AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಉಚಿತ ನಿವೇಶನಗಳನ್ನು ಹಂಚಲಿದೆ ಕಾಂಗ್ರೆಸ್​, ಭರವಸೆ ಕೊಟ್ಟ ಭೂಪೇಂದ್ರ ಸಿಂಗ್ ಹೂಡಾ

ಲೋಕಸಭಾ ಚುನಾವಣೆ ಹಿನ್ನೆಲೆ ಹರ್ಯಾಣ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹೂಡಾ ಜನತೆಗೆ ಭರವಸೆ ನೀಡಿದ್ದು, ಈ ಬಾರಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಉಚಿತವಾಗಿ ನಿವೇಶನಗಳನ್ನು ಹಂಚಲಿದೆ ಎಂದು ಹೇಳಿದ್ದಾರೆ.

Lok Sabha Election: ಉಚಿತ ನಿವೇಶನಗಳನ್ನು ಹಂಚಲಿದೆ ಕಾಂಗ್ರೆಸ್​, ಭರವಸೆ ಕೊಟ್ಟ ಭೂಪೇಂದ್ರ ಸಿಂಗ್ ಹೂಡಾ
ಭೂಪಿಂದರ್ ಹೂಡಾ
ನಯನಾ ರಾಜೀವ್
|

Updated on:Mar 18, 2024 | 11:24 AM

Share

ಲೋಕಸಭೆ ಚುನಾವಣೆ(Lok Sabha Election) ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶಾದ್ಯಂತ ರಾಜಕೀಯ ಕಾವು ಏರಿದೆ. ಅದೇ ಸಮಯದಲ್ಲಿ, ಹರ್ಯಾಣದಲ್ಲಿ ರಾಜಕೀಯ ಚಟುವಟಿಕೆಗಳು ಹೆಚ್ಚಿವೆ. ಕಾಂಗ್ರೆಸ್​ ಜನರಿಗೆ ಉಚಿತ ನಿವೇಶನಗಳನ್ನು ನೀಡಲಿದೆ ಎಂದು  ಭೂಪೇಂದ್ರ ಹೂಡಾ ಭರವಸೆ ನೀಡಿದ್ದಾರೆ. ಮನೋಹರ್ ಲಾಲ್ ಖಟ್ಟರ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಮಾಜಿ ಮುಖ್ಯಮಂತ್ರಿ ಭೂಪೇಂದ್ರ ಸಿಂಗ್ ಹೂಡಾ ಹೇಳಿಕೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಬದಲಾಯಿಸುವ ಸಮಯ ಬಂದಿದೆ ಎಂದರು.

ಉಚಿತ ನಿವೇಶನಗಳನ್ನು ವಿತರಿಸುವುದಾಗಿ ಹೂಡಾ ಭರವಸೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ವೃದ್ಧರಿಗೆ ನೀಡುವ ಪಿಂಚಣಿಯನ್ನು ಮಾಸಿಕ 6000 ರೂ.ಗೆ ಹೆಚ್ಚಿಸುವುದಾಗಿ ಭರವಸೆ ನೀಡಿದರು. ಅದೇ ಸಮಯದಲ್ಲಿ, ಗ್ಯಾಸ್ ಸಿಲಿಂಡರ್ 500 ರೂ.ಗಿಂತ ಹೆಚ್ಚು ವೆಚ್ಚವಾಗುವುದಿಲ್ಲ. ಅಷ್ಟೇ ಅಲ್ಲ, ಯುವಕರಿಗಾಗಿ ಖಾಲಿ ಇರುವ 2 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ ಬಡ ಕುಟುಂಬಗಳಿಗೆ 100-100 ಗಜ ಉಚಿತ ನಿವೇಶನ ಯೋಜನೆ ಜಾರಿಗೊಳಿಸಿ ಆ ನಿವೇಶನಗಳಲ್ಲಿ ಮನೆ ನೀಡುವುದಾಗಿ ಕಾಂಗ್ರೆಸ್ ಮುಖಂಡರು ಭರವಸೆ ನೀಡಿದರು.

10 ವರ್ಷಗಳ ವೈಫಲ್ಯವನ್ನು ಮರೆಮಾಚಲು ಬಿಜೆಪಿ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಿದೆ,ಈ ಹತ್ತು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಆಸ್ಪತ್ರೆ, ಶಾಲೆ, ಕಾಲೇಜು ನಿರ್ಮಾಣವಾಗಿಲ್ಲ ಎಂದರು.

ಮತ್ತಷ್ಟು ಓದಿ: ಹರ್ಯಾಣದ ಜನರು ಬದಲಾವಣೆ ಬಯಸಿದ್ದಾರೆ ಎಂದ ದೀಪೇಂದರ್ ಹೂಡಾ

ಹರ್ಯಾಣದಲ್ಲಿ ಬಿಜೆಪಿ ನಾಲ್ಕು ವರ್ಷ ಆಡಳಿತ ನಡೆಸಿದೆ ಬಿಜೆಪಿಯು ಹರ್ಯಾಣದಲ್ಲಿ ನಾಲ್ಕು ವರ್ಷ ಆಡಳಿತ ನಡೆಸಿದೆ. ಈ ಅವಧಿಯಲ್ಲಿ, ನಿರುದ್ಯೋಗ, ಅಪರಾಧ, ಡ್ರಗ್ಸ್ ಮತ್ತು ಭ್ರಷ್ಟಾಚಾರದಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದೆ. ಇದು ಮಾತ್ರವಲ್ಲದೆ, ಸಾಮಾಜಿಕ ಪ್ರಗತಿ ಸೂಚ್ಯಂಕದಲ್ಲಿ ರಾಜ್ಯವು ಅತ್ಯಂತ ಅಸುರಕ್ಷಿತ ರಾಜ್ಯಗಳಲ್ಲಿ ಒಂದಾಗಿದೆ, ಆದರೆ 2014 ಕ್ಕಿಂತ ಮೊದಲು, ಹರ್ಯಾಣವು ಕ್ರೀಡಾ ಆಟಗಾರರು ಮತ್ತು ಉದ್ಯೋಗವನ್ನು ಒದಗಿಸುವಲ್ಲಿ ಅಗ್ರಸ್ಥಾನದಲ್ಲಿತ್ತು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:23 am, Mon, 18 March 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?