವಣೆಯಲ್ಲಿ ಏಕ ಪಕ್ಷೀಯವಾಗಿ ಮತದಾನ ನಡೆದಿದೆ ಎಂದು ಹೇಳಿದರು.

Lok Sabha Election 2024 : ರಾಹುಲ್​​​ ಅಮೇಥಿಯಂತೆ ವಯನಾಡಿನಲ್ಲೂ ತನ್ನ ನೆಲೆ ಕಳೆದುಕೊಳ್ಳಲಿದ್ದಾರೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
|

Updated on: Apr 20, 2024 | 12:22 PM

ನಾಂದೇಡ್‌, ಏ.20: ದೇಶದಲ್ಲಿ ಲೋಕಸಭೆ ಚುನಾವಣೆ (Lok Sabha Election ) 2024 ಆರಂಭವಾಗಿದ್ದು ಶುಕ್ರವಾರ (ಏ.19) ಮೊದಲ ಹಂತದ ಮತದಾನ ಮುಕ್ತಯಗೊಂಡಿದೆ, ಇದೀಗ ಎಲ್ಲ ಪಕ್ಷಗಳು ಎರಡನೇ ಹಂತದ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಸ್ತುತ ಚುನಾವಣಾ ಪ್ರಚಾರಕ್ಕಾಗಿ ಮಹಾರಾಷ್ಟ್ರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, ನಾಂದೇಡ್ ಪ್ರತಾಪ್ರರಾವ್ ಪಾಟೀಲ್ ಚಿಖ್ಲಿಕರ್ ಅವರ ಪರ ಮತಪ್ರಚಾರ ಮಾಡಿದ್ದಾರೆ.

ಸಭೆಯಲ್ಲಿ ಮೋದಿ, ನಿನ್ನೆ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ. ಮತದಾನ ಮಾಡಿದ ಎಲ್ಲರಿಗೂ ಮತ್ತು ವಿಶೇಷವಾಗಿ ಮೊದಲ ಬಾರಿಗೆ ಮತದಾರರಿಗೆ ನಾನು ಅಭಿನಂದಿಸುತ್ತೇನೆ ಮತ್ತು ಕೃತಜ್ಞತೆ ಸಲ್ಲಿಸುತ್ತೇನೆ. ಮತದಾನ ಮುಗಿದ ನಂತರ ಬೂತ್ ಮಟ್ಟದಲ್ಲಿ ಮಾಡಿದ ವಿಶ್ಲೇಷಣೆ ಹಾಗೂ ಮಾಹಿತಿಗಳ ಪ್ರಕಾರ ಮೊದಲ ಹಂತದಲ್ಲಿ ಎನ್‌ಡಿಎಗೆ ಏಕಪಕ್ಷೀಯ ಮತದಾನವಾಗಿದೆ ಎಂದು ಹೇಳಿದ್ದಾರೆ.

ಇನ್ನು ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡರು. ಅಮೇಥಿಯಂತೆ ಕಾಂಗ್ರೆಸ್ ವಯನಾಡಿನಲ್ಲೂ ತನ್ನ ನೆಲೆಯನ್ನು ಕಳೆದುಕೊಳ್ಳುತ್ತದೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ನಾಂದೇಡ್‌ನಿಂದ ಮಹಾರಾಷ್ಟ್ರದ ಪರ್ಭಾನಿಗೆ ಪ್ರಯಾಣಿಸಲಿದ್ದಾರೆ. ಅಲ್ಲಿಂದ ಕರ್ನಾಟಕದ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಚುನಾವಣಾ ರ್ಯಾಲಿಗಾಗಿ ಪ್ರಧಾನಿ ಮೋದಿ ಕರ್ನಾಟಕಕ್ಕೆ ತೆರಳಲಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿಗಾಗಿ ಹೋರಾಡಿದವರು ಪ್ರಾಣ ಪ್ರತಿಷ್ಠಾಪನೆಗೆ ಬಂದ್ರು, ಆದರೆ ಕಾಂಗ್ರೆಸ್​ನವರು ಬರಲಿಲ್ಲ: ಮೋದಿ ಕಿಡಿ

ಮೋದಿ ಬೆಂಗಳೂರಿನ ಉತ್ತರ, ಮಧ್ಯ, ದಕ್ಷಿಣ ಮತ್ತು ಗ್ರಾಮಾಂತರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದರೆ, ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಲಿದ್ದಾರೆ. ಇಲ್ಲಿ ಮಹತ್ವದ ಪ್ರಚಾರವನ್ನು ಮೋದಿ ಮಾಡಲಿದ್ದಾರೆ. ಮಹಾರಾಷ್ಟ್ರ (ನಾಂದೇಡ್ ಮತ್ತು ಪರ್ಭಾನಿ) ಮತ್ತು ಕರ್ನಾಟಕ (ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ) ಎರಡೂ ರಾಜ್ಯದಲ್ಲೂ ಎರಡನೇ ಹಂತದ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ 60ರಷ್ಟು ಮತದಾನ

2024 ರ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾರರು ನೀಡಿದ ಪ್ರತಿಕ್ರಿಯೆ ಮೋದಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​​ ಖಾತೆಯಲ್ಲಿ ಸಂತೋಷ ವ್ಯಕ್ತಪಡಿಸಿದರು. ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು ಇಂದಿನ ಮತದಾನದಿಂದ ನಾನು ಅತ್ಯುತ್ತಮ ಫಲಿತಾಂಶ ಪಡೆಯುತ್ತೇನೆ. ಭಾರತದಾದ್ಯಂತ ಜನರು ದಾಖಲೆಯ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಎಂದರು.

ಭಾರತದ ಚುನಾವಣಾ ಆಯೋಗದ ಪ್ರಕಾರ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ 102 ಲೋಕಸಭಾ ಕ್ಷೇತ್ರಗಳು ಮತ್ತು 92 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದ ಚುನಾವಣೆಗಳಲ್ಲಿ ಸಂಜೆ 7 ಗಂಟೆಯವರೆಗೆ 60% ಕ್ಕಿಂತ ಹೆಚ್ಚು ಮತದಾನವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಮಗನ ಮದುವೆಯ ಶುಭ ಸಂದರ್ಭದಲ್ಲಿ ವಾರಣಾಸಿಗೆ ಗೌರವ ಸಲ್ಲಿಸಿದ ನೀತಾ ಅಂಬಾನಿ
ಮಗನ ಮದುವೆಯ ಶುಭ ಸಂದರ್ಭದಲ್ಲಿ ವಾರಣಾಸಿಗೆ ಗೌರವ ಸಲ್ಲಿಸಿದ ನೀತಾ ಅಂಬಾನಿ
ಮಜಾ ಟಾಕೀಸ್ ನಲ್ಲಿ ಕೆಲಸ ಮಾಡುವಂತೆ ಅಪರ್ಣಾಗೆ ನಾನೇ ಹೇಳಿದ್ದೆ: ಗ್ರೀಷ್ಮಾ
ಮಜಾ ಟಾಕೀಸ್ ನಲ್ಲಿ ಕೆಲಸ ಮಾಡುವಂತೆ ಅಪರ್ಣಾಗೆ ನಾನೇ ಹೇಳಿದ್ದೆ: ಗ್ರೀಷ್ಮಾ
ಅಪರ್ಣಾ ಪಾರ್ಥೀವ ಶರೀರದ ಮುಂದೆ ಮಜಾ ಟಾಕೀಸ್ ಸೃಜನ್ ಲೋಕೇಶ್ ಭಾವುಕ!
ಅಪರ್ಣಾ ಪಾರ್ಥೀವ ಶರೀರದ ಮುಂದೆ ಮಜಾ ಟಾಕೀಸ್ ಸೃಜನ್ ಲೋಕೇಶ್ ಭಾವುಕ!
ನನ್ನ ಈ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ
ನನ್ನ ಈ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ
‘ಆಯಸ್ಸು ಜಾಸ್ತಿ ಆದಷ್ಟು ಹೆಚ್ಚು ಸಾವುಗಳನ್ನು ನೋಡಬೇಕು’; ಶ್ರೀನಾಥ್ ಬೇಸರ
‘ಆಯಸ್ಸು ಜಾಸ್ತಿ ಆದಷ್ಟು ಹೆಚ್ಚು ಸಾವುಗಳನ್ನು ನೋಡಬೇಕು’; ಶ್ರೀನಾಥ್ ಬೇಸರ
ಅಪರ್ಣಾ ಪಾರ್ಥಿವ ಶರೀರದ ಮುಂದೆ ಮಜಾ ತಂಡ ಕಣ್ಣೀರು
ಅಪರ್ಣಾ ಪಾರ್ಥಿವ ಶರೀರದ ಮುಂದೆ ಮಜಾ ತಂಡ ಕಣ್ಣೀರು
ಅಂಬಾನಿ ಕುಟುಂಬದಲ್ಲಿ ಮದುವೆ ಮುನ್ನ ಸಂಪನ್ನಗೊಂಡ ಶಿವ ಶಕ್ತಿ ಪೂಜೆ
ಅಂಬಾನಿ ಕುಟುಂಬದಲ್ಲಿ ಮದುವೆ ಮುನ್ನ ಸಂಪನ್ನಗೊಂಡ ಶಿವ ಶಕ್ತಿ ಪೂಜೆ
ಅಪರ್ಣಾ ಸರಳ ಜೀವಿ, ವೃತ್ತಿಪರ ಅಸೂಯೆ ಅವರಲ್ಲಿರಲಿಲ್ಲ: ಅರ್ಚನಾ ಉಡುಪ
ಅಪರ್ಣಾ ಸರಳ ಜೀವಿ, ವೃತ್ತಿಪರ ಅಸೂಯೆ ಅವರಲ್ಲಿರಲಿಲ್ಲ: ಅರ್ಚನಾ ಉಡುಪ
ಅಪರ್ಣಾ ಪಾರ್ಥಿವ ಶರೀರದ ಮುಂದೆನಿಂತು ಭಾವುಕರಾದ ಪತಿ; ಅಂತಿಮ ಸಂಸ್ಕಾರ ಎಲ್ಲಿ
ಅಪರ್ಣಾ ಪಾರ್ಥಿವ ಶರೀರದ ಮುಂದೆನಿಂತು ಭಾವುಕರಾದ ಪತಿ; ಅಂತಿಮ ಸಂಸ್ಕಾರ ಎಲ್ಲಿ
ಹೇಗಿತ್ತು ನೋಡಿ ಅಪರ್ಣಾ ಕೊನೆ ದಿನ; ಕ್ಯಾನ್ಸರ್​ನಲ್ಲೂ ನಗು ನಗುತ್ತಲೇ ಇದ್ರು
ಹೇಗಿತ್ತು ನೋಡಿ ಅಪರ್ಣಾ ಕೊನೆ ದಿನ; ಕ್ಯಾನ್ಸರ್​ನಲ್ಲೂ ನಗು ನಗುತ್ತಲೇ ಇದ್ರು