AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎನ್​​ಡಿಐಎಗೆ ಮತ್ತೊಂದು ಹಿನ್ನಡೆ; ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಆರ್‌ಎಲ್‌ಡಿ ಪಕ್ಷ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಐಎನ್​ಡಿಐಎಗೆ ಮತ್ತೊಂದು ಹಿನ್ನಡೆಯಾಗಿದೆ. ಆರ್‌ಎಲ್‌ಡಿ ಪಕ್ಷ ಎನ್​ಡಿಎ ಸೇರ್ಪಡೆಯಾಗಿದೆ. ಚುನಾವಣೆ ಹೊಸ್ತಿಲಲ್ಲೇ ಐಎನ್​ಡಿಐ ಮೈತ್ರಿಕೂಟಕ್ಕೆ ಮಿತ್ರ ಪಕ್ಷಗಳು ಶಾಕ್ ಮೇಲೆ ಶಾಕ್ ನೀಡುತ್ತಿವೆ. ಹೊಂದಾಣಿಕೆ ಕೊರತೆ, ಸೀಟು ಹಂಚಿಕೆಯಲ್ಲಿ ಗೊಂದಲ, ನಾಯಕತ್ವದಲ್ಲಿ ಹೊಂದಲ ಇತ್ಯಾದಿ ಕಾರಣಗಳಿಂದ ಮಿತ್ರ ಪಕ್ಷಗಳು ಒಂದೊಂದಾಗಿಯೇ ಇಂಡಿಯಾ ಮೈತ್ರಿಕೂಟದಿಂದ ಹೊರಬರುತ್ತಿದೆ.

ಐಎನ್​​ಡಿಐಎಗೆ ಮತ್ತೊಂದು ಹಿನ್ನಡೆ; ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಆರ್‌ಎಲ್‌ಡಿ ಪಕ್ಷ
ಐಎನ್​​ಡಿಐಗೆ ಮತ್ತೊಂದು ಹಿನ್ನಡೆ; ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಆರ್‌ಎಲ್‌ಡಿ ಪಕ್ಷ
Rakesh Nayak Manchi
|

Updated on:Mar 02, 2024 | 11:08 PM

Share

ನವದೆಹಲಿ, ಮಾ.2: ಆರ್‌ಎಲ್‌ಡಿ (Rashtriya Lok Dal-RLD) ಪಕ್ಷ ಎನ್​ಡಿಎ (NDA) ಸೇರ್ಪಡೆಯಾಗುವ ಮೂಲಕ ಲೋಕಸಭೆ ಚುನಾವಣೆ ಸಮೀಪದಲ್ಲಿ ಐಎನ್​ಡಿಐಎಗೆ ಮತ್ತೊಂದು ಹಿನ್ನಡೆಯಾದಂತಾಗಿದೆ. ಪಕ್ಷದ ಅಧ್ಯಕ್ಷ ಜಯಂತ್ ಚೌಧರಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಅವರನ್ನು ಭೇಟಿಯಾಗಿ ಮಾತುಕತೆಯೂ ನಡೆಸಿದ್ದಾರೆ.

ಇಂದು ದೆಹಲಿಯಲ್ಲಿ ಬಿಜೆಪಿ ಚಾಣಕ್ಯ ಎಂದೇ ಕರೆಯಲ್ಪಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಜಯಂತ್ ಚೌಧರಿ ಅವರು ಸುದೀರ್ಘ ಮಾತುಕತೆ ನಡೆಸಿದ್ದು, ಎನ್​ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾಗಲು ಒಪ್ಪಿಗೆ ಸೂಚಿಸಿದ್ದಾರೆ. ಬಳಿಕ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಆರ್​ಎಲ್​ಡಿ ಪಕ್ಷ ಎನ್​ಡಿಎ ಸೇರ್ಪಡೆ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಜೆಪಿ ನಡ್ಡಾ, ಇಂದು ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಆರ್​ಎಲ್​ಡಿ ಪಕ್ಷದ ಅಧ್ಯಕ್ಷ ಜಯಂತ್ ಚೌಧರಿ ಅವರೊಂದಿಗೆ ಸಭೆ ನಡೆಯಿತು. ಎನ್‌ಡಿಎ ಕುಟುಂಬಕ್ಕೆ ಸೇರುವ ಜಯಂತ್ ನಿರ್ಧಾರವನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ ಮತ್ತು ಉತ್ತರ ಪ್ರದೇಶದ ಅಭಿವೃದ್ಧಿಯಲ್ಲಿ ನೀವು ಪ್ರಮುಖ ಕೊಡುಗೆ ನೀಡುತ್ತೀರಿ ಎಂದು ಹೇಳಿದರು. ಅಲ್ಲದೆ, ಈ ಬಾರಿ ಎನ್‌ಡಿಎ 400 ದಾಟುತ್ತದೆ ಎಂದಿದ್ದಾರೆ.

ಜೆಪಿ ನಡ್ಡಾ ಟ್ವೀಟ್

ರಾಷ್ಟ್ರೀಯ ಲೋಕದಳದ ಅಧ್ಯಕ್ಷರಾದ ಜಯಂತ್ ಅವರನ್ನು ನಾನು NDA ಕುಟುಂಬಕ್ಕೆ ಸ್ವಾಗತಿಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೀತಿಗಳಲ್ಲಿ ವಿಶ್ವಾಸವನ್ನು ಇಟ್ಟುಕೊಂಡಿದ್ದಾರೆ. ಅವರು ಎನ್​ಡಿಎಗೆ ಸೇರ್ಪಡೆಯಿಂದ ರೈತರು, ಬಡವರು ಮತ್ತು ವಂಚಿತ ವರ್ಗಗಳ ಉನ್ನತಿಗಾಗಿ ತೊಟ್ಟಿರುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಬಲ ಸಿಕ್ಕಂತಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 400 ದಾಟಲಿದೆ ಎಂದು ಅಮಿತ್ ಶಾ ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅಮಿತ್ ಶಾ ಟ್ವೀಟ್

ಐಎನ್​ಡಿಐಎ ಜೊತೆಗಿನ ಮೈತ್ರಿ ಮುರಿದುಕೊಂಡ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಳ್ಳುವುದಾಗಿ ಫೆಬ್ರವರಿ 13 ರಂದು ಘೋಷಿಸಿತ್ತು. ಜನರಿಗೆ ಒಳ್ಳೆಯದನ್ನು ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಜಯಂತ್ ಚೌಧರಿ ಹೇಳಿದ್ದರು. ಪಕ್ಷದ ಎಲ್ಲಾ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಮಾತನಾಡಿದ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: What India Thinks Today: ಬಿಜೆಪಿ 370, ಎನ್‌ಡಿಎ 400 ಹೇಗಿದೆ ಚಾಣಕ್ಯನ ಪ್ಲ್ಯಾನ್​​? ಟಿವಿ9 ವೇದಿಕೆಯಲ್ಲಿ ಅಮಿತ್​​​ ಶಾ

RLD ಸಾಂಪ್ರದಾಯಿಕವಾಗಿ ರೈತರ ಪಕ್ಷವಾಗಿದ್ದು, ಜಾಟ್ ಸಮುದಾಯದ ಬೆಂಬಲವಿದೆ. ಜಯಂತ್ ಚೌಧರಿ ಅವರು ಉತ್ತರ ಭಾರತದ ಪ್ರಬಲ ರೈತ ನಾಯಕ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ. ಆರ್​ಎಲ್​ಡಿ ಪಕ್ಷವನ್ನು ಸ್ಥಾಪಿಸಿದವರು ಚರಣ್ ಸಿಂಗ್ ಅವರ ಮಗ ಅಜಿತ್ ಸಿಂಗ್. ಪಶ್ಚಿಮ ಉತ್ತರ ಪ್ರದೇಶದ ಸುಮಾರು 15 ಜಿಲ್ಲೆಗಳಾದ ಬಾಗ್‌ಪತ್, ಮುಜಾಫರ್‌ನಗರ, ಶಾಮ್ಲಿ, ಮೀರತ್, ಬಿಜ್ನೋರ್, ಘಾಜಿಯಾಬಾದ್, ಹಾಪುರ್, ಬುಲಂದ್‌ಶಹರ್, ಮಥುರಾ, ಅಲಿಘರ್, ಹತ್ರಾಸ್, ಆಗ್ರಾ ಮತ್ತು ಮೊರಾದಾಬಾದ್​ನಲ್ಲಿ ಜನಪ್ರಿಯತೆಯನ್ನು ಹೊಂದಿದೆ.

ಆರ್​ಎಲ್​ಡಿ ಸೇರ್ಪಡೆಯಿಂದ ಎನ್​ಡಿಎಗೆ ಏನು ಲಾಭ?

RLD ಬಹಳ ಹಿಂದಿನಿಂದಲೂ ಪ್ರಬಲವಾದ ಪಕ್ಷವಾಗಿದೆ. ಈ ಪಕ್ಷದ ಸಾಂಪ್ರದಾಯಿಕ ಮತಬ್ಯಾಂಕ್​ಗಳಾದ ರೈತರು, ಮುಸ್ಲಿ, ಯಾದವ್, ಜಾಟ್, ಗುಜ್ಜರ್, ರಜಪೂತ ಸಮುದಾಯಗಳು ಬಿಜೆಪಿಯನ್ನು ಅಥವಾ ಎನ್​ಡಿಎಯನ್ನು ಬೆಂಬಲಿಸುವುದಿಲ್ಲ. ಅದಾಗ್ಯೂ, ಈ ಪಕ್ಷ ಸೇರ್ಪಡೆಯಿಂದ ಎನ್‌ಡಿಎಗೆ ಆಗುವ ಲಾಭವೇನೆಂದು ನೋಡುವುದಾರೆ; ಐಎನ್​ಡಿಐ ಮೈತ್ರಿಕೂಟವನ್ನು ಒಡೆದಂತಾಗಲಿದೆ. ವಿಪಕ್ಷ ಮೈತ್ರಿಕೂಟದ ಬಲ ಮತ್ತಷ್ಟು ಕಡಿಮೆಯಾಗುತ್ತದೆ. ಉತ್ತರ ಭಾರತದಲ್ಲಿ ನಿತೀಶ್ ಕುಮಾರ್ ನಂತರ ಐಎನ್​ಡಿಐಎ ತೊರೆದ ಜಯಂತ್ ಚೌಧರಿ ಎರಡನೇ ಪ್ರಬಲ ನಾಯಕರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Sat, 2 March 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!