AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ರಾಹುಲ್​ ಗಾಂಧಿ ಭೇಟಿಗೂ ಮುನ್ನ ವೇದಿಕೆಯಲ್ಲಿದ್ದ ಕಾಂಗ್ರೆಸ್​ ಪೋಸ್ಟರ್​ನಲ್ಲಿತ್ತು ಬಿಜೆಪಿ ಅಭ್ಯರ್ಥಿಯ ಚಿತ್ರ

ಮಧ್ಯಪ್ರದೇಶದ ಮಾಂಡ್ಲಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ರ‍್ಯಾಲಿಗೂ ಮುನ್ನ ಮುಖ್ಯ ವೇದಿಕೆಯಲ್ಲಿ ಹಾಕಲಾಗಿದ್ದ ಪೋಸ್ಟರ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಚಿತ್ರವಿತ್ತು. ಅದರಲ್ಲಿ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಫಗ್ಗನ್ ಸಿಂಗ್ ಕುಲಸ್ತೆ ಹಾಗೂ ಇತರ ಕೆಲವು ಕಾಂಗ್ರೆಸ್ ನಾಯಕರ ಚಿತ್ರವಿತ್ತು.

ಮಧ್ಯಪ್ರದೇಶ: ರಾಹುಲ್​ ಗಾಂಧಿ ಭೇಟಿಗೂ ಮುನ್ನ ವೇದಿಕೆಯಲ್ಲಿದ್ದ ಕಾಂಗ್ರೆಸ್​ ಪೋಸ್ಟರ್​ನಲ್ಲಿತ್ತು ಬಿಜೆಪಿ ಅಭ್ಯರ್ಥಿಯ ಚಿತ್ರ
Follow us
ನಯನಾ ರಾಜೀವ್
|

Updated on: Apr 09, 2024 | 8:11 AM

ಮಧ್ಯಪ್ರದೇಶದ ಮಾಂಡ್ಲಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ರ‍್ಯಾಲಿಗೂ ಮುನ್ನ ಮುಖ್ಯ ವೇದಿಕೆಯಲ್ಲಿ ಹಾಕಲಾಗಿದ್ದ ಪೋಸ್ಟರ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಚಿತ್ರವಿತ್ತು. ಅದರಲ್ಲಿ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಫಗ್ಗನ್ ಸಿಂಗ್ ಕುಲಸ್ತೆ ಹಾಗೂ ಇತರ ಕೆಲವು ಕಾಂಗ್ರೆಸ್ ನಾಯಕರ ಚಿತ್ರವಿತ್ತು.

ರಾಹುಲ್​ ಗಾಂಧಿ ಭೇಟಿಗೂ ಮುನ್ನ ಹೊರಬಿದ್ದ ವಿಡಿಯೋವೊಂದು ಕಾಂಗ್ರೆಸ್​ಗೆ ಮುಜುಗರ ಉಂಟು ಮಾಡಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ವೇದಿಕೆಯಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್​ನಿಂದ ಕೇಂದ್ರ ಸಚಿವ ಫಗ್ಗನ್ ಸಿಂಗ್ ಅವರ ಫೋಟೊವನ್ನು ಮರೆಮಾಚುತ್ತಿರುವುದು ಕಂಡು ಬಂದಿದೆ.

ತಪ್ಪಿನ ಅರಿವಾದ ಬಳಿಕ ಅದೇ ಜಾಗದಲ್ಲಿ ಕಾಂಗ್ರೆಸ್​ ಶಾಸಕ ರಜನೀಶ್​ ಹರ್ವಂಶ್ ಅವರ ಚಿತ್ರ ಹಾಕಲಾಗಿದೆ. ಕುಲಸ್ತೆ ಅವರ ಚಿತ್ರ ಮರೆಮಾಡಲಾಗಿದೆ. ಈ ಬಾರಿ ಮಂಡ್ಲಾದಿಂದ ಓಂಕಾರ್ ಸಿಂಗ್ ಅವರಿಗೆ ಕಾಂಗ್ರೆಸ್​ ಟಿಕೆಟ್ ನೀಡಿದೆ, ಒಂದು ದಿನ ಮೊದಲು ಪ್ರಧಾನಿ ಮೋದಿ ಅವರು ಜಬಲ್​ಪುರದಲ್ಲಿ ಮೆಗಾ ರೋಡ್​ ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದರು, ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ಮತ್ತಷ್ಟು ಓದಿ: ಈ ಬಾರಿಯ ಚುನಾವಣೆಯಲ್ಲೂ ಕಾಂಗ್ರೆಸ್​ ಸೋತರೆ ರಾಹುಲ್​ ಗಾಂಧಿ ಏನು ಮಾಡಬೇಕು? ಪ್ರಶಾಂತ್​ ಕಿಶೋರ್​ ಸಲಹೆ ಏನು?

ಇದು ಕಾಂಗ್ರೆಸ್​ ಗಂಭೀರತೆ ಎಷ್ಟಿದೆ ಎಂಬುದನ್ನು ತೋರಿಸುತ್ತದೆ, ಅವರು ತಮ್ಮ ಅಭ್ಯರ್ಥಿಯ ಭಾವಚಿತ್ರದ ಬದಲು ಬಿಜೆಪಿ ಅಭ್ಯರ್ಥಿಯ ಭಾವಚಿತ್ರ ಅಳವಡಿಸಿದ್ದಾರೆ. ಆ ಮೂಲಕ ಚುನಾವಣೆಯ ಮುನ್ನವೇ ಸೋಲು ಒಪ್ಪಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದೆ. ನಂತರ ಏಪ್ರಿಲ್ 26ರಂದು, ಮೇ 7 ಹಾಗೂ ಮೇ 13ರಂದು ನಡೆಯಲಿದೆ. ಮಧ್ಯಪ್ರದೇಶವು ಒಟ್ಟು 29 ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ಸಂಸತ್ತಿನ ಪ್ರಾತಿನಿಧ್ಯದ ವಿಷಯದಲ್ಲಿ ಆರನೇ ಅತಿದೊಡ್ಡ ರಾಜ್ಯವಾಗಿದೆ. ಈ ಪೈಕಿ 10 ಸ್ಥಾನಗಳು ಎಸ್​ಸಿ ಹಾಗೂ ಎಸ್​ಟಿ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಉಳಿದ 19 ಸ್ಥಾನಗಳು ಮೀಸಲಿರುವುದಿಲ್ಲ.

2019ರ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ 29ರಲ್ಲಿ 28 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದ್ದರೆ, ಕಾಂಗ್ರೆಸ್​ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ