AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಶ್ವೇತಪತ್ರ ವೆಬ್​ಸೈಟ್​ ಮೂಲಕ ನಿಮ್ಮ ಕ್ಷೇತ್ರ ತಲುಪಿದ ಕೇಂದ್ರದ ಯೋಜನೆಗಳ ಮಾಹಿತಿ ಪಡೆಯಿರಿ

ಕ್ಷೇತ್ರಕ್ಕೆ ಕೇಂದ್ರ ಸರ್ಕಾರದ ಯಾವ್ಯಾವ ಯೋಜನೆಗಳು ತಲುಪಿದೆ ಎನ್ನುವ ಮಾಹಿತಿ ಬೇಕಾ ಹಾಗಾದರೆ ಶ್ವೇಪತ್ರ.ಇನ್ ಲಾಗ್​ಇನ್ ಆಗಿ. ಪ್ರತಿ ರಾಜ್ಯದ ಎಲ್ಲಾ ಕ್ಷೇತ್ರಗಳ ಹೆಸರು ಆ ಕ್ಷೇತ್ರ ಕೇಂದ್ರ ಸರ್ಕಾರದ ಯೋಜನೆಯಿಂದ ಪಡೆದ ಲಾಭ ಎಲ್ಲವನ್ನೂ ವಿವರವಾಗಿ ನೀಡಲಾಗಿದೆ.

ಬಿಜೆಪಿಯ ಶ್ವೇತಪತ್ರ ವೆಬ್​ಸೈಟ್​ ಮೂಲಕ ನಿಮ್ಮ ಕ್ಷೇತ್ರ ತಲುಪಿದ ಕೇಂದ್ರದ ಯೋಜನೆಗಳ ಮಾಹಿತಿ ಪಡೆಯಿರಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Apr 16, 2024 | 10:51 AM

Share

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಮತದಾರರ ಮನವೊಲಿಕೆಗೆ ನರೇಂದ್ರ ಮೋದಿ(Narendra Modi) ನೇತೃತ್ವದ ಎನ್​ಡಿಎ ಸರ್ಕಾರ, ಬಿಜೆಪಿಯು ಸಾಕಷ್ಟು ಕಸರತ್ತು ಮಾಡುತ್ತಿದೆ. ಇತ್ತೀಚೆಗಷ್ಟೇ ಮೋದಿ ಕರ್ನಾಟಕದ ಜನರ ಮನವೊಲಿಕೆಗಾಗಿ ನಮೋ ಇನ್ ಕನ್ನಡ ಎಂಬ ಟ್ವಿಟ್ಟರ್​ ಖಾತೆಯನ್ನು ಕೂಡ ತೆರೆದಿದ್ದಾರೆ. ಹಾಗೆಯೇ ಇದೀಗ ಶ್ವೇತಪತ್ರ.ಇನ್(Shwetapatra.in )ಮೂಲಕ ಜನರ ಬಳಿಗೆ ತಲುಪುವ ಕೆಲಸ ಮಾಡುತ್ತಿದೆ.

ಕ್ಷೇತ್ರವಾರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಲಾಭವು ಜನರಿಗೆ ಹೇಗೆ ತಲುಪಿದೆ ಎನ್ನುವ ಮಾಹಿತಿಯನ್ನು ಈ ವೆಬ್​ಸೈಟ್​ ಮೂಲಕ ಪರಿಶೀಲಿಸಬಹುದು. ಕ್ಷೇತ್ರವಾರು ಮಾಹಿತಿಯನ್ನು ದಾಖಲಿಸಿ, ನಿಮ್ಮ ಕ್ಷೇತ್ರಕ್ಕೆ ಕೇಂದ್ರದಿಂದ ಎಷ್ಟು ಹಣ ಬಂದಿದೆ, ಯಾವ್ಯಾವ ಯೋಜನೆಗಳಲ್ಲಿ ಎಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿದೆ ಸೇರಿ ಮಾಹಿತಿಗಳನ್ನು ಶ್ವೇತಪತ್ರದ ಮೂಲಕ ಬಿಜೆಪಿ ಬಿಡುಗಡೆ ಮಾಡಿದೆ.

ಪ್ರತಿಪಕ್ಷಗಳು ಮೋದಿ ಸರ್ಕಾರ ಏನು ಮಾಡಿದೆ, ಯಾವ ಯೋಜನೆಗಳನ್ನೂ ಸಮರ್ಪಕವಾಗಿ ಜಾರಿಗೆ ತಂದಿಲ್ಲ ಎಂದು ಹೇಳುತ್ತಿರುವಾಗಲೇ ಬಿಜೆಪಿಯು ಈ ಶ್ವೇತಪತ್ರವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಲೋಕಸಭಾ ಕ್ಷೇತ್ರಗಳು ಹಾಗೂ ಅದರಲ್ಲಿ ಮೋದಿ ಯೋಜನೆಗಳು ಎಷ್ಟು ಮಂದಿಗೆ ತಲುಪಿದೆ, ಯಾವ್ಯಾವ ಯೋಜನೆಯಿಂದ ಜನರು ಎಷ್ಟು ಪ್ರಯೋಜನ ಪಡೆದಿದ್ದಾರೆ ಎಂದು ಇನ್​ಫೋಗ್ರಾಫಿಕ್ಸ್​ ಮೂಲಕ ವಿವರಿಸಲಾಗಿದೆ. ಜತೆಗೆ ಮೋದಿ ನೀಡಿರುವ ಭರವಸೆಯ ವಿಡಿಯೋವನ್ನು ಕೂಡ ಅದರಲ್ಲಿ ಅಪ್​ಲೋಡ್​ ಮಾಡಲಾಗಿದೆ.

ಮತ್ತಷ್ಟು ಓದಿ: ನನ್ನ ನಿರ್ಧಾರ ದೇಶದ ಹಿತಕ್ಕಾಗಿ ಮಾತ್ರ, ಯಾರೂ ಭಯಪಡಬೇಕಿಲ್ಲ: ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂದೇಶ

ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಪಡೆಯಲು ಬಿಜೆಪಿ ಹವಣಿಸುತ್ತಿದೆ. ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 26ರಿಂದ ಶುರುವಾಗಿ ಜೂನ್​ 1ರವರೆಗೆ ಒಟ್ಟು 7 ಹಂತಗಳಲ್ಲಿ ನಡೆಯಲಿದ್ದು, ಜೂನ್ 4ಕ್ಕೆ ಫಲಿತಾಂಶ ಹೊರಬರಲಿದೆ. ಪ್ರಧಾನಿ ಮೋದಿ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಪ್ರಚಾರ ಸಭೆಯನ್ನು ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Tue, 16 April 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ