AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್​ ಆನಂದ್​ರನ್ನು ಕೆಳಗಿಳಿಸಿದ ಮಾಯಾವತಿ

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮಂಗಳವಾರ ಉತ್ತರಾಧಿಕಾರಿ ಆಕಾಶ್ ಆನಂದ್ ಅವರನ್ನು ಎರಡು ಪ್ರಮುಖ ಹುದ್ದೆಗಳಿಂದ ವಜಾಗೊಳಿಸಿದ್ದಾರೆ. ಉತ್ತರಾಧಿಕಾರಿ ಆಕಾಶ್ ಆನಂದ್‌ಗೆ ಸೀತಾಪುರದಲ್ಲಿ ಉದ್ರೇಕಕಾರಿ ಭಾಷಣ ಮಾಡಿರುವುದು ಅವರಿಗೆ ಸಂಕಷ್ಟ ತಂದಿದೆ.

ಬಿಎಸ್​ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್​ ಆನಂದ್​ರನ್ನು ಕೆಳಗಿಳಿಸಿದ ಮಾಯಾವತಿ
ಮಾಯಾವತಿ
ನಯನಾ ರಾಜೀವ್
|

Updated on: May 08, 2024 | 10:33 AM

Share

ಕಳೆದ ಡಿಸೆಂಬರ್​ನಲ್ಲಷ್ಟೇ ಉತ್ತರ ಪ್ರದೇಶದ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿರುವ ಬಿಎಸ್​ಪಿ ಹೊಸ ಉತ್ತರಾಧಿಕಾರಿಯನ್ನಾಗಿ ಮಾಯಾವತಿ(Mayawati) ಸೋದರಳಿಯ ಆಕಾಶ್​ ಆನಂದ್​(Akash Anand)ರನ್ನು ನೇಮಕ ಮಾಡಿತ್ತು. ಇದೀಗ ಐದು ತಿಂಗಳಲ್ಲೇ ಆಕಾಶ್​ ಗದ್ದುಗೆಯಿಂದ ಕೆಳಗಿಳಿದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ್ದ ಆಕಾಶ್ ಆನಂದ್ ಮಾಯಾವತಿಯ ಬಹುತೇಕ ಎಲ್ಲಾ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಮಾಯಾವತಿ ಈ ನಿರ್ಧಾರ ತೆಗೆದುಕೊಳ್ಳಲು ಇದ್ದ ಕಾರಣವೇನೆಂಬುದು ಎಂಬುದು ಬಹಿರಂಗವಾಗಬೇಕಿದೆ.

ಸೀತಾಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆಕಾಶ್ ಆನಂದ್ ಬಿಜೆಪಿ ನಾಯಕರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು. ಆಕಾಶ್ ಆನಂದ್ ಅವರ ಈ ಉದ್ರೇಕಕಾರಿ ಭಾಷಣದ ನಂತರ, ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಯಿತು, ಅದರಲ್ಲಿ ಪಕ್ಷದ ಮೂವರು ಅಭ್ಯರ್ಥಿಗಳನ್ನೂ ಹೆಸರಿಸಲಾಯಿತು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಎಸ್ಪಿ ವರಿಷ್ಠೆ ಮಾಯಾವತಿ ಆಕಾಶ್ ಆನಂದ್ ರ್ಯಾಲಿಗಳಿಗೆ ನಿಷೇಧ ಹೇರಿದ್ದರು.

ಇದರ ಹೊರತಾಗಿಯೂ ಅವರು ದೆಹಲಿಯಲ್ಲಿ ಪಕ್ಷದ ಬೆಂಬಲಿಗರು, ವಿದ್ಯಾರ್ಥಿಗಳು, ಶಿಕ್ಷಕರು ಮುಂತಾದವರನ್ನು ಸಂಪರ್ಕಿಸುತ್ತಲೇ ಇದ್ದರು ಮತ್ತು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಮುಂದುವರೆಸಿದರು. ಪಕ್ಷ ಮತ್ತು ಚಳವಳಿಯ ಹಿತದೃಷ್ಟಿಯಿಂದ ಮೊದಲಿನಂತೆ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಂತೆ ಅವರು ಆಕಾಶ್ ಆನಂದ್ ಅವರ ತಂದೆ ಮತ್ತು ಅವರ ಸಹೋದರ ಆನಂದ್ ಕುಮಾರ್ ಅವರನ್ನು ಕೇಳಿದ್ದಾರೆ.

ಮತ್ತಷ್ಟು ಓದಿ: ಬಿಎಸ್​ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ

ಪಕ್ಷ ಮತ್ತು ಚಳವಳಿಯ ಹಿತಾಸಕ್ತಿ ಮತ್ತು ಡಾ.ಅಂಬೇಡ್ಕರ್ ಅವರ ರಥವನ್ನು ಮುನ್ನಡೆಸುವಲ್ಲಿ ಬಿಎಸ್‌ಪಿ ನಾಯಕತ್ವವು ಯಾವುದೇ ರೀತಿಯ ತ್ಯಾಗಕ್ಕೂ ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ. ಒಂದು ದಶಕದ ಹಿಂದೆ ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸಿದ್ದಂತಹ ಬಿಎಸ್​ಪಿ ಈಗ ಸಧ್ಯಕ್ಕೆ ಅಸ್ತಿತ್ವವನ್ನೇ ಕಳೆದುಕೊಳ್ಳುವ ಅಪಾಯದಲ್ಲಿದೆ. ಯಾವುದೇ ಲೋಕಸಭಾ ಸದಸ್ಯರನ್ನು ಹೊಂದಿರದ ಬಿಎಸ್​ಪಿ, ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬೆರಳೆಣಿಕೆ ಸದಸ್ಯರನ್ನು ಹೊಂದಿದೆ. ವರ್ಷದಿಂದ ವರ್ಷಕ್ಕೆ ಚುನಾವಣೆಯಿಂದ ಚುನಾವಣೆಗೆ ಬಿಎಸ್​ಪಿಯ ಚುನಾಯಿತ ಪ್ರತಿನಿಧಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ.

ಯಾರು ಈ ಆಕಾಶ್ ಆನಂದ್? ಮಾಯಾವತಿ ಅವರ ಸೋದರಳಿಯ ಆಕಾಶ್ ಆನಂದ್ ಲಂಡನ್‌ನಲ್ಲಿ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ ಓದಿದ್ದಾರೆ. ಆಕಾಶ್ ರಾಜಕೀಯ ಪ್ರವೇಶಿಸಿದ್ದು 2017ರಲ್ಲಿ , ಸಹರಾನ್‌ಪುರ ಸಮಾವೇಶದಲ್ಲಿ ಮೊದಲ ಬಾರಿಗೆ ಮಾಯಾವತಿಯೊಂದಿಗೆ ಆಕಾಶ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು‌. ಮಾಯಾವತಿ ಅವರು 2017 ರಲ್ಲಿ ದೊಡ್ಡ ಸಮಾವೇಶ ನಡೆಸುವ ಮೂಲಕ ಆಕಾಶ್ ಆನಂದ್ ಅವರನ್ನು ರಾಜಕೀಯಕ್ಕೆ ಕರೆತರುವುದಾಗಿ ಘೋಷಿಸಿದ್ದರು. ಈ ಹಿಂದೆ ಆಕಾಶ್ ಅವರು ಬಿಎಸ್ಪಿ ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮತ್ತಷ್ಟು ಓದಿ: ಮಯಾವತಿ ಉತ್ತರಾಧಿಕಾರಿಯಾಗಿ ನೇಮಕವಾದ ಆಕಾಶ್ ಆನಂದ್ ಯಾರು? ಇಲ್ಲಿದೆ ವಿವರ

ಅಲ್ಲದೇ ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ್ದ ಆಕಾಶ್ ಆನಂದ್ ಮಾಯಾವತಿಯ ಬಹುತೇಕ ಎಲ್ಲಾ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು. ಇದೀಗ ಮಾಯಾವತಿ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್