Congress Manifesto: ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್​, 5 ಯೋಜನೆಗಳ ಘೋಷಣೆ

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮಹಿಳೆಯರನ್ನೇ ಪ್ರಮುಖವಾಗಿಟ್ಟುಕೊಂಡು 5 ಘೋಷಣೆಗಳನ್ನು ಜಾರಿ ಮಾಡಿದೆ.

Congress Manifesto: ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್​, 5 ಯೋಜನೆಗಳ ಘೋಷಣೆ
ರಾಹುಲ್ ಗಾಂಧಿ

Updated on: Mar 13, 2024 | 2:24 PM

ಲೋಕಸಭಾ ಚುನಾವಣೆ(Lok Sabha Election) ಹಿನ್ನೆಲೆಯಲ್ಲಿ ಕಾಂಗ್ರೆಸ್​ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 5 ಘೋಷಣೆಗಳನ್ನು ಮಾಡಿದ್ದಾರೆ. ಈ ಯೋಜನೆಗಳಿಗೆ ‘ನಾರಿ ನ್ಯಾಯ’  ಯೋಜನೆ ಎಂದು ನಾಮಕರಣ ಮಾಡಲಾಗಿದೆ. ಈ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದರ ಅಡಿಯಲ್ಲಿ ಕಾಂಗ್ರೆಸ್ ಬಡ ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿದೆ. ಅಲ್ಲದೇ ಸರ್ಕಾರಿ ನೇಮಕಾತಿಯಲ್ಲಿ ಮಹಿಳೆಯರಿಗೆ ಅರ್ಧದಷ್ಟು ಹಕ್ಕು ನೀಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಘೋಷಣೆ ಮಾಡಿದ 5 ಯೋಜನೆಗಳು
1. ಮಹಾಲಕ್ಷ್ಮಿ ಗ್ಯಾರಂಟಿ: ಇದರ ಅಡಿಯಲ್ಲಿ, ಬಡ ಕುಟುಂಬದ ಪ್ರತಿಯೊಬ್ಬ ಮಹಿಳೆಗೆ ವಾರ್ಷಿಕವಾಗಿ 1 ಲಕ್ಷ ರೂ. ನೀಡಲಾಗುತ್ತದೆ.
2. ಆದಿ ಆಬಾಧಿ ಪೂರಾ ಹಕ್​: ಇದರ ಅಡಿಯಲ್ಲಿ, ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರಿಗೆ ಅರ್ಧದಷ್ಟು ಹಕ್ಕುಗಳು ಸಿಗುತ್ತವೆ.

3. ಶಕ್ತಿ ಕಾ ಸಮ್ಮಾನ್: ಈ ಯೋಜನೆಯಡಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರ ಸರ್ಕಾರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು.

4. ಅಧಿಕಾರ ಮೈತ್ರಿ: ಇದರ ಅಡಿಯಲ್ಲಿ, ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಪಂಚಾಯತ್‌ನಲ್ಲಿ ಪ್ಯಾರಾ-ಲೀಗಲ್ ಅಂದರೆ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿಯಾಗಿ ನೇಮಿಸಲಾಗುತ್ತದೆ.

5. ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್: ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗಿ ಮಹಿಳೆಯರಿಗಾಗಿ ಕನಿಷ್ಠ ಒಂದು ಹಾಸ್ಟೆಲ್ ಅನ್ನು ನಿರ್ಮಿಸಲಾಗುವುದು ಮತ್ತು ಇಡೀ ದೇಶದಲ್ಲಿ ಈ ಹಾಸ್ಟೆಲ್ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆ: ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?
ನಮ್ಮ ಖಾಗತಿಗಳಲ್ಲಿರುವುದು ಸುಳ್ಳು ಭರವಸೆಗಳಲ್ಲ, ಪಕ್ಷದ ಹಿರಿಯ ನಾಯಕರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿಂದೆ ಸರಿಯುತ್ತಿದ್ದಾರೆ ಎಂಬ ಆರೋಪವನ್ನು ಮಂಗಳವಾರ ಖರ್ಗೆ ತಳ್ಳಿ ಹಾಕಿದ್ದರು.ಕಾರ್ಯಕರ್ತರು ಅವರನ್ನು ಚುನಾವಣೆಗೆ ಸ್ಪರ್ಧಿಸುವಂತೆ ಕೇಳಿದರೆ ಸ್ಪರ್ಧಿಸುತ್ತೇನೆ ಎಂದರು.

ವಯಸ್ಸಾದ ಕಾರಣ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, 2009 ಮತ್ತು 2014ರಲ್ಲಿ ಕರ್ನಾಟಕದ ಕಲಬುರಗಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಖರ್ಗೆ 2019ರಲ್ಲಿ ಸೋತಿದ್ದರು. ಕಾಂಗ್ರೆಸ್ ಟಿಕೆಟ್ ಮಂಗಳವಾರ (ಮಾರ್ಚ್ 12) ಲೋಕಸಭೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ. ಅದರಲ್ಲಿ 43 ಅಭ್ಯರ್ಥಿಗಳ ಹೆಸರಿದೆ.

ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಅವರಿಗೆ ಚಿಂದ್ವಾರದಿಂದ ಮತ್ತು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೆ ಜಲೋರ್ ನಿಂದ ಟಿಕೆಟ್ ನೀಡಲಾಗಿದೆ.

ಈ ಹಿಂದೆ ಮಾರ್ಚ್ 8 ರಂದು ಬಿಡುಗಡೆಯಾದ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 39 ಹೆಸರುಗಳನ್ನು ಪ್ರಕಟಿಸಲಾಗಿತ್ತು. ಈ ಮೂಲಕ ಕಾಂಗ್ರೆಸ್ ಇದುವರೆಗೆ 82 ಹೆಸರುಗಳನ್ನು ಪ್ರಕಟಿಸಿದೆ. ಪಟ್ಟಿಯಲ್ಲಿರುವ 76.7% ಅಭ್ಯರ್ಥಿಗಳು 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us