AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: ಬಿಜೆಪಿ ವಿಷಪೂರಿತ ಹಾವಿಗಿಂತ ಕೆಟ್ಟದ್ದು ಎಂದ ಮಮತಾ ಬ್ಯಾನರ್ಜಿ

ಬಿಜೆಪಿ ವಿಷಪೂರಿತ ಹಾವಿಗಿಂತ ಕೆಟ್ಟದ್ದು, ಹಾವನ್ನಾದರೂ ನಂಬಬಹುದು ಆದರೆ ಬಿಜೆಪಿಯ ನಂಬಲಾಗದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಹೇಳಿದ್ದಾರೆ. ಗುರುವಾರ ಪಶ್ಚಿಮ ಬಂಗಾಳದ ಕೂಚ್​ ಬಿಹಾರದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದರು.

Lok Sabha Elections 2024: ಬಿಜೆಪಿ ವಿಷಪೂರಿತ ಹಾವಿಗಿಂತ ಕೆಟ್ಟದ್ದು ಎಂದ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
ನಯನಾ ರಾಜೀವ್
|

Updated on: Apr 05, 2024 | 8:05 AM

Share

ಬಿಜೆಪಿ ವಿಷಪೂರಿತ ಹಾವಿಗಿಂತ ಕೆಟ್ಟದ್ದು, ಹಾವನ್ನಾದರೂ ನಂಬಬಹುದು ಆದರೆ ಬಿಜೆಪಿಯ ನಂಬಲಾಗದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಹೇಳಿದ್ದಾರೆ. ಗುರುವಾರ ಪಶ್ಚಿಮ ಬಂಗಾಳದ ಕೂಚ್​ ಬಿಹಾರದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದರು.

2024 ರ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ತಮ್ಮ ತಯಾರಿಯಲ್ಲಿ ನಿರತವಾಗಿವೆ. ಬಿಜೆಪಿ ಚುನಾವಣಾ ನೀತಿ ಸಂಹಿತೆ ಪಾಲಿಸುತ್ತಿಲ್ಲ. ಶಿತಾಲ್ಕುಚಿಯಲ್ಲಿ ಗುಂಡಿಕ್ಕಿ ಕೊಂದವರು ಈಗ ಬಿರ್ಭೂಮ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಎಂದು ಆರೋಪಿಸಿದರು.

ಕಳೆದ 3 ವರ್ಷಗಳಿಂದ ವಸತಿ ಯೋಜನೆಗೆ ಹಣ ನೀಡುತ್ತಿಲ್ಲ, ರಸ್ತೆ ಹಣ ನೀಡುತ್ತಿಲ್ಲ, ಬಂಗಾಳ ಉಳಿದರೆ ದೇಶ ಉಳಿಯುತ್ತದೆ. ಕೇಂದ್ರ ತನಿಖಾ ಸಂಸ್ಥೆಗಳು, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಿಜೆಪಿಯ ಆದೇಶದಂತೆ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.

ಮತ್ತಷ್ಟು ಓದಿ: ತೃಣಮೂಲ ಸಂಸ್ಥಾಪನಾ ದಿನ; ಜನರ ಹಕ್ಕುಗಳನ್ನು ಕಾಪಾಡುವ ಹೋರಾಟ ಮುಂದುವರಿಸುವೆ: ಮಮತಾ ಬ್ಯಾನರ್ಜಿ

ಬಿಜೆಪಿ ಒಂದು ರಾಷ್ಟ್ರ, ಒಂದು ಪಕ್ಷ ಸಿದ್ಧಾಂತವನ್ನು ಅನುಸರಿಸುತ್ತಿದೆ, ಕೇಂದ್ರೀಯ ತನಿಖಾ ಸಂಸ್ಥೆಗಳ ಮುಂದೆ ತನ್ನ ಪಕ್ಷ ಟಿಎಂಸಿ ತಲೆ ಬಾಗದು, ಲೋಕಸಭಾ ಚುನಾವಣೆಗೂ ಮುನ್ನ ಬಿಎಸ್​ಎಫ್​ ಸ್ಥಳೀಯರಿಗೆ ಕಿರುಕುಳ ನೀಡುವ ಘಟನೆಗಳು ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ ಎಂದು ಹೇಳಿದ್ದಾರೆ. ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೆ ತರಲು ನಾವು ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್