AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಬಾಂಡ್​ಗಳು​ ಮತ್ತೆ ಜಾರಿಗೆ ಬರಬಹುದು: ನಿರ್ಮಲಾ ಸೀತಾರಾಮನ್

ಬಿಜೆಪಿ ಸರ್ಕಾರವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಚುನವಣಾ ಬಾಂಡ್​ಗಳು ಮತ್ತೆ ಜಾರಿಗೆ ಬರಲಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಿಂದೂಸ್ತಾನ್ ಟೈಮ್ಸ್​ಗೆ ನೀಡಿದ್ದ ಸಂದರ್ಶನದಲ್ಲಿ ಈ ವಿಚಾರ ಕುರಿತು ಮಾತನಾಡಿದ್ದು, ಇದೀಗ ನಿರ್ಮಲಾ ಹೇಳಿಕೆ ವಿರುದ್ಧ ಕಾಂಗ್ರೆಸ್​ನ ನಾಯಕ ಜೈರಾಮ್ ರಮೇಶ್​ ಕಿಡಿಕಾರಿದ್ದಾರೆ.

ಚುನಾವಣಾ ಬಾಂಡ್​ಗಳು​ ಮತ್ತೆ ಜಾರಿಗೆ ಬರಬಹುದು: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ನಯನಾ ರಾಜೀವ್
|

Updated on: Apr 21, 2024 | 2:20 PM

Share

ಚುನಾವಣೆ ಬಳಿಕ ಚುನಾವಣಾ ಬಾಂಡ್​(Electoral Bonds)ಗಳು ಮತ್ತೆ ಚಾಲ್ತಿಗೆ ಬರಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಹೇಳಿದ್ದಾರೆ. 2024 ರ ಲೋಕಸಭೆ ಚುನಾವಣೆಯಲ್ಲಿ, ಚುನಾವಣಾ ಬಾಂಡ್‌ಗಳ ವಿಷಯದಲ್ಲಿ ಪ್ರತಿಪಕ್ಷಗಳು ಬಿಜೆಪಿಯ ಮೇಲೆ ದಾಳಿ ಮಾಡುತ್ತಿವೆ. ಇದು ದೇಶದ ಅತಿದೊಡ್ಡ ಹಗರಣ ಎಂದು ಪ್ರತಿಪಕ್ಷಗಳು ಹೇಳುತ್ತಿವೆ.

ಇದೀಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚುನಾವಣಾ ಬಾಂಡ್‌ಗಳ ಕುರಿತು ಹೇಳಿಕೆಯೊಂದನ್ನು ನೀಡಿದ್ದು ಕಾಂಗ್ರೆಸ್​ ಇದನ್ನು ಬಲವಾಗಿ ಟೀಕಿಸಿದೆ. ಸಂದರ್ಶನವೊಂದರಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು (ಚುನಾವಣಾ ಬಾಂಡ್) ಮರಳಿ ತರಲಿದೆ ಎಂದು ಹಣಕಾಸು ಸಚಿವರು ಹೇಳಿದ್ದರು.

ಜೈರಾಮ್ ರಮೇಶ್​ ವಾಗ್ದಾಳಿ ನಿರ್ಮಲಾ ಸೀತಾರಾಮನ್ ಅವರ ಸಂದರ್ಶನದ ವರದಿಯನ್ನು ಪೋಸ್ಟ್​ ಮಾಡಿರುವ ಕಾಂಗ್ರೆಸ್​ ನಾಯಕ ಜೈರಾಮ್ ರಮೇಶ್​, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂರೆ ಅದು ಚುನಾವಣಾ ಬಾಂಡ್​ಗಳನ್ನು ಮರಳಿ ತರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅದು ಕಾನೂನು ಬಾಹಿರ ಎಂದು ಸುಪ್ರೀಂಕೋರ್ಟ್​ ಘೋಷಿಸಿದೆ, ಅವುಗಳನ್ನು ಅಸಂವಿಧಾನಿಕ ಎಂದು ಕರೆಯಲಾಗುತ್ತಿದೆ.

ಮತ್ತಷ್ಟು ಓದಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹಣ ಎಲ್ಲೆಲ್ಲಿ ಹೂಡಿಕೆ ಆಗಿದೆ? ಇಲ್ಲಿದೆ ಇಂಟರೆಸ್ಟಿಂಗ್ ಸಂಗತಿ

ಪೇಪಿಎಂ ಹಗರಣದಲ್ಲಿ ಬಿಜೆಪಿ ಸಾರ್ವಜನಿಕರಿಂದ ಸುಮಾರು 4 ಲಕ್ಷ ಕೋಟಿ ರೂ. ಹಣವನ್ನು ಬಿಜೆಪಿ ಲೂಟಿ ಮಾಡಿರುವುದು ನಮಗೆ ತಿಳಿದಿದೆ. ಈಗ ಮತ್ತೆ ಲೂಟಿ ಮುಂದುವರೆಸಲು ಬಿಜೆಪಿ ಬಯಸುತ್ತಿದೆ ಎಂದು ಜೈರಾಮ್ ರಮೇಶ್​ ಹೇಳಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿ ಚುನಾವಣಾ ಬಾಂಡ್​ಗಳನ್ನು ಮರಳಿ ತರಲು ಬಿಜೆಪಿ ಉದ್ದೇಶಿಸಿದೆ ಎಂದು ಸೀತಾರಾಮನ್​ ಹಿಂದೂಸ್ತಾನ್ ಟೈಮ್ಸ್​ಗೆ ನೀಡಿದ್ದ ಸಂದರ್ಶನದಲ್ಲಿ ಹೇಳಿದ್ದರು.

ಫೆಬ್ರವರಿಯಲ್ಲಿ ಚುನಾವಣಾ ಬಾಂಡ್​ಗಳನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್​ ತೀರ್ಪು ನೀಡಿತ್ತು. ಸುಪ್ರೀಂಕೋರ್ಟ್​ನ ಆದೇಶದಂತೆ ಚುನಾವಣಾ ಬಾಂಡ್​ ಪಡೆದವರ ಮಾಹಿತಿಯನ್ನು ಸ್ಟೇಟ್​ ಬ್ಯಾಂಕ್ ಆಫ್​ ಇಂಡಿಯಾ ಹಂಚಿಕೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ