AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election 2024: ಕೈಕೊಟ್ಟ ಮತಗಟ್ಟೆ ಸಿಬ್ಬಂದಿ ಆರೋಗ್ಯ, ಕೆಲವೆಡೆ ಕೆಟ್ಟು ಹೋದ ಇವಿಎಂ ಇಲ್ಲಿದೆ ಮತದಾನದ ಸ್ಥಿತಿಗತಿ

ಉತ್ತರಾಖಂಡದ ಐದು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ, ಇದರಲ್ಲಿ ಪೌರಿ-ಗಢವಾಲ್, ತಿಹ್ರಿ, ಅಲ್ಮೋರಾ, ಹರಿದ್ವಾರ ಮತ್ತು ನೈನಿತಾಲ್ ಸ್ಥಾನಗಳು ಸೇರಿವೆ. ಆದರೆ, ಮತದಾನ ಆರಂಭವಾಗುತ್ತಿದ್ದಂತೆಯೇ ವಿವಿಧ ಬೂತ್‌ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡವು.

Lok Sabha Election 2024: ಕೈಕೊಟ್ಟ ಮತಗಟ್ಟೆ ಸಿಬ್ಬಂದಿ ಆರೋಗ್ಯ, ಕೆಲವೆಡೆ ಕೆಟ್ಟು ಹೋದ ಇವಿಎಂ ಇಲ್ಲಿದೆ ಮತದಾನದ ಸ್ಥಿತಿಗತಿ
ಮತದಾನImage Credit source: Jagran
ನಯನಾ ರಾಜೀವ್
|

Updated on: Apr 19, 2024 | 9:01 AM

Share

ಪೌರಿ-ಗಢವಾಲ್, ತೆಹ್ರಿ, ಅಲ್ಮೋರಾ, ಹರಿದ್ವಾರ ಮತ್ತು ನೈನಿತಾಲ್ ಸೇರಿದಂತೆ ಉತ್ತರಾಖಂಡ(Uttarakhand)ದ ಐದು ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ(Voting) ನಡೆಯುತ್ತಿದೆ. ಆದರೆ, ಮತದಾನ ಆರಂಭವಾಗುತ್ತಿದ್ದಂತೆಯೇ ವಿವಿಧ ಬೂತ್‌ಗಳಿಂದ ಸಮಸ್ಯೆಗಳು ಬೆಳಕಿಗೆ ಬರಲಾರಂಭಿಸಿದವು. ಈ ಮಧ್ಯೆ ರಾಮನಗರ ಜಿಲ್ಲೆಯ ಶಿವಪುರ ಬೈಲಜುಡಿಯಲ್ಲಿ 3 ಮತಗಟ್ಟೆ ಅಧಿಕಾರಿಗಳ ಆರೋಗ್ಯ ಹಠಾತ್ ಹದಗೆಟ್ಟಿತ್ತು.

ಇದಾದ ಬಳಿಕ ಅವರ ಜಾಗಕ್ಕೆ 3 ಹೊಸ ಅಧಿಕಾರಿಗಳನ್ನು ಕರೆಸಲಾಗಿತ್ತು. ಏತನ್ಮಧ್ಯೆ, ಅಲ್ಮೋರಾ ಲೋಕಸಭಾ ಕ್ಷೇತ್ರದ ಬೂತ್ ಸಂಖ್ಯೆ 107 ಖಾತ್ಯಾರಿಯಲ್ಲಿ ಇವಿಎಂ ಯಂತ್ರದ ದೋಷದಿಂದಾಗಿ ಮತದಾನ ತಡವಾಗಿ ಪ್ರಾರಂಭವಾಯಿತು. ಸಲ್ಟ್​ ತಹಸೀಲ್​ನ ಮೂರು ಬೂತ್​ಗಳಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರು ತಮ್ಮ ಕುಟುಂಬದೊಂದಿಗೆ ಕೋಟ್‌ದ್ವಾರದ ಸಿತಾಬ್‌ಪುರ ಶಾಲೆಯ ಮತಗಟ್ಟೆಗೆ ಮತ ಚಲಾಯಿಸಲು ಆಗಮಿಸಿದರು. ಇದೇ ವೇಳೆ ಅಭಿವೃದ್ಧಿ ಹೆಸರಲ್ಲಿ ಮತ ನೀಡಿ ಎಂದು ಮನವಿ ಮಾಡಿದರು. ಲೋಕಸಭೆಯ ಗರ್ವಾಲ್ ಸಂಸದೀಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಣೇಶ್ ಗೋಡಿಯಾಲ್ ಅವರು ಸರ್ಕಾರಿ ಪ್ರಾಥಮಿಕ ಶಾಲೆ ಭಟ್ಕೋಟ್‌ನಲ್ಲಿರುವ ತಮ್ಮ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.

ಮತ್ತಷ್ಟು ಓದಿ: Lok Sabha Elections 2024: ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಅಮೂಲ್ಯ, ಪ್ರತಿ ಧ್ವನಿಯೂ ಮುಖ್ಯ: ನರೇಂದ್ರ ಮೋದಿ

ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಉತ್ತರ ಪ್ರದೇಶದಲ್ಲಿ ಎಂಟು, ಪಶ್ಚಿಮ ಬಂಗಾಳದಲ್ಲಿ ಮೂರು, ಮಹಾರಾಷ್ಟ್ರದಲ್ಲಿ ಐದು, ಛತ್ತೀಸ್‌ಗಢದಲ್ಲಿ ಒಂದು ಮತ್ತು ಮಣಿಪುರದಲ್ಲಿ ಎರಡು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ತಮಿಳುನಾಡಿನಲ್ಲಿ 39 ಲೋಕಸಭಾ ಸ್ಥಾನಗಳಿದ್ದು, ಇಲ್ಲಿನ ಎಲ್ಲ ಸ್ಥಾನಗಳಿಗೂ ಏಕಕಾಲಕ್ಕೆ ಚುನಾವಣೆ ನಡೆಯುತ್ತಿದೆ. ಇದಲ್ಲದೆ, ಉತ್ತರಾಖಂಡದ ಐದು, ಅರುಣಾಚಲ ಪ್ರದೇಶದ ಎರಡು, ಅಂಡಮಾನ್‌ನ ಒಂದು ಮತ್ತು ಲಕ್ಷದ್ವೀಪದ ಒಂದು ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ