ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​

|

Updated on: Apr 26, 2024 | 3:06 PM

ಗುಜರಾತ್​ನ ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಆಕ್ರೋಶಗೊಂಡು ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದೆ.

ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​
ನೀಲೇಶ್​ ಕುಂಭಾನಿ
Follow us on

ಗುಜರಾತ್​ನ ಸೂರತ್ ಲೋಕಸಭಾ ಕ್ಷೇತ್ರ(Surat Lok Sabha Constituency)ದಿಂದ ಕಾಂಗ್ರೆಸ್​ ಅಭ್ಯರ್ಥಿ(Congress Candidate) ನೀಲೇಶ್​ ಕುಂಭಾನಿ(Nilesh Kumbhani)  ನಾಮಪತ್ರ ತಿರಸ್ಕೃತಗೊಳ್ಳುತ್ತಿದ್ದಂತೆ ಪಕ್ಷವು ಅವರನ್ನು ಉಚ್ಛಾಟಿಸಿದೆ. ನೀಲೇಶ್​ ಅವರ ನಾಮಪತ್ರ ರದ್ದಾದ ನಂತರ ಇತರೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ಬಳಿಕ ಬಿಜೆಪಿ ಅಭ್ಯರ್ಥಿ ಮುಖೇಶ್​ ದಲಾಲ್ ಅವರನ್ನು ಅವರೋಧವಾಗಿ ಆಯ್ಕೆ ಮಾಡಲಾಗಿತ್ತು. ಈ ಕ್ಷೇತ್ರದ ಚುನಾವಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುವ ಕುರಿತು ಕಾಂಗ್ರೆಸ್​ ಮಾತನಾಡಿತ್ತು.

ನೀಲೇಶ್ ಕುಂಭಾಣಿ ಬಗ್ಗೆಯೂ ಪಕ್ಷ ಕಟ್ಟುನಿಟ್ಟಿನ ನಿಲು ತಳೆದಿದೆ, ನೀಲೇಶ್​ ಅವರನ್ನು ಕಾಂಗ್ರೆಸ್​ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿದೆ. ನೀಲೇಶ್​ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್​ ಶಿಸ್ತು ಸಮಿತಿ ನಿರ್ಧರಿಸಿದೆ. ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದತಿಗೆ ನೀಲೇಶ್​ ಕುಂಭಾಣಿ ಹೊಣೆಗಾರಿಕೆಯನ್ನು ಶಿಸ್ತು ಸಮಿತಿ ಹೊರಿಸಿದೆ.

ನಾಮಪತ್ರ ರದ್ದು ನಿಮ್ಮ ನಿರ್ಲಕ್ಷ್ಯ ಅಥವಾ ಬಿಜೆಪಿ ಜತೆಗಿನ ಒಡನಾಟವನ್ನು ತೋರಿಸುತ್ತದೆ ಎಂದು ಶಿಸ್ತು ಸಮಿತಿ ನಿರ್ಧಾರದಲ್ಲಿ ಹೇಳಿದೆ. ಇದರಿಂದಾಗಿ ಸೂರತ್​ನ ಜನರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದಾದ ಬಳಿಕ ನೀಲೇಶ್​ ಕುಂಭಾಣಿ ಮಾಧ್ಯಮಗಳ ಮುಂದೆ ಬಂದಿಲ್ಲ, ಕಾಂಗ್ರೆಸ್​ ನಾಯಕರು ಕೂಡ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ.

ಮತ್ತಷ್ಟು ಓದಿ: Lok Sabha Election: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

ಕುಂಭಾಣಿ ಮನೆ ಮುಂದೆ ಕಾಂಗ್ರೆಸ್​ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ನೀಲೇಶ್​ ಅವರು ಬಿಜೆಪಿಯವರ ಒತ್ತಾಯಕ್ಕೆ ಮಣಿದು ಬಿಜೆಪಿಯಿಂದ ಕೋಟ್ಯಂತರ ರೂಪಾಯಿ ಕಬಳಿಸಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪ ಮಾಡುತ್ತಿದ್ದಾರೆ. ನೀಲೇಶ್​ ಯಾವಾಗ ಬೇಕಾದರೂ ಬಿಜೆಪಿ ಸೇರಬಹುದು ಎಂದು ಹೇಳಲಾಗುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ