AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ರಾಹುಲ್​ ಗಾಂಧಿ ಭೇಟಿಗೂ ಮುನ್ನ ವೇದಿಕೆಯಲ್ಲಿದ್ದ ಕಾಂಗ್ರೆಸ್​ ಪೋಸ್ಟರ್​ನಲ್ಲಿತ್ತು ಬಿಜೆಪಿ ಅಭ್ಯರ್ಥಿಯ ಚಿತ್ರ

ಮಧ್ಯಪ್ರದೇಶದ ಮಾಂಡ್ಲಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ರ‍್ಯಾಲಿಗೂ ಮುನ್ನ ಮುಖ್ಯ ವೇದಿಕೆಯಲ್ಲಿ ಹಾಕಲಾಗಿದ್ದ ಪೋಸ್ಟರ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಚಿತ್ರವಿತ್ತು. ಅದರಲ್ಲಿ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಫಗ್ಗನ್ ಸಿಂಗ್ ಕುಲಸ್ತೆ ಹಾಗೂ ಇತರ ಕೆಲವು ಕಾಂಗ್ರೆಸ್ ನಾಯಕರ ಚಿತ್ರವಿತ್ತು.

ಮಧ್ಯಪ್ರದೇಶ: ರಾಹುಲ್​ ಗಾಂಧಿ ಭೇಟಿಗೂ ಮುನ್ನ ವೇದಿಕೆಯಲ್ಲಿದ್ದ ಕಾಂಗ್ರೆಸ್​ ಪೋಸ್ಟರ್​ನಲ್ಲಿತ್ತು ಬಿಜೆಪಿ ಅಭ್ಯರ್ಥಿಯ ಚಿತ್ರ
ನಯನಾ ರಾಜೀವ್
|

Updated on: Apr 09, 2024 | 8:11 AM

Share

ಮಧ್ಯಪ್ರದೇಶದ ಮಾಂಡ್ಲಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ರ‍್ಯಾಲಿಗೂ ಮುನ್ನ ಮುಖ್ಯ ವೇದಿಕೆಯಲ್ಲಿ ಹಾಕಲಾಗಿದ್ದ ಪೋಸ್ಟರ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಚಿತ್ರವಿತ್ತು. ಅದರಲ್ಲಿ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಫಗ್ಗನ್ ಸಿಂಗ್ ಕುಲಸ್ತೆ ಹಾಗೂ ಇತರ ಕೆಲವು ಕಾಂಗ್ರೆಸ್ ನಾಯಕರ ಚಿತ್ರವಿತ್ತು.

ರಾಹುಲ್​ ಗಾಂಧಿ ಭೇಟಿಗೂ ಮುನ್ನ ಹೊರಬಿದ್ದ ವಿಡಿಯೋವೊಂದು ಕಾಂಗ್ರೆಸ್​ಗೆ ಮುಜುಗರ ಉಂಟು ಮಾಡಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ವೇದಿಕೆಯಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್​ನಿಂದ ಕೇಂದ್ರ ಸಚಿವ ಫಗ್ಗನ್ ಸಿಂಗ್ ಅವರ ಫೋಟೊವನ್ನು ಮರೆಮಾಚುತ್ತಿರುವುದು ಕಂಡು ಬಂದಿದೆ.

ತಪ್ಪಿನ ಅರಿವಾದ ಬಳಿಕ ಅದೇ ಜಾಗದಲ್ಲಿ ಕಾಂಗ್ರೆಸ್​ ಶಾಸಕ ರಜನೀಶ್​ ಹರ್ವಂಶ್ ಅವರ ಚಿತ್ರ ಹಾಕಲಾಗಿದೆ. ಕುಲಸ್ತೆ ಅವರ ಚಿತ್ರ ಮರೆಮಾಡಲಾಗಿದೆ. ಈ ಬಾರಿ ಮಂಡ್ಲಾದಿಂದ ಓಂಕಾರ್ ಸಿಂಗ್ ಅವರಿಗೆ ಕಾಂಗ್ರೆಸ್​ ಟಿಕೆಟ್ ನೀಡಿದೆ, ಒಂದು ದಿನ ಮೊದಲು ಪ್ರಧಾನಿ ಮೋದಿ ಅವರು ಜಬಲ್​ಪುರದಲ್ಲಿ ಮೆಗಾ ರೋಡ್​ ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದರು, ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ಮತ್ತಷ್ಟು ಓದಿ: ಈ ಬಾರಿಯ ಚುನಾವಣೆಯಲ್ಲೂ ಕಾಂಗ್ರೆಸ್​ ಸೋತರೆ ರಾಹುಲ್​ ಗಾಂಧಿ ಏನು ಮಾಡಬೇಕು? ಪ್ರಶಾಂತ್​ ಕಿಶೋರ್​ ಸಲಹೆ ಏನು?

ಇದು ಕಾಂಗ್ರೆಸ್​ ಗಂಭೀರತೆ ಎಷ್ಟಿದೆ ಎಂಬುದನ್ನು ತೋರಿಸುತ್ತದೆ, ಅವರು ತಮ್ಮ ಅಭ್ಯರ್ಥಿಯ ಭಾವಚಿತ್ರದ ಬದಲು ಬಿಜೆಪಿ ಅಭ್ಯರ್ಥಿಯ ಭಾವಚಿತ್ರ ಅಳವಡಿಸಿದ್ದಾರೆ. ಆ ಮೂಲಕ ಚುನಾವಣೆಯ ಮುನ್ನವೇ ಸೋಲು ಒಪ್ಪಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದೆ. ನಂತರ ಏಪ್ರಿಲ್ 26ರಂದು, ಮೇ 7 ಹಾಗೂ ಮೇ 13ರಂದು ನಡೆಯಲಿದೆ. ಮಧ್ಯಪ್ರದೇಶವು ಒಟ್ಟು 29 ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ಸಂಸತ್ತಿನ ಪ್ರಾತಿನಿಧ್ಯದ ವಿಷಯದಲ್ಲಿ ಆರನೇ ಅತಿದೊಡ್ಡ ರಾಜ್ಯವಾಗಿದೆ. ಈ ಪೈಕಿ 10 ಸ್ಥಾನಗಳು ಎಸ್​ಸಿ ಹಾಗೂ ಎಸ್​ಟಿ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಉಳಿದ 19 ಸ್ಥಾನಗಳು ಮೀಸಲಿರುವುದಿಲ್ಲ.

2019ರ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ 29ರಲ್ಲಿ 28 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದ್ದರೆ, ಕಾಂಗ್ರೆಸ್​ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ