AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಶ್ವೇತಪತ್ರ ವೆಬ್​ಸೈಟ್​ ಮೂಲಕ ನಿಮ್ಮ ಕ್ಷೇತ್ರ ತಲುಪಿದ ಕೇಂದ್ರದ ಯೋಜನೆಗಳ ಮಾಹಿತಿ ಪಡೆಯಿರಿ

ಕ್ಷೇತ್ರಕ್ಕೆ ಕೇಂದ್ರ ಸರ್ಕಾರದ ಯಾವ್ಯಾವ ಯೋಜನೆಗಳು ತಲುಪಿದೆ ಎನ್ನುವ ಮಾಹಿತಿ ಬೇಕಾ ಹಾಗಾದರೆ ಶ್ವೇಪತ್ರ.ಇನ್ ಲಾಗ್​ಇನ್ ಆಗಿ. ಪ್ರತಿ ರಾಜ್ಯದ ಎಲ್ಲಾ ಕ್ಷೇತ್ರಗಳ ಹೆಸರು ಆ ಕ್ಷೇತ್ರ ಕೇಂದ್ರ ಸರ್ಕಾರದ ಯೋಜನೆಯಿಂದ ಪಡೆದ ಲಾಭ ಎಲ್ಲವನ್ನೂ ವಿವರವಾಗಿ ನೀಡಲಾಗಿದೆ.

ಬಿಜೆಪಿಯ ಶ್ವೇತಪತ್ರ ವೆಬ್​ಸೈಟ್​ ಮೂಲಕ ನಿಮ್ಮ ಕ್ಷೇತ್ರ ತಲುಪಿದ ಕೇಂದ್ರದ ಯೋಜನೆಗಳ ಮಾಹಿತಿ ಪಡೆಯಿರಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Apr 16, 2024 | 10:51 AM

Share

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಮತದಾರರ ಮನವೊಲಿಕೆಗೆ ನರೇಂದ್ರ ಮೋದಿ(Narendra Modi) ನೇತೃತ್ವದ ಎನ್​ಡಿಎ ಸರ್ಕಾರ, ಬಿಜೆಪಿಯು ಸಾಕಷ್ಟು ಕಸರತ್ತು ಮಾಡುತ್ತಿದೆ. ಇತ್ತೀಚೆಗಷ್ಟೇ ಮೋದಿ ಕರ್ನಾಟಕದ ಜನರ ಮನವೊಲಿಕೆಗಾಗಿ ನಮೋ ಇನ್ ಕನ್ನಡ ಎಂಬ ಟ್ವಿಟ್ಟರ್​ ಖಾತೆಯನ್ನು ಕೂಡ ತೆರೆದಿದ್ದಾರೆ. ಹಾಗೆಯೇ ಇದೀಗ ಶ್ವೇತಪತ್ರ.ಇನ್(Shwetapatra.in )ಮೂಲಕ ಜನರ ಬಳಿಗೆ ತಲುಪುವ ಕೆಲಸ ಮಾಡುತ್ತಿದೆ.

ಕ್ಷೇತ್ರವಾರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಲಾಭವು ಜನರಿಗೆ ಹೇಗೆ ತಲುಪಿದೆ ಎನ್ನುವ ಮಾಹಿತಿಯನ್ನು ಈ ವೆಬ್​ಸೈಟ್​ ಮೂಲಕ ಪರಿಶೀಲಿಸಬಹುದು. ಕ್ಷೇತ್ರವಾರು ಮಾಹಿತಿಯನ್ನು ದಾಖಲಿಸಿ, ನಿಮ್ಮ ಕ್ಷೇತ್ರಕ್ಕೆ ಕೇಂದ್ರದಿಂದ ಎಷ್ಟು ಹಣ ಬಂದಿದೆ, ಯಾವ್ಯಾವ ಯೋಜನೆಗಳಲ್ಲಿ ಎಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿದೆ ಸೇರಿ ಮಾಹಿತಿಗಳನ್ನು ಶ್ವೇತಪತ್ರದ ಮೂಲಕ ಬಿಜೆಪಿ ಬಿಡುಗಡೆ ಮಾಡಿದೆ.

ಪ್ರತಿಪಕ್ಷಗಳು ಮೋದಿ ಸರ್ಕಾರ ಏನು ಮಾಡಿದೆ, ಯಾವ ಯೋಜನೆಗಳನ್ನೂ ಸಮರ್ಪಕವಾಗಿ ಜಾರಿಗೆ ತಂದಿಲ್ಲ ಎಂದು ಹೇಳುತ್ತಿರುವಾಗಲೇ ಬಿಜೆಪಿಯು ಈ ಶ್ವೇತಪತ್ರವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಲೋಕಸಭಾ ಕ್ಷೇತ್ರಗಳು ಹಾಗೂ ಅದರಲ್ಲಿ ಮೋದಿ ಯೋಜನೆಗಳು ಎಷ್ಟು ಮಂದಿಗೆ ತಲುಪಿದೆ, ಯಾವ್ಯಾವ ಯೋಜನೆಯಿಂದ ಜನರು ಎಷ್ಟು ಪ್ರಯೋಜನ ಪಡೆದಿದ್ದಾರೆ ಎಂದು ಇನ್​ಫೋಗ್ರಾಫಿಕ್ಸ್​ ಮೂಲಕ ವಿವರಿಸಲಾಗಿದೆ. ಜತೆಗೆ ಮೋದಿ ನೀಡಿರುವ ಭರವಸೆಯ ವಿಡಿಯೋವನ್ನು ಕೂಡ ಅದರಲ್ಲಿ ಅಪ್​ಲೋಡ್​ ಮಾಡಲಾಗಿದೆ.

ಮತ್ತಷ್ಟು ಓದಿ: ನನ್ನ ನಿರ್ಧಾರ ದೇಶದ ಹಿತಕ್ಕಾಗಿ ಮಾತ್ರ, ಯಾರೂ ಭಯಪಡಬೇಕಿಲ್ಲ: ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂದೇಶ

ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಪಡೆಯಲು ಬಿಜೆಪಿ ಹವಣಿಸುತ್ತಿದೆ. ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 26ರಿಂದ ಶುರುವಾಗಿ ಜೂನ್​ 1ರವರೆಗೆ ಒಟ್ಟು 7 ಹಂತಗಳಲ್ಲಿ ನಡೆಯಲಿದ್ದು, ಜೂನ್ 4ಕ್ಕೆ ಫಲಿತಾಂಶ ಹೊರಬರಲಿದೆ. ಪ್ರಧಾನಿ ಮೋದಿ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಪ್ರಚಾರ ಸಭೆಯನ್ನು ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Tue, 16 April 24

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ