AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ರಾಹುಲ್​ ಗಾಂಧಿ ಭೇಟಿಗೂ ಮುನ್ನ ವೇದಿಕೆಯಲ್ಲಿದ್ದ ಕಾಂಗ್ರೆಸ್​ ಪೋಸ್ಟರ್​ನಲ್ಲಿತ್ತು ಬಿಜೆಪಿ ಅಭ್ಯರ್ಥಿಯ ಚಿತ್ರ

ಮಧ್ಯಪ್ರದೇಶದ ಮಾಂಡ್ಲಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ರ‍್ಯಾಲಿಗೂ ಮುನ್ನ ಮುಖ್ಯ ವೇದಿಕೆಯಲ್ಲಿ ಹಾಕಲಾಗಿದ್ದ ಪೋಸ್ಟರ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಚಿತ್ರವಿತ್ತು. ಅದರಲ್ಲಿ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಫಗ್ಗನ್ ಸಿಂಗ್ ಕುಲಸ್ತೆ ಹಾಗೂ ಇತರ ಕೆಲವು ಕಾಂಗ್ರೆಸ್ ನಾಯಕರ ಚಿತ್ರವಿತ್ತು.

ಮಧ್ಯಪ್ರದೇಶ: ರಾಹುಲ್​ ಗಾಂಧಿ ಭೇಟಿಗೂ ಮುನ್ನ ವೇದಿಕೆಯಲ್ಲಿದ್ದ ಕಾಂಗ್ರೆಸ್​ ಪೋಸ್ಟರ್​ನಲ್ಲಿತ್ತು ಬಿಜೆಪಿ ಅಭ್ಯರ್ಥಿಯ ಚಿತ್ರ
ನಯನಾ ರಾಜೀವ್
|

Updated on: Apr 09, 2024 | 8:11 AM

Share

ಮಧ್ಯಪ್ರದೇಶದ ಮಾಂಡ್ಲಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ರ‍್ಯಾಲಿಗೂ ಮುನ್ನ ಮುಖ್ಯ ವೇದಿಕೆಯಲ್ಲಿ ಹಾಕಲಾಗಿದ್ದ ಪೋಸ್ಟರ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಚಿತ್ರವಿತ್ತು. ಅದರಲ್ಲಿ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಫಗ್ಗನ್ ಸಿಂಗ್ ಕುಲಸ್ತೆ ಹಾಗೂ ಇತರ ಕೆಲವು ಕಾಂಗ್ರೆಸ್ ನಾಯಕರ ಚಿತ್ರವಿತ್ತು.

ರಾಹುಲ್​ ಗಾಂಧಿ ಭೇಟಿಗೂ ಮುನ್ನ ಹೊರಬಿದ್ದ ವಿಡಿಯೋವೊಂದು ಕಾಂಗ್ರೆಸ್​ಗೆ ಮುಜುಗರ ಉಂಟು ಮಾಡಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ವೇದಿಕೆಯಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್​ನಿಂದ ಕೇಂದ್ರ ಸಚಿವ ಫಗ್ಗನ್ ಸಿಂಗ್ ಅವರ ಫೋಟೊವನ್ನು ಮರೆಮಾಚುತ್ತಿರುವುದು ಕಂಡು ಬಂದಿದೆ.

ತಪ್ಪಿನ ಅರಿವಾದ ಬಳಿಕ ಅದೇ ಜಾಗದಲ್ಲಿ ಕಾಂಗ್ರೆಸ್​ ಶಾಸಕ ರಜನೀಶ್​ ಹರ್ವಂಶ್ ಅವರ ಚಿತ್ರ ಹಾಕಲಾಗಿದೆ. ಕುಲಸ್ತೆ ಅವರ ಚಿತ್ರ ಮರೆಮಾಡಲಾಗಿದೆ. ಈ ಬಾರಿ ಮಂಡ್ಲಾದಿಂದ ಓಂಕಾರ್ ಸಿಂಗ್ ಅವರಿಗೆ ಕಾಂಗ್ರೆಸ್​ ಟಿಕೆಟ್ ನೀಡಿದೆ, ಒಂದು ದಿನ ಮೊದಲು ಪ್ರಧಾನಿ ಮೋದಿ ಅವರು ಜಬಲ್​ಪುರದಲ್ಲಿ ಮೆಗಾ ರೋಡ್​ ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದರು, ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ಮತ್ತಷ್ಟು ಓದಿ: ಈ ಬಾರಿಯ ಚುನಾವಣೆಯಲ್ಲೂ ಕಾಂಗ್ರೆಸ್​ ಸೋತರೆ ರಾಹುಲ್​ ಗಾಂಧಿ ಏನು ಮಾಡಬೇಕು? ಪ್ರಶಾಂತ್​ ಕಿಶೋರ್​ ಸಲಹೆ ಏನು?

ಇದು ಕಾಂಗ್ರೆಸ್​ ಗಂಭೀರತೆ ಎಷ್ಟಿದೆ ಎಂಬುದನ್ನು ತೋರಿಸುತ್ತದೆ, ಅವರು ತಮ್ಮ ಅಭ್ಯರ್ಥಿಯ ಭಾವಚಿತ್ರದ ಬದಲು ಬಿಜೆಪಿ ಅಭ್ಯರ್ಥಿಯ ಭಾವಚಿತ್ರ ಅಳವಡಿಸಿದ್ದಾರೆ. ಆ ಮೂಲಕ ಚುನಾವಣೆಯ ಮುನ್ನವೇ ಸೋಲು ಒಪ್ಪಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದೆ. ನಂತರ ಏಪ್ರಿಲ್ 26ರಂದು, ಮೇ 7 ಹಾಗೂ ಮೇ 13ರಂದು ನಡೆಯಲಿದೆ. ಮಧ್ಯಪ್ರದೇಶವು ಒಟ್ಟು 29 ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ಸಂಸತ್ತಿನ ಪ್ರಾತಿನಿಧ್ಯದ ವಿಷಯದಲ್ಲಿ ಆರನೇ ಅತಿದೊಡ್ಡ ರಾಜ್ಯವಾಗಿದೆ. ಈ ಪೈಕಿ 10 ಸ್ಥಾನಗಳು ಎಸ್​ಸಿ ಹಾಗೂ ಎಸ್​ಟಿ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಉಳಿದ 19 ಸ್ಥಾನಗಳು ಮೀಸಲಿರುವುದಿಲ್ಲ.

2019ರ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ 29ರಲ್ಲಿ 28 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದ್ದರೆ, ಕಾಂಗ್ರೆಸ್​ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ