AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಬಾಂಡ್​ಗಳು​ ಮತ್ತೆ ಜಾರಿಗೆ ಬರಬಹುದು: ನಿರ್ಮಲಾ ಸೀತಾರಾಮನ್

ಬಿಜೆಪಿ ಸರ್ಕಾರವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಚುನವಣಾ ಬಾಂಡ್​ಗಳು ಮತ್ತೆ ಜಾರಿಗೆ ಬರಲಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಿಂದೂಸ್ತಾನ್ ಟೈಮ್ಸ್​ಗೆ ನೀಡಿದ್ದ ಸಂದರ್ಶನದಲ್ಲಿ ಈ ವಿಚಾರ ಕುರಿತು ಮಾತನಾಡಿದ್ದು, ಇದೀಗ ನಿರ್ಮಲಾ ಹೇಳಿಕೆ ವಿರುದ್ಧ ಕಾಂಗ್ರೆಸ್​ನ ನಾಯಕ ಜೈರಾಮ್ ರಮೇಶ್​ ಕಿಡಿಕಾರಿದ್ದಾರೆ.

ಚುನಾವಣಾ ಬಾಂಡ್​ಗಳು​ ಮತ್ತೆ ಜಾರಿಗೆ ಬರಬಹುದು: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ನಯನಾ ರಾಜೀವ್
|

Updated on: Apr 21, 2024 | 2:20 PM

Share

ಚುನಾವಣೆ ಬಳಿಕ ಚುನಾವಣಾ ಬಾಂಡ್​(Electoral Bonds)ಗಳು ಮತ್ತೆ ಚಾಲ್ತಿಗೆ ಬರಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಹೇಳಿದ್ದಾರೆ. 2024 ರ ಲೋಕಸಭೆ ಚುನಾವಣೆಯಲ್ಲಿ, ಚುನಾವಣಾ ಬಾಂಡ್‌ಗಳ ವಿಷಯದಲ್ಲಿ ಪ್ರತಿಪಕ್ಷಗಳು ಬಿಜೆಪಿಯ ಮೇಲೆ ದಾಳಿ ಮಾಡುತ್ತಿವೆ. ಇದು ದೇಶದ ಅತಿದೊಡ್ಡ ಹಗರಣ ಎಂದು ಪ್ರತಿಪಕ್ಷಗಳು ಹೇಳುತ್ತಿವೆ.

ಇದೀಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚುನಾವಣಾ ಬಾಂಡ್‌ಗಳ ಕುರಿತು ಹೇಳಿಕೆಯೊಂದನ್ನು ನೀಡಿದ್ದು ಕಾಂಗ್ರೆಸ್​ ಇದನ್ನು ಬಲವಾಗಿ ಟೀಕಿಸಿದೆ. ಸಂದರ್ಶನವೊಂದರಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು (ಚುನಾವಣಾ ಬಾಂಡ್) ಮರಳಿ ತರಲಿದೆ ಎಂದು ಹಣಕಾಸು ಸಚಿವರು ಹೇಳಿದ್ದರು.

ಜೈರಾಮ್ ರಮೇಶ್​ ವಾಗ್ದಾಳಿ ನಿರ್ಮಲಾ ಸೀತಾರಾಮನ್ ಅವರ ಸಂದರ್ಶನದ ವರದಿಯನ್ನು ಪೋಸ್ಟ್​ ಮಾಡಿರುವ ಕಾಂಗ್ರೆಸ್​ ನಾಯಕ ಜೈರಾಮ್ ರಮೇಶ್​, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂರೆ ಅದು ಚುನಾವಣಾ ಬಾಂಡ್​ಗಳನ್ನು ಮರಳಿ ತರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅದು ಕಾನೂನು ಬಾಹಿರ ಎಂದು ಸುಪ್ರೀಂಕೋರ್ಟ್​ ಘೋಷಿಸಿದೆ, ಅವುಗಳನ್ನು ಅಸಂವಿಧಾನಿಕ ಎಂದು ಕರೆಯಲಾಗುತ್ತಿದೆ.

ಮತ್ತಷ್ಟು ಓದಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹಣ ಎಲ್ಲೆಲ್ಲಿ ಹೂಡಿಕೆ ಆಗಿದೆ? ಇಲ್ಲಿದೆ ಇಂಟರೆಸ್ಟಿಂಗ್ ಸಂಗತಿ

ಪೇಪಿಎಂ ಹಗರಣದಲ್ಲಿ ಬಿಜೆಪಿ ಸಾರ್ವಜನಿಕರಿಂದ ಸುಮಾರು 4 ಲಕ್ಷ ಕೋಟಿ ರೂ. ಹಣವನ್ನು ಬಿಜೆಪಿ ಲೂಟಿ ಮಾಡಿರುವುದು ನಮಗೆ ತಿಳಿದಿದೆ. ಈಗ ಮತ್ತೆ ಲೂಟಿ ಮುಂದುವರೆಸಲು ಬಿಜೆಪಿ ಬಯಸುತ್ತಿದೆ ಎಂದು ಜೈರಾಮ್ ರಮೇಶ್​ ಹೇಳಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿ ಚುನಾವಣಾ ಬಾಂಡ್​ಗಳನ್ನು ಮರಳಿ ತರಲು ಬಿಜೆಪಿ ಉದ್ದೇಶಿಸಿದೆ ಎಂದು ಸೀತಾರಾಮನ್​ ಹಿಂದೂಸ್ತಾನ್ ಟೈಮ್ಸ್​ಗೆ ನೀಡಿದ್ದ ಸಂದರ್ಶನದಲ್ಲಿ ಹೇಳಿದ್ದರು.

ಫೆಬ್ರವರಿಯಲ್ಲಿ ಚುನಾವಣಾ ಬಾಂಡ್​ಗಳನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್​ ತೀರ್ಪು ನೀಡಿತ್ತು. ಸುಪ್ರೀಂಕೋರ್ಟ್​ನ ಆದೇಶದಂತೆ ಚುನಾವಣಾ ಬಾಂಡ್​ ಪಡೆದವರ ಮಾಹಿತಿಯನ್ನು ಸ್ಟೇಟ್​ ಬ್ಯಾಂಕ್ ಆಫ್​ ಇಂಡಿಯಾ ಹಂಚಿಕೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ