AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದೇಶ್​ಖಾಲಿ ಸಂತ್ರಸ್ತೆ, ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾಗೆ ಎಕ್ಸ್​ ಶ್ರೇಣಿಯ ಭದ್ರತೆ

ಬಿಜೆಪಿಯ ಬಸಿರ್ಹತ್ ಲೋಕಸಭಾ ಅಭ್ಯರ್ಥಿಯಾಗಿರುವ ಪಶ್ಚಿಮ ಬಂಗಾಳದ ಸಂದೇಶ್​ಖಾಲಿಯ ಮಹಿಳೆ ರೇಖಾ ಪಾತ್ರಾ ಅವರಿಗೆ ಕೇಂದ್ರ ಗೃಹ ಸಚಿವಾಲಯವು ಎಕ್ಸ್-ಕೆಟಗರಿ ಭದ್ರತೆಯನ್ನು ನೀಡಿದೆ. ಜೂನ್​ 1ರಂದು ಇಲ್ಲಿ ಮತದಾನ ನಡೆಯಲಿದೆ.

ಸಂದೇಶ್​ಖಾಲಿ ಸಂತ್ರಸ್ತೆ, ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾಗೆ ಎಕ್ಸ್​ ಶ್ರೇಣಿಯ ಭದ್ರತೆ
ರೇಖಾ ಪಾತ್ರಾ
ನಯನಾ ರಾಜೀವ್
|

Updated on:Apr 30, 2024 | 8:46 AM

Share

ಬಸಿರ್ಹತ್​ನ ಬಿಜೆಪಿ ಅಭ್ಯರ್ಥಿ(BJP Candidate) ಹಾಗೂ ಸಂದೇಶ್​ಖಾಲಿ ಸಂತ್ರಸ್ತೆ ರೇಖಾ(Rekha) ಅವರಿಗೆ ಎಕ್ಸ್​ ಶ್ರೇಣಿಯ ಭದ್ರತೆ ಕಲ್ಪಿಸಲಾಗಿದೆ. ಪಾತ್ರ ಹೊರತುಪಡಿಸಿ ಪಶ್ಚಿಮ ಬಂಗಾಳದ 5 ನಾಯಕರಿಗೂ ಭದ್ರತೆ ಒದಗಿಸಲಾಗಿದೆ. ಇತ್ತೀಚೆಗೆ ರೇಖಾ ಪಾತ್ರಾ ಅವರು ತೃಣಮೂಲ ಕಾಂಗ್ರೆಸ್​ಅ ಅಭ್ಯರ್ಥಿ ದೇಬಂಗ್ಶು ಭಟ್ಟಾಚಾರ್ಯ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಪಾತ್ರಾ ಅವರು ಸಂದೇಶ್​ಖಾಲಿಯಲ್ಲಿ ಮಹಿಳೆಯರ ಸಂಕಷ್ಟವನ್ನು ಎತ್ತಿ ತೋರಿಸಿದ್ದರು.

ಪ್ರಸ್ತುತ ಲೋಕಸಭೆ ಚುನಾವಣೆಯ ಕೊನೆಯ ಹಂತವಾದ ಜೂನ್ 1 ರಂದು ಬಸಿರ್‌ಹತ್‌ನಲ್ಲಿ ಮತದಾನ ನಡೆಯಲಿದೆ. ಪ್ರಸ್ತುತ ಸಂಸದೆ ಮತ್ತು ಬಂಗಾಳಿ ನಟಿ ನುಸ್ರತ್ ಜಹಾನ್ ಅವರನ್ನು ಕೈಬಿಟ್ಟ ನಂತರ ನಾಮನಿರ್ದೇಶನಗೊಂಡ ತೃಣಮೂಲ ಕಾಂಗ್ರೆಸ್‌ನ ಹಾಜಿ ನೂರುಲ್ ಇಸ್ಲಾಂ ವಿರುದ್ಧ ಪತ್ರಾ ಕಣಕ್ಕಿಳಿದಿದ್ದಾರೆ.

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ಎಫ್) ಕಮಾಂಡೋಗಳು ಸಂದೇಶ್​ಖಾಲಿ ಸಂತ್ರಸ್ತೆಗೆ ಭದ್ರತೆ ಒದಗಿಸಲಿದ್ದಾರೆ. ಅಪಾಯವನ್ನು ಸೂಚಿಸಿದ ಗುಪ್ತಚರ ಬ್ಯೂರೋ (IB) ವರದಿಯ ನಂತರ ಸಚಿವಾಲಯವು ಎಕ್ಸ್​ ಶ್ರೇಣಿಯ ಭದ್ರತೆ ಒದಗಿಸಲು ನಿರ್ಧರಿಸಿದೆ.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಸಂದೇಶ್​ಖಾಲಿ ಸಂತ್ರಸ್ತೆ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದು ಬಣ್ಣಿಸಿದ ಪ್ರಧಾನಿ ಮೋದಿ

ಜಾರ್‌ಗ್ರಾಮ್‌ನಿಂದ ಪಕ್ಷದ ಅಭ್ಯರ್ಥಿ ಪ್ರಣತ್ ತುಡು, ಬಹ್ರಂಪುರದಿಂದ ನಿರ್ಮಲ್ ಸಹಾ, ಜಯನಗರದಿಂದ ಅಶೋಕ್ ಕಂದಾರಿ ಮತ್ತು ಮಥುರಾಪುರದಿಂದ ಅಶೋಕ್ ಪುರ್ಕೈತ್‌ಗೆ ಎಕ್ಸ್-ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ.

ಏತನ್ಮಧ್ಯೆ, ರಾಯಗಂಜ್ ಬಿಜೆಪಿ ಅಭ್ಯರ್ಥಿ ಕಾರ್ತಿಕ್ ಪಾಲ್ ಅವರಿಗೆ ವೈ-ಕೆಟಗರಿ ಭದ್ರತೆಯನ್ನು ನೀಡಲಾಯಿತು. ಈ ತಿಂಗಳ ಆರಂಭದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾದಾಗಿನಿಂದ, ಪಶ್ಚಿಮ ಬಂಗಾಳದ ಎರಡು ಡಜನ್‌ಗಿಂತಲೂ ಹೆಚ್ಚು ಬಿಜೆಪಿ ನಾಯಕರಿಗೆ ಭದ್ರತೆಯನ್ನು ಒದಗಿಸಲಾಗಿದೆ.

ಸದ್ಯ 100ಕ್ಕೂ ಹೆಚ್ಚು ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ಭದ್ರತೆ ಪಡೆದಿದ್ದಾರೆ. ಸಿಐಎಸ್ಎಫ್ ಕಮಾಂಡೋಗಳು ಈ ನಾಯಕರಿಗೆ ಭದ್ರತೆ ಒದಗಿಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:45 am, Tue, 30 April 24

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ