AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jayant Sinha: ಬಿಜೆಪಿಯಿಂದ ಶೋಕಾಸ್ ನೋಟಿಸ್, ಸಂಸದ ಜಯಂತ್ ಸಿನ್ಹಾ ಹೇಳಿದ್ದೇನು?

ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದಿಂದ ನಿರ್ಗಮಿಸುತ್ತಿರುವ ಬಿಜೆಪಿ ಸಂಸದ ಜಯಂತ್ ಸಿನ್ಹಾ ಪಕ್ಷವು ನೀಡಿದ ಶೋಕಾಸ್ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದಾರೆ. ಎರಡು ಪುಟಗಳ ಪತ್ರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೆ, ಮತದಾನ ಮಾಡಿಲ್ಲ ಎಂಬ ಆರೋಪದ ಮೇಲೆ ಜಯಂತ್ ಸಿನ್ಹಾ ಅವರು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಿದ್ದಾಗಿ ತಿಳಿಸಿದ್ದಾರೆ.

Jayant Sinha: ಬಿಜೆಪಿಯಿಂದ ಶೋಕಾಸ್ ನೋಟಿಸ್, ಸಂಸದ ಜಯಂತ್ ಸಿನ್ಹಾ ಹೇಳಿದ್ದೇನು?
ಜಯಂತ್ ಸಿನ್ಹಾ
ನಯನಾ ರಾಜೀವ್
|

Updated on: May 23, 2024 | 9:07 AM

Share

ಲೋಕಸಭಾ ಚುನಾವಣೆ(Lok Sabha Election) ಘೋಷಿಸಿದಾಗಿನಿಂದ ಸಂಸದ ಜಯಂತ್​ ಸಿನ್ಹಾ(Jayant Sinha) ಪ್ರಚಾರಕ್ಕೂ ಬಂದಿಲ್ಲ, ಮತದಾನವನ್ನೂ ಮಾಡಿಲ್ಲ ಎಂದು ಬಿಜೆಪಿ ಶೋಕಾಸ್ ನೋಟಿಸ್ (Show Cause Notice) ನೀಡಿತ್ತು. ಅದಕ್ಕೆ ಪ್ರತಿಕ್ರಿಯಿಸಿದ ಜಯಂತ್ ಸಿನ್ಹಾ, ಯಕ್ತಿಕ ಬದ್ಧತೆಯಿಂದಾಗಿ ವಿದೇಶದಲ್ಲಿದ್ದ ಕಾರಣ ಅಂಚೆ ಮತಪತ್ರ ಪ್ರಕ್ರಿಯೆಯ ಮೂಲಕ ಮತ ಚಲಾಯಿಸಿದ್ದೇನೆ ಎಂದರು. ‘‘ನಾನು ಯಾವುದೇ ಚುನಾವಣಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ಪಕ್ಷ ಬಯಸಿದರೆ, ನೀವು ಖಂಡಿತವಾಗಿಯೂ ನನ್ನನ್ನು ಸಂಪರ್ಕಿಸಬಹುದಿತ್ತು’’.

‘‘ಪಕ್ಷದ ಒಬ್ಬ ಹಿರಿಯ ಅಧಿಕಾರಿ, ಸಂಸದ ಅಥವಾ ಜಾರ್ಖಂಡ್ ಶಾಸಕರು ನನ್ನ ಬಳಿಗೆ ಬಂದಿಲ್ಲ. ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ. ಇದರೊಂದಿಗೆ ಯಾವುದೇ ರ್ಯಾಲಿ ಅಥವಾ ಸಂಘಟನಾ ಸಭೆಗಳಿಗೆ ನನಗೆ ಆಹ್ವಾನ ಬಂದಿಲ್ಲ’’ ಎಂದು ಸ್ಪಷ್ಟಪಡಿಸಿದ್ದಾರೆ.

ಸೋಮವಾರ, ಭಾರತೀಯ ಜನತಾ ಪಕ್ಷವು ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಿದ್ದಕ್ಕಾಗಿ ಜಯಂತ್ ಸಿನ್ಹಾ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ ನಂತರ ಇದೆಲ್ಲಾ ಬೆಳವಣಿಗೆಗಳು ನಡೆದಿವೆ.

ಮತ್ತಷ್ಟು ಓದಿ: ಚುನಾವಣಾ ಪ್ರಚಾರಕ್ಕೂ ಬಂದಿಲ್ಲ, ಮತದಾನವನ್ನೂ ಮಾಡಿಲ್ಲ ಸಂಸದ ಜಯಂತ್​ ಸಿನ್ಹಾಗೆ ಬಿಜೆಪಿ ನೋಟಿಸ್​

ಮಾಜಿ ಕೇಂದ್ರ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರ ಪುತ್ರ ಜಯಂತ್ ಅವರು ಹಜಾರಿಬಾಗ್‌ನ ಪ್ರಸ್ತುತ ಸಂಸದರಾಗಿದ್ದಾರೆ. ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಮನೀಶ್ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದಾಗಿನಿಂದ ನೀವು ಸಂಘಟನಾ ಕಾರ್ಯ ಮತ್ತು ಚುನಾವಣಾ ಪ್ರಚಾರದಲ್ಲಿ ಆಸಕ್ತಿ ವಹಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆದಿತ್ಯ ಸಾಹು ಅವರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ನಿಮ್ಮ ನಡವಳಿಕೆಯಿಂದ ಪಕ್ಷದ ವರ್ಚಸ್ಸು ಹಾಳಾಗಿದೆ. ಎರಡು ದಿನಗಳಲ್ಲಿ ಜಯಂತ್ ಸಿನ್ಹಾ ಅವರಿಂದ ಪಕ್ಷ ಸ್ಪಷ್ಟನೆ ಕೇಳಿತ್ತು. ಪಕ್ಷಕ್ಕೆ ಬರೆದ ಎರಡು ಪುಟಗಳ ಪತ್ರದಲ್ಲಿ, ಸಿನ್ಹಾ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದಾರೆ ಮತ್ತು ವೈಯಕ್ತಿಕ ಕೆಲಸದ ನಿಮಿತ್ತ ವಿದೇಶ ಪ್ರವಾಸದಲ್ಲಿರುವುದರಿಂದ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ. ಹೀಗಾಗಿ, ನಾನು ಮತದಾನದ ಜವಾಬ್ದಾರಿಯನ್ನು ನಿರ್ವಹಿಸಿಲ್ಲ ಎಂದು ನೀವು ಆರೋಪಿಸಿರುವುದು ತಪ್ಪು ಎಂದು ಸಿನ್ಹಾ ಸಮರ್ಥಿಸಿಕೊಂಡರು.

ಯಶ್ವಂತ್ ಸಿನ್ಹಾ ಅವರಿಗೆ 2014 ರಲ್ಲಿ ಟಿಕೆಟ್ ನೀಡದಿದ್ದಾಗ ಬಿಜೆಪಿಯೊಂದಿಗೆ ಜಗಳವಾಡಿದ್ದರು. ಬಳಿಕ ತೃಣಮೂಲ ಕಾಂಗ್ರೆಸ್ ಸೇರಿದ್ದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ