AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಆಂಧ್ರದಲ್ಲಿ ಎನ್​ಡಿಎ ಸೀಟು ಹಂಚಿಕೆ ಸೂತ್ರ ಅಂತಿಮ

ಬಿಜೆಪಿ, ಎನ್ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಮುಂಬರುವ ಲೋಕಸಭೆ ಮತ್ತು ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗಳಿಗೆ ಸ್ಥಾನಗಳನ್ನು ಅಂತಿಮಗೊಳಿಸಿವೆ. ಬಿಜೆಪಿ ಆರು ಲೋಕಸಭೆ ಮತ್ತು 10 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ, ಟಿಡಿಪಿ 17 ಲೋಕಸಭೆ ಮತ್ತು 144 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಜನಸೇನೆ ಎರಡು ಲೋಕಸಭೆ ಮತ್ತು 21 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಆಂಧ್ರಪ್ರದೇಶವು 25 ಲೋಕಸಭೆ ಮತ್ತು 175 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಏಕಕಾಲದಲ್ಲಿ ಸ್ಪರ್ಧೆ ನಡೆಯಲಿದೆ.

Lok Sabha Election: ಆಂಧ್ರದಲ್ಲಿ ಎನ್​ಡಿಎ ಸೀಟು ಹಂಚಿಕೆ ಸೂತ್ರ ಅಂತಿಮ
ಚಂದ್ರಬಾಬು ನಾಯ್ಡು-ನರೇಂದ್ರ ಮೋದಿImage Credit source: The South First
ನಯನಾ ರಾಜೀವ್
|

Updated on: Mar 12, 2024 | 9:30 AM

Share

ದೇಶದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆ(Lok Sabha Election)ಗೆ ಇನ್ನು ಸ್ವಲ್ಪ ದಿನಗಳಷ್ಟೇ ಬಾಕಿ ಉಳಿದಿದೆ. ರಾಜಕೀಯ ಪಕ್ಷಗಳು ಚುನಾವಣೆಗೆ ಭಾರಿ ಸಿದ್ಧತೆ ನಡೆಸಿವೆ. ಮತ್ತೊಂದೆಡೆ ದಕ್ಷಿಣದಲ್ಲಿ ಬಿಜೆಪಿ ತನ್ನ ಕೋಟೆಯನ್ನು ಬಲಪಡಿಸಲು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವಲ್ಲಿ ನಿರತವಾಗಿವೆ. ಇದೀಗ ಬಿಜೆಪಿಯು ಚಂದ್ರಬಾಬು ನಾಯ್ಡು(Chandrababu Naidu) ಅವರ ತೆಲುಗು ದೇಶಂ ಪಕ್ಷ(ಟಿಡಿಪಿ)ಮತ್ತು ಪವನ್ ಕಲ್ಯಾಣ್(Pawan Kalyan)​ ಅವರ ಪಕ್ಷ ಜನಸೇನೆ ಜತೆಗೆ ಮೈತ್ರಿ ಮಾಡಿಕೊಂಡಿದ್ದು, ಮುಂಬರುವ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳನ್ನು ಒಟ್ಟಿಗೆ ಎದುರಿಸಲು ನಿರ್ಧರಿಸಿವೆ ಎನ್ನುವ ಮಾಹಿತಿ ಕೇಳಿಬಂದಿದೆ.

ಮೂರು ಪಕ್ಷಗಳ ನಡುವೆ ಸೀಟು ಹಂಚಿಕೆ ಸೂತ್ರಕ್ಕೆ ಒಪ್ಪಿಗೆ ದೊರೆತಿದ್ದು, ಆಂಧ್ರಪ್ರದೇಶದಲ್ಲಿ ಟಿಡಿಪಿ 17 ಕ್ಷೇತ್ರಗಳಲ್ಲಿ,ಮ ಬಿಜೆಪಿ 6ಸ್ಥಾನಗಳಲ್ಲಿ, ಪವನ್​ ಕಲ್ಯಾಣ್​ ಅವರ ಜನಸೇನೆ 2 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

ಲೋಕಸಭೆ ಚುನಾವಣೆಯ ಜತೆಗೆ ವಿಧಾನಸಭೆ ಚುನಾವಣೆಗೆ ವಿಧಾನಸಭಾ ಚುನಾವಣೆಗೂ ಮೂರು ಪಕ್ಷಗಳ ನಡುವೆ ಮೈತ್ರಿ ಏರ್ಪಟ್ಟಿದೆ. ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ 144, ಬಿಜೆಪಿ 10 ಹಾಗೂ ಜೆಎಸ್​ಪಿ 21 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

ಮತ್ತಷ್ಟು ಓದಿ: ಲೋಕಸಭೆ ಚುನಾವಣೆ: 2ನೇ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್ ಕಸರತ್ತು, ‘ಕೈ’ಗೆ ಸಂಕಷ್ಟ ತಂದಿತ್ತ ಕ್ಷೇತ್ರಗಳಿವು!

ಚಂದ್ರಬಾನು ನಾಯ್ಡು ಮಾತನಾಡಿ ಬಿಜೆಪಿ, ಟಿಡಿಪಿ ಹಾಗೂ ಜೆಎಸ್​ಪಿ ನಡುವೆ ಅಮರಾವತಿಯಲ್ಲಿ ಸೀಟು ಹಂಚಿಕೆಗೆ ಪ್ರಚಂಡ ಸೂತ್ರವನ್ನು ರೂಪಿಸಲಾಗಿದೆ. ಮಾರ್ಚ್​ 17ರಂದು ಗುಂಟೂರು ಜಿಲ್ಲೆಯಲ್ಲಿ ಟಿಡಿಪಿ ಚಂದ್ರಬಾಬು ನಾಯ್ಡು ಅವರೊಂದಿಗೆ ಪ್ರಧಾನಿ ಮೋದಿ ಜಂಟಿ ರ್ಯಾಲಿ ನಡೆಸಬಹುದು ಎಂದು ಮೂಲಗಳು ತಿಳಿಸಿವೆ.

ಟಿಡಿಪಿ ಹಾಗೂ ಬಿಜೆಪಿ ನಡುವಿನ ಸಂಬಂಧ ಹಳೆಯದು ಬಿಜೆಪಿ ಹಾಗೂ ಟಿಡಿಪಿ ನಡುವಿನ ಸಂಬಂಧ ಬಹಳ ಹಳೆಯದು, ಎರಡೂ ಪಕ್ಷಗಳ ಮೊದಲ ಮೈತ್ರಿ 1996ರಲ್ಲಿ ಆಗಿತ್ತು. ಆಗ ಟಿಡಿಪಿ ಎನ್​ಡಿಎ ಸೇರಿತ್ತು. ಇವರಿಬ್ಬರೂ 2014ರಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧಿಸಿದ್ದರೆ, 2014ರ ಚುನಾವಣೆಯಲ್ಲಿ ಜೆಎಸ್​ಪಿ ಬಿಜೆಪಿಗೆ ಬೆಂಬಲ ನೀಡಿತ್ತು.

ಆದರೆ 2014ರ ನಂತರ ಟಿಡಿಪಿ ಎರಡು ಪಕ್ಷಗಳ ನಡುವಿನ ಭಿನ್ನಾಭಿಪ್ರಾಯದಿಂದ ಎನ್​ಡಿಎಯಿಂದ ಬೇರ್ಪಟ್ಟಿತ್ತು. 2019ರ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಇಬ್ಬರೂ ಪ್ರತ್ಯೇಕವಾಗಿ ಸ್ಪರ್ಧಿಸಿದ್ದರು, ಅಲ್ಲಿ ವೈಎಸ್​ಆರ್​ ಕಾಂಗ್ರೆಸ್​ ಟಿಡಿಪಿಗೆ ಸೋಲು ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ