Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಶ್ವೇತಪತ್ರ ವೆಬ್​ಸೈಟ್​ ಮೂಲಕ ನಿಮ್ಮ ಕ್ಷೇತ್ರ ತಲುಪಿದ ಕೇಂದ್ರದ ಯೋಜನೆಗಳ ಮಾಹಿತಿ ಪಡೆಯಿರಿ

ಕ್ಷೇತ್ರಕ್ಕೆ ಕೇಂದ್ರ ಸರ್ಕಾರದ ಯಾವ್ಯಾವ ಯೋಜನೆಗಳು ತಲುಪಿದೆ ಎನ್ನುವ ಮಾಹಿತಿ ಬೇಕಾ ಹಾಗಾದರೆ ಶ್ವೇಪತ್ರ.ಇನ್ ಲಾಗ್​ಇನ್ ಆಗಿ. ಪ್ರತಿ ರಾಜ್ಯದ ಎಲ್ಲಾ ಕ್ಷೇತ್ರಗಳ ಹೆಸರು ಆ ಕ್ಷೇತ್ರ ಕೇಂದ್ರ ಸರ್ಕಾರದ ಯೋಜನೆಯಿಂದ ಪಡೆದ ಲಾಭ ಎಲ್ಲವನ್ನೂ ವಿವರವಾಗಿ ನೀಡಲಾಗಿದೆ.

ಬಿಜೆಪಿಯ ಶ್ವೇತಪತ್ರ ವೆಬ್​ಸೈಟ್​ ಮೂಲಕ ನಿಮ್ಮ ಕ್ಷೇತ್ರ ತಲುಪಿದ ಕೇಂದ್ರದ ಯೋಜನೆಗಳ ಮಾಹಿತಿ ಪಡೆಯಿರಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Apr 16, 2024 | 10:51 AM

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಮತದಾರರ ಮನವೊಲಿಕೆಗೆ ನರೇಂದ್ರ ಮೋದಿ(Narendra Modi) ನೇತೃತ್ವದ ಎನ್​ಡಿಎ ಸರ್ಕಾರ, ಬಿಜೆಪಿಯು ಸಾಕಷ್ಟು ಕಸರತ್ತು ಮಾಡುತ್ತಿದೆ. ಇತ್ತೀಚೆಗಷ್ಟೇ ಮೋದಿ ಕರ್ನಾಟಕದ ಜನರ ಮನವೊಲಿಕೆಗಾಗಿ ನಮೋ ಇನ್ ಕನ್ನಡ ಎಂಬ ಟ್ವಿಟ್ಟರ್​ ಖಾತೆಯನ್ನು ಕೂಡ ತೆರೆದಿದ್ದಾರೆ. ಹಾಗೆಯೇ ಇದೀಗ ಶ್ವೇತಪತ್ರ.ಇನ್(Shwetapatra.in )ಮೂಲಕ ಜನರ ಬಳಿಗೆ ತಲುಪುವ ಕೆಲಸ ಮಾಡುತ್ತಿದೆ.

ಕ್ಷೇತ್ರವಾರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಲಾಭವು ಜನರಿಗೆ ಹೇಗೆ ತಲುಪಿದೆ ಎನ್ನುವ ಮಾಹಿತಿಯನ್ನು ಈ ವೆಬ್​ಸೈಟ್​ ಮೂಲಕ ಪರಿಶೀಲಿಸಬಹುದು. ಕ್ಷೇತ್ರವಾರು ಮಾಹಿತಿಯನ್ನು ದಾಖಲಿಸಿ, ನಿಮ್ಮ ಕ್ಷೇತ್ರಕ್ಕೆ ಕೇಂದ್ರದಿಂದ ಎಷ್ಟು ಹಣ ಬಂದಿದೆ, ಯಾವ್ಯಾವ ಯೋಜನೆಗಳಲ್ಲಿ ಎಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿದೆ ಸೇರಿ ಮಾಹಿತಿಗಳನ್ನು ಶ್ವೇತಪತ್ರದ ಮೂಲಕ ಬಿಜೆಪಿ ಬಿಡುಗಡೆ ಮಾಡಿದೆ.

ಪ್ರತಿಪಕ್ಷಗಳು ಮೋದಿ ಸರ್ಕಾರ ಏನು ಮಾಡಿದೆ, ಯಾವ ಯೋಜನೆಗಳನ್ನೂ ಸಮರ್ಪಕವಾಗಿ ಜಾರಿಗೆ ತಂದಿಲ್ಲ ಎಂದು ಹೇಳುತ್ತಿರುವಾಗಲೇ ಬಿಜೆಪಿಯು ಈ ಶ್ವೇತಪತ್ರವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಲೋಕಸಭಾ ಕ್ಷೇತ್ರಗಳು ಹಾಗೂ ಅದರಲ್ಲಿ ಮೋದಿ ಯೋಜನೆಗಳು ಎಷ್ಟು ಮಂದಿಗೆ ತಲುಪಿದೆ, ಯಾವ್ಯಾವ ಯೋಜನೆಯಿಂದ ಜನರು ಎಷ್ಟು ಪ್ರಯೋಜನ ಪಡೆದಿದ್ದಾರೆ ಎಂದು ಇನ್​ಫೋಗ್ರಾಫಿಕ್ಸ್​ ಮೂಲಕ ವಿವರಿಸಲಾಗಿದೆ. ಜತೆಗೆ ಮೋದಿ ನೀಡಿರುವ ಭರವಸೆಯ ವಿಡಿಯೋವನ್ನು ಕೂಡ ಅದರಲ್ಲಿ ಅಪ್​ಲೋಡ್​ ಮಾಡಲಾಗಿದೆ.

ಮತ್ತಷ್ಟು ಓದಿ: ನನ್ನ ನಿರ್ಧಾರ ದೇಶದ ಹಿತಕ್ಕಾಗಿ ಮಾತ್ರ, ಯಾರೂ ಭಯಪಡಬೇಕಿಲ್ಲ: ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂದೇಶ

ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಪಡೆಯಲು ಬಿಜೆಪಿ ಹವಣಿಸುತ್ತಿದೆ. ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 26ರಿಂದ ಶುರುವಾಗಿ ಜೂನ್​ 1ರವರೆಗೆ ಒಟ್ಟು 7 ಹಂತಗಳಲ್ಲಿ ನಡೆಯಲಿದ್ದು, ಜೂನ್ 4ಕ್ಕೆ ಫಲಿತಾಂಶ ಹೊರಬರಲಿದೆ. ಪ್ರಧಾನಿ ಮೋದಿ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಪ್ರಚಾರ ಸಭೆಯನ್ನು ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Tue, 16 April 24

ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್