AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದೇಶ್​ಖಾಲಿ ಸಂತ್ರಸ್ತೆ, ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾಗೆ ಎಕ್ಸ್​ ಶ್ರೇಣಿಯ ಭದ್ರತೆ

ಬಿಜೆಪಿಯ ಬಸಿರ್ಹತ್ ಲೋಕಸಭಾ ಅಭ್ಯರ್ಥಿಯಾಗಿರುವ ಪಶ್ಚಿಮ ಬಂಗಾಳದ ಸಂದೇಶ್​ಖಾಲಿಯ ಮಹಿಳೆ ರೇಖಾ ಪಾತ್ರಾ ಅವರಿಗೆ ಕೇಂದ್ರ ಗೃಹ ಸಚಿವಾಲಯವು ಎಕ್ಸ್-ಕೆಟಗರಿ ಭದ್ರತೆಯನ್ನು ನೀಡಿದೆ. ಜೂನ್​ 1ರಂದು ಇಲ್ಲಿ ಮತದಾನ ನಡೆಯಲಿದೆ.

ಸಂದೇಶ್​ಖಾಲಿ ಸಂತ್ರಸ್ತೆ, ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾಗೆ ಎಕ್ಸ್​ ಶ್ರೇಣಿಯ ಭದ್ರತೆ
ರೇಖಾ ಪಾತ್ರಾ
ನಯನಾ ರಾಜೀವ್
|

Updated on:Apr 30, 2024 | 8:46 AM

Share

ಬಸಿರ್ಹತ್​ನ ಬಿಜೆಪಿ ಅಭ್ಯರ್ಥಿ(BJP Candidate) ಹಾಗೂ ಸಂದೇಶ್​ಖಾಲಿ ಸಂತ್ರಸ್ತೆ ರೇಖಾ(Rekha) ಅವರಿಗೆ ಎಕ್ಸ್​ ಶ್ರೇಣಿಯ ಭದ್ರತೆ ಕಲ್ಪಿಸಲಾಗಿದೆ. ಪಾತ್ರ ಹೊರತುಪಡಿಸಿ ಪಶ್ಚಿಮ ಬಂಗಾಳದ 5 ನಾಯಕರಿಗೂ ಭದ್ರತೆ ಒದಗಿಸಲಾಗಿದೆ. ಇತ್ತೀಚೆಗೆ ರೇಖಾ ಪಾತ್ರಾ ಅವರು ತೃಣಮೂಲ ಕಾಂಗ್ರೆಸ್​ಅ ಅಭ್ಯರ್ಥಿ ದೇಬಂಗ್ಶು ಭಟ್ಟಾಚಾರ್ಯ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಪಾತ್ರಾ ಅವರು ಸಂದೇಶ್​ಖಾಲಿಯಲ್ಲಿ ಮಹಿಳೆಯರ ಸಂಕಷ್ಟವನ್ನು ಎತ್ತಿ ತೋರಿಸಿದ್ದರು.

ಪ್ರಸ್ತುತ ಲೋಕಸಭೆ ಚುನಾವಣೆಯ ಕೊನೆಯ ಹಂತವಾದ ಜೂನ್ 1 ರಂದು ಬಸಿರ್‌ಹತ್‌ನಲ್ಲಿ ಮತದಾನ ನಡೆಯಲಿದೆ. ಪ್ರಸ್ತುತ ಸಂಸದೆ ಮತ್ತು ಬಂಗಾಳಿ ನಟಿ ನುಸ್ರತ್ ಜಹಾನ್ ಅವರನ್ನು ಕೈಬಿಟ್ಟ ನಂತರ ನಾಮನಿರ್ದೇಶನಗೊಂಡ ತೃಣಮೂಲ ಕಾಂಗ್ರೆಸ್‌ನ ಹಾಜಿ ನೂರುಲ್ ಇಸ್ಲಾಂ ವಿರುದ್ಧ ಪತ್ರಾ ಕಣಕ್ಕಿಳಿದಿದ್ದಾರೆ.

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ಎಫ್) ಕಮಾಂಡೋಗಳು ಸಂದೇಶ್​ಖಾಲಿ ಸಂತ್ರಸ್ತೆಗೆ ಭದ್ರತೆ ಒದಗಿಸಲಿದ್ದಾರೆ. ಅಪಾಯವನ್ನು ಸೂಚಿಸಿದ ಗುಪ್ತಚರ ಬ್ಯೂರೋ (IB) ವರದಿಯ ನಂತರ ಸಚಿವಾಲಯವು ಎಕ್ಸ್​ ಶ್ರೇಣಿಯ ಭದ್ರತೆ ಒದಗಿಸಲು ನಿರ್ಧರಿಸಿದೆ.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಸಂದೇಶ್​ಖಾಲಿ ಸಂತ್ರಸ್ತೆ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದು ಬಣ್ಣಿಸಿದ ಪ್ರಧಾನಿ ಮೋದಿ

ಜಾರ್‌ಗ್ರಾಮ್‌ನಿಂದ ಪಕ್ಷದ ಅಭ್ಯರ್ಥಿ ಪ್ರಣತ್ ತುಡು, ಬಹ್ರಂಪುರದಿಂದ ನಿರ್ಮಲ್ ಸಹಾ, ಜಯನಗರದಿಂದ ಅಶೋಕ್ ಕಂದಾರಿ ಮತ್ತು ಮಥುರಾಪುರದಿಂದ ಅಶೋಕ್ ಪುರ್ಕೈತ್‌ಗೆ ಎಕ್ಸ್-ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ.

ಏತನ್ಮಧ್ಯೆ, ರಾಯಗಂಜ್ ಬಿಜೆಪಿ ಅಭ್ಯರ್ಥಿ ಕಾರ್ತಿಕ್ ಪಾಲ್ ಅವರಿಗೆ ವೈ-ಕೆಟಗರಿ ಭದ್ರತೆಯನ್ನು ನೀಡಲಾಯಿತು. ಈ ತಿಂಗಳ ಆರಂಭದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾದಾಗಿನಿಂದ, ಪಶ್ಚಿಮ ಬಂಗಾಳದ ಎರಡು ಡಜನ್‌ಗಿಂತಲೂ ಹೆಚ್ಚು ಬಿಜೆಪಿ ನಾಯಕರಿಗೆ ಭದ್ರತೆಯನ್ನು ಒದಗಿಸಲಾಗಿದೆ.

ಸದ್ಯ 100ಕ್ಕೂ ಹೆಚ್ಚು ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ಭದ್ರತೆ ಪಡೆದಿದ್ದಾರೆ. ಸಿಐಎಸ್ಎಫ್ ಕಮಾಂಡೋಗಳು ಈ ನಾಯಕರಿಗೆ ಭದ್ರತೆ ಒದಗಿಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:45 am, Tue, 30 April 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು