AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​

ಗುಜರಾತ್​ನ ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಆಕ್ರೋಶಗೊಂಡು ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದೆ.

ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​
ನೀಲೇಶ್​ ಕುಂಭಾನಿ
ನಯನಾ ರಾಜೀವ್
|

Updated on: Apr 26, 2024 | 3:06 PM

Share

ಗುಜರಾತ್​ನ ಸೂರತ್ ಲೋಕಸಭಾ ಕ್ಷೇತ್ರ(Surat Lok Sabha Constituency)ದಿಂದ ಕಾಂಗ್ರೆಸ್​ ಅಭ್ಯರ್ಥಿ(Congress Candidate) ನೀಲೇಶ್​ ಕುಂಭಾನಿ(Nilesh Kumbhani)  ನಾಮಪತ್ರ ತಿರಸ್ಕೃತಗೊಳ್ಳುತ್ತಿದ್ದಂತೆ ಪಕ್ಷವು ಅವರನ್ನು ಉಚ್ಛಾಟಿಸಿದೆ. ನೀಲೇಶ್​ ಅವರ ನಾಮಪತ್ರ ರದ್ದಾದ ನಂತರ ಇತರೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ಬಳಿಕ ಬಿಜೆಪಿ ಅಭ್ಯರ್ಥಿ ಮುಖೇಶ್​ ದಲಾಲ್ ಅವರನ್ನು ಅವರೋಧವಾಗಿ ಆಯ್ಕೆ ಮಾಡಲಾಗಿತ್ತು. ಈ ಕ್ಷೇತ್ರದ ಚುನಾವಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುವ ಕುರಿತು ಕಾಂಗ್ರೆಸ್​ ಮಾತನಾಡಿತ್ತು.

ನೀಲೇಶ್ ಕುಂಭಾಣಿ ಬಗ್ಗೆಯೂ ಪಕ್ಷ ಕಟ್ಟುನಿಟ್ಟಿನ ನಿಲು ತಳೆದಿದೆ, ನೀಲೇಶ್​ ಅವರನ್ನು ಕಾಂಗ್ರೆಸ್​ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿದೆ. ನೀಲೇಶ್​ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್​ ಶಿಸ್ತು ಸಮಿತಿ ನಿರ್ಧರಿಸಿದೆ. ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದತಿಗೆ ನೀಲೇಶ್​ ಕುಂಭಾಣಿ ಹೊಣೆಗಾರಿಕೆಯನ್ನು ಶಿಸ್ತು ಸಮಿತಿ ಹೊರಿಸಿದೆ.

ನಾಮಪತ್ರ ರದ್ದು ನಿಮ್ಮ ನಿರ್ಲಕ್ಷ್ಯ ಅಥವಾ ಬಿಜೆಪಿ ಜತೆಗಿನ ಒಡನಾಟವನ್ನು ತೋರಿಸುತ್ತದೆ ಎಂದು ಶಿಸ್ತು ಸಮಿತಿ ನಿರ್ಧಾರದಲ್ಲಿ ಹೇಳಿದೆ. ಇದರಿಂದಾಗಿ ಸೂರತ್​ನ ಜನರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ಹೇಳಿದ್ದಾರೆ. ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದಾದ ಬಳಿಕ ನೀಲೇಶ್​ ಕುಂಭಾಣಿ ಮಾಧ್ಯಮಗಳ ಮುಂದೆ ಬಂದಿಲ್ಲ, ಕಾಂಗ್ರೆಸ್​ ನಾಯಕರು ಕೂಡ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ.

ಮತ್ತಷ್ಟು ಓದಿ: Lok Sabha Election: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

ಕುಂಭಾಣಿ ಮನೆ ಮುಂದೆ ಕಾಂಗ್ರೆಸ್​ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ನೀಲೇಶ್​ ಅವರು ಬಿಜೆಪಿಯವರ ಒತ್ತಾಯಕ್ಕೆ ಮಣಿದು ಬಿಜೆಪಿಯಿಂದ ಕೋಟ್ಯಂತರ ರೂಪಾಯಿ ಕಬಳಿಸಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪ ಮಾಡುತ್ತಿದ್ದಾರೆ. ನೀಲೇಶ್​ ಯಾವಾಗ ಬೇಕಾದರೂ ಬಿಜೆಪಿ ಸೇರಬಹುದು ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!