AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​

ಗುಜರಾತ್​ನ ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಆಕ್ರೋಶಗೊಂಡು ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದೆ.

ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​
ನೀಲೇಶ್​ ಕುಂಭಾನಿ
ನಯನಾ ರಾಜೀವ್
|

Updated on: Apr 26, 2024 | 3:06 PM

Share

ಗುಜರಾತ್​ನ ಸೂರತ್ ಲೋಕಸಭಾ ಕ್ಷೇತ್ರ(Surat Lok Sabha Constituency)ದಿಂದ ಕಾಂಗ್ರೆಸ್​ ಅಭ್ಯರ್ಥಿ(Congress Candidate) ನೀಲೇಶ್​ ಕುಂಭಾನಿ(Nilesh Kumbhani)  ನಾಮಪತ್ರ ತಿರಸ್ಕೃತಗೊಳ್ಳುತ್ತಿದ್ದಂತೆ ಪಕ್ಷವು ಅವರನ್ನು ಉಚ್ಛಾಟಿಸಿದೆ. ನೀಲೇಶ್​ ಅವರ ನಾಮಪತ್ರ ರದ್ದಾದ ನಂತರ ಇತರೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ಬಳಿಕ ಬಿಜೆಪಿ ಅಭ್ಯರ್ಥಿ ಮುಖೇಶ್​ ದಲಾಲ್ ಅವರನ್ನು ಅವರೋಧವಾಗಿ ಆಯ್ಕೆ ಮಾಡಲಾಗಿತ್ತು. ಈ ಕ್ಷೇತ್ರದ ಚುನಾವಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುವ ಕುರಿತು ಕಾಂಗ್ರೆಸ್​ ಮಾತನಾಡಿತ್ತು.

ನೀಲೇಶ್ ಕುಂಭಾಣಿ ಬಗ್ಗೆಯೂ ಪಕ್ಷ ಕಟ್ಟುನಿಟ್ಟಿನ ನಿಲು ತಳೆದಿದೆ, ನೀಲೇಶ್​ ಅವರನ್ನು ಕಾಂಗ್ರೆಸ್​ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿದೆ. ನೀಲೇಶ್​ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್​ ಶಿಸ್ತು ಸಮಿತಿ ನಿರ್ಧರಿಸಿದೆ. ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದತಿಗೆ ನೀಲೇಶ್​ ಕುಂಭಾಣಿ ಹೊಣೆಗಾರಿಕೆಯನ್ನು ಶಿಸ್ತು ಸಮಿತಿ ಹೊರಿಸಿದೆ.

ನಾಮಪತ್ರ ರದ್ದು ನಿಮ್ಮ ನಿರ್ಲಕ್ಷ್ಯ ಅಥವಾ ಬಿಜೆಪಿ ಜತೆಗಿನ ಒಡನಾಟವನ್ನು ತೋರಿಸುತ್ತದೆ ಎಂದು ಶಿಸ್ತು ಸಮಿತಿ ನಿರ್ಧಾರದಲ್ಲಿ ಹೇಳಿದೆ. ಇದರಿಂದಾಗಿ ಸೂರತ್​ನ ಜನರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ಹೇಳಿದ್ದಾರೆ. ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದಾದ ಬಳಿಕ ನೀಲೇಶ್​ ಕುಂಭಾಣಿ ಮಾಧ್ಯಮಗಳ ಮುಂದೆ ಬಂದಿಲ್ಲ, ಕಾಂಗ್ರೆಸ್​ ನಾಯಕರು ಕೂಡ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ.

ಮತ್ತಷ್ಟು ಓದಿ: Lok Sabha Election: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

ಕುಂಭಾಣಿ ಮನೆ ಮುಂದೆ ಕಾಂಗ್ರೆಸ್​ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ನೀಲೇಶ್​ ಅವರು ಬಿಜೆಪಿಯವರ ಒತ್ತಾಯಕ್ಕೆ ಮಣಿದು ಬಿಜೆಪಿಯಿಂದ ಕೋಟ್ಯಂತರ ರೂಪಾಯಿ ಕಬಳಿಸಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪ ಮಾಡುತ್ತಿದ್ದಾರೆ. ನೀಲೇಶ್​ ಯಾವಾಗ ಬೇಕಾದರೂ ಬಿಜೆಪಿ ಸೇರಬಹುದು ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ