AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election 2024: ಪಂಜಾಬ್​ನಲ್ಲಿ ಏಕಾಂಗಿ ಸ್ಪರ್ಧೆ: 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಆಮ್​ ಆದ್ಮಿ ಪಕ್ಷ

ಆಮ್​ ಆದ್ಮಿ ಪಕ್ಷವು ಮುಂಬರುವ ಲೋಕಸಭೆ ಚುನಾವಣೆಗೆ ಪಂಜಾಬ್​ನಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರು ಹಾಗೂ ಸಚಿವರ ಹೆಸರುಗಳಿವೆ.

Lok Sabha Election 2024: ಪಂಜಾಬ್​ನಲ್ಲಿ ಏಕಾಂಗಿ ಸ್ಪರ್ಧೆ: 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಆಮ್​ ಆದ್ಮಿ ಪಕ್ಷ
ಅರವಿಂದ್ ಕೇಜ್ರಿವಾಲ್Image Credit source: The Economic Times
ನಯನಾ ರಾಜೀವ್
|

Updated on: Mar 14, 2024 | 2:05 PM

Share

ಆಮ್ ಆದ್ಮಿ ಪಕ್ಷ (ಎಎಪಿ) ಲೋಕಸಭಾ ಚುನಾವಣೆಗೆ ಪಂಜಾಬ್‌ನಿಂದ 8 ಅಭ್ಯರ್ಥಿಗಳ (ಎಎಪಿ ಅಭ್ಯರ್ಥಿಗಳ ಪಟ್ಟಿ) ಪಟ್ಟಿಯನ್ನು ಬಿಡುಗಡೆ ಮಾಡಿದೆ . ಆಮ್ ಆದ್ಮಿ ಪಕ್ಷವು ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಅಮೃತಸರದಿಂದ ಕುಲದೀಪ್ ಸಿಂಗ್ ಧಲಿವಾಲ್, ಖದೂರ್ ಸಾಹಿಬ್‌ನಿಂದ ಲಾಲ್ಜಿತ್ ಸಿಂಗ್ ಭುಲ್ಲರ್, ಜಲಂಧರ್‌ನಿಂದ ಸುಶೀಲ್ ಕುಮಾರ್ ರಿಂಕು, ಫತೇಘರ್ ಸಾಹಿಬ್‌ನಿಂದ ಗುರುಪ್ರೀತ್ ಸಿಂಗ್ ಜಿಪಿ, ಫರೀದ್‌ಕೋಟ್‌ನಿಂದ ಕರಮ್‌ಜೀತ್ ಅನ್ಮೋಲ್, ಬಟಿಂಡಾದಿಂದ ಗುರ್ಮೀತ್ ಸಿಂಗ್ ಖುಡಿಯಾ, ಗುರ್ಮೀತ್ ಸಿಂಗ್ ಖುಡಿಯಾ ವೈದ್ಯ ಬಲ್ಬೀರ್ ಸಿಂಗ್ ಅವರಿಗೆ ಪಟಿಯಾಲ ಮತ್ತು ಮೀತ್ ಮತ್ತು ಪಟಿಯಾಲದಿಂದ ಟಿಕೆಟ್ ನೀಡಲಾಗಿದೆ.

ಆಮ್​ ಆದ್ಮಿ ಪಕ್ಷವು ಮೊದಲ ಪಟ್ಟಿಯಲ್ಲಿ ಟಿಕೆಟ್​ ನೀಡಿರುವ ಅಭ್ಯರ್ಥಿಗಳೆಂದರೆ ಪಂಜಾಬ್​ನ ಹಾಲಿ ಶಾಸಕರು ಹಾಗೂ ಸಚಿವರು. ದೆಹಲಿಯ ಮಾದರಿಯಲ್ಲಿ ಪಂಜಾಬ್​ನಲ್ಲಿಯೂ ಆಮ್​ ಆದ್ಮಿ ಪಕ್ಷ ಹೆಚ್ಚಿನ ಶಾಸಕರನ್ನು ಕಣಕ್ಕಿಳಿಸಿದೆ. ಆಮ್​ ಆದ್ಮಿ ಪಕ್ಷವು ಪಂಜಾಬ್​ನಲ್ಲಿ ಇಂಡಿಯಾ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ. ಪಂಜಾಬ್​ನಲ್ಲಿ 13 ಲೋಕಸಭಾ ಕ್ಷೇತ್ರಗಳಿವೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಇಲ್ಲಿಂದ ಒಂದು ಸ್ಥಾನವನ್ನು ಗೆದ್ದಿತ್ತು. ಆಗ ಭಗವಂತ್ ಮಾನ್ ಸಂಗ್ರೂರ್​ನಿಂದ ಗೆದ್ದಿದ್ದರು.

ಆದಾಗ್ಯೂ 2022ರ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷದ ವಿಜಯದ ಬಳಿಕ, ಭಗವಂತ್​ ಮಾನ್​ ರಾಜ್ಯದ ಮುಖ್ಯಮಂತ್ರಿಯಾದರು. ಬಳಿಕ ಲೋಕಸಭೆಗೆ ರಾಜೀನಾಮೆ ನೀಡಿದರು. 2019ರ ಲೋಕಸಭೆ ಚುನಾವಣೆಯಲ್ಲಿ ಯುಪಿಎ 8 ಸ್ಥಾನಗಳನ್ನು ಎನ್​ಡಿಎ 4 ಸ್ಥಾನಗಳನ್ನು ಗೆದ್ದಿತ್ತು.

ಮತ್ತಷ್ಟು ಓದಿ: ದೆಹಲಿ: ಆಮ್​ಆದ್ಮಿ ಪಕ್ಷ, ಕಾಂಗ್ರೆಸ್ ನಡುವೆ ಮೈತ್ರಿ ಬಹುತೇಕ ಖಚಿತ, 4-3 ಸೂತ್ರ ಆಧರಿಸಿ ಮಾತುಕತೆ

ದೆಹಲಿ-ಗುಜರಾತ್​ ಸೇರಿದಂತೆ 4 ರಾಜ್ಯಗಳಲ್ಲಿ ಮೈತ್ರಿ ಪಂಜಾಬ್​ನಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ನಡುವೆ ಮೈತ್ರಿ ಇಲ್ಲದಿರಬಹುದು, ಆದರೆ ಎರಡೂ ಪಕ್ಷಗಳು ನಾಲ್ಕು ರಾಜ್ಯಗಳಲ್ಲಿ ಒಟ್ಟಾಗಿ ಚುನಾವಣೆಯನ್ನು ಎದುರಿಸುತ್ತಿವೆ. ದೆಹಲಿಯ 7 ಲೋಕಸಭಾ ಕ್ಷೇತ್ರಗಳ ಪೈಕಿ 3-3ರಲ್ಲಿ ಆಮ್​ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸ್ಪರ್ಧಿಸಿವೆ. ಅದೇ ಸಮಯದಲ್ಲಿ ಆಮ್ ಆದ್ಮಿ ಪಕ್ಷ ಗುಜರಾತ್​ನಲ್ಲಿ 2 ಸ್ಥಾನಗಳನ್ನು, ಹರ್ಯಾಣದಲ್ಲಿ ಒಂದು ಸ್ಥಾನವನ್ನು ಪಡೆದುಕೊಂಡಿದೆ. ಗೋವಾದಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸ್​ ಅಭ್ಯರ್ಥಿಗೆ ಬೆಂಬಲ ಘೋಷಿಸಿದೆ.

ಲೋಕಸಭಾ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗಲಿದೆ

17ನೇ ಲೋಕಸಭಾ ಅವಧಿ ಮೇ ತಿಂಗಳಿನಲ್ಲಿ ಕೊನೆಗೊಳ್ಳಲಿದೆ. ಶೀಘ್ರದಲ್ಲೇ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಕೂಡ 7 ಹಂತಗಳಲ್ಲಿ ಚುನಾವಣೆ ನಡೆಸಬಹುದು ಎನ್ನಲಾಗುತ್ತದೆ. 2019ರಲ್ಲಿ ಲೋಕಸಭಾ ಚುನಾವಣೆ ಏಪ್ರಿಲ್ 11 ಮತ್ತು ಮೇ 19ರ ನಡುವೆ 7 ಹಂತಗಳಲ್ಲಿ ನಡೆದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ