AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Kaswan: ಟಿಕೆಟ್​ ನಿರಾಕರಣೆ, ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್​ಗೆ ಸೇರ್ಪಡೆಯಾದ ರಾಹುಲ್ ಕಸ್ವಾನ್

ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ, ರಾಜಸ್ಥಾನದ ಎರಡು ಅವಧಿಯ ಚುರು ಸಂಸದ ರಾಹುಲ್ ಕಸ್ವಾನ್ ಸೋಮವಾರ (ಮಾರ್ಚ್ 11) ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಇಂದು ನವದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.

Rahul Kaswan: ಟಿಕೆಟ್​ ನಿರಾಕರಣೆ, ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್​ಗೆ ಸೇರ್ಪಡೆಯಾದ ರಾಹುಲ್ ಕಸ್ವಾನ್
ರಾಹುಲ್ ಕಸ್ವಾನ್
ನಯನಾ ರಾಜೀವ್
|

Updated on: Mar 11, 2024 | 1:59 PM

Share

ಲೋಕಸಭೆ ಚುನಾವಣೆ(Lok Sabha Election)ಗೂ ಮುನ್ನ ರಾಜಸ್ಥಾನದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಚುರು ಸಂಸದ ರಾಹುಲ್ ಕಸ್ವಾನ್(Rahul Kaswan) ಸೋಮವಾರ (ಮಾರ್ಚ್ 11) ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರೇ ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ.

ವಾಸ್ತವವಾಗಿ, ಬಿಜೆಪಿಯ ಮೊದಲ ಅಭ್ಯರ್ಥಿ ಪಟ್ಟಿಯಲ್ಲಿ, ರಾಹುಲ್ ಕಸ್ವಾನ್ ಅವರ ಟಿಕೆಟ್ ಅನ್ನು ಚುರು ಕ್ಷೇತ್ರದಿಂದ ಕಡಿತಗೊಳಿಸಲಾಗಿತ್ತು, ಹೀಗಾಗಿ ಕೋಪಗೊಂಡು ಬಿಜೆಪಿ ಹೈಕಮಾಂಡ್‌ಗೆ ಪ್ರಶ್ನೆಗಳ ಸುರಿಮಳೆಗೈದರು. ಇದೀಗ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ.

ರಾಜೀನಾಮೆ ವೇಳೆ ರಾಹುಲ್ ಕಸ್ವಾನ್ ಹೇಳಿದ್ದೇನು? ನಿಮ್ಮೆಲ್ಲರ ಭಾವನೆಗಳಿಗೆ ಅನುಗುಣವಾಗಿ ನಾನು ಸಾರ್ವಜನಿಕ ಜೀವನದಲ್ಲಿ ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಿದ್ದೇನೆ. ರಾಜಕೀಯ ಕಾರಣಗಳಿಂದಾಗಿ ಈ ಕ್ಷಣದಲ್ಲಿಯೇ ನಾನು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.

ನಂತರ ಮಾತನಾಡಿದ ಅವರು, ಇಡೀ ಭಾರತೀಯ ಜನತಾ ಪಕ್ಷ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, 10 ವರ್ಷಗಳ ಕಾಲ ಚುರು ಲೋಕಸಭೆಯ ಕುಟುಂಬಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ . ನನಗೆ ಯಾವಾಗಲೂ ಅಮೂಲ್ಯವಾದ ಬೆಂಬಲ, ಸಹಕಾರ ಮತ್ತು ಆಶೀರ್ವಾದವನ್ನು ನೀಡಿದ ನನ್ನ ಚುರು ಲೋಕಸಭೆಯ ಕುಟುಂಬಕ್ಕೆ ವಿಶೇಷ ಧನ್ಯವಾದಗಳು.

ಮತ್ತಷ್ಟು ಓದಿ: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಆಘಾತ: ಸಂಸದ ಬ್ರಿಜೇಂದ್ರ ಸಿಂಗ್ ಕಾಂಗ್ರೆಸ್​ಗೆ ಸೇರ್ಪಡೆ

ಚುರು ಲೋಕಸಭೆಯ ಭವಿಷ್ಯವನ್ನು ಜನ ನಿರ್ಧರಿಸುತ್ತಾರೆ

ಈ ಬಾರಿ ಬಿಜೆಪಿ ಚುರು ಕ್ಷೇತ್ರದಿಂದ ಪ್ಯಾರಾಲಿಂಪಿಕ್ ಆಟಗಾರ ದೇವೇಂದ್ರ ಜಜಾರಿಯಾ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ ಎಂದು ಹೇಳೋಣ. ಈ ನಿರ್ಧಾರದ ಬಗ್ಗೆ ಕಸ್ವಾನ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಕಸ್ವಾನ್ ಬದಲಿಗೆ, ಬಿಜೆಪಿಯು ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಬಾರಿ ಚಿನ್ನ ಮತ್ತು ಒಂದು ಬಾರಿ ಬೆಳ್ಳಿ ಗೆದ್ದಿರುವ ದೇವೇಂದ್ರ ಜಜಾರಿಯಾ ಅವರನ್ನು ಸ್ಥಾನದಿಂದ ಕಣಕ್ಕೆ ಇಳಿಸಿದೆ.

ಚುರು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ರಾಹುಲ್ ಕಸ್ವಾನ್ ಅವರು 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬ್ಯಾನರ್ ಅಡಿಯಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ, ಈ ಬಾರಿ ಅವರನ್ನು ಕಣಕ್ಕಿಳಿಸದಿರಲು ಬಿಜೆಪಿ ನಿರ್ಧರಿಸಿದ್ದು, ಬದಲಿಗೆ ಚುರು ಕ್ಷೇತ್ರಕ್ಕೆ ಪ್ಯಾರಾ ಒಲಿಂಪಿಯನ್ ದೇವೇಂದ್ರ ಜಜಾರಿಯಾ ಅವರ ಹೆಸರನ್ನು ಸೂಚಿಸಿದೆ. ಈ ನಿರ್ಧಾರದಿಂದ ರಾಹುಲ್ ಕಸ್ವಾನ್ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ರಾಹುಲ್ ಕಸ್ವಾನ್ ಅವರ ತಂದೆ ರಾಮ್ ಸಿಂಗ್ ಅವರು ಬಿಜೆಪಿ ಸಂಸದ ಮತ್ತು ಚುರು ಕ್ಷೇತ್ರದ ಶಾಸಕರಾಗಿದ್ದಾರೆ. ಅವರ ತಾಯಿ ಕಮಲಾ ಕಸ್ವಾನ್ ಸಾದುಲ್‌ಪುರದಿಂದ ಬಿಜೆಪಿ ಶಾಸಕಿಯಾಗಿದ್ದಾರೆ.

ನಾಲ್ವರು ಕೇಂದ್ರ ಸಚಿವರು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಒಳಗೊಂಡ ರಾಜಸ್ಥಾನದ 25 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ ಬಿಜೆಪಿ ತನ್ನ ಲೋಕಸಭಾ ಚುನಾವಣಾ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ, ರಾಜ್ಯದಲ್ಲಿ ಉಳಿದ 10 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪಕ್ಷ ಇನ್ನೂ ಘೋಷಿಸಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!