AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರವನ್ನು ಶುದ್ಧೀಕರಿಸುತ್ತೇವೆ: ನಾನಾ ಪಟೋಲೆ

ಇಂಡಿಯಾ ಮೈತ್ರಿಕೂಟ ಈ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮ ಮಂದಿರವನ್ನು ಶುದ್ಧೀಕರಿಸಲಾಗುವುದು ಎಂದು ಮಹಾರಾಷ್ಟ್ರದ ಕಾಂಗ್ರೆಸ್​ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ.

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರವನ್ನು ಶುದ್ಧೀಕರಿಸುತ್ತೇವೆ: ನಾನಾ ಪಟೋಲೆ
ನಾನಾ ಪಟೋಲೆImage Credit source: India Today
ನಯನಾ ರಾಜೀವ್
|

Updated on: May 10, 2024 | 2:57 PM

Share

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರ(Ram Mandir)ವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್​ ಅಧ್ಯಕ್ಷ ನಾನಾ ಪಟೋಲೆ(Nana Patole) ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿಷ್ಟಾಚಾರಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದು, ಪ್ರತಿಪಕ್ಷಗಳ ಮೈತ್ರಿಕೂಟ ಸರ್ಕಾರ ರಚಿಸಿದರೆ ಅದನ್ನು ಸರಿಪಡಿಸಲಾಗುವುದು ಎಂದು ಪಟೋಲೆ ಹೇಳಿದ್ದಾರೆ.

ಶಂಕರಾಚಾರ್ಯರು ಪ್ರಾಣಪತ್ರಿಷ್ಠೆಯನ್ನು ವಿರೋಧಿಸಿದ್ದರು. ಆ ಸ್ಥಳದಲ್ಲಿ ರಾಮ ದರ್ಬಾರ್ ಸ್ಥಾಪಿಸಲಾಗುವುದು. ಇದು ರಾಮನ ವಿಗ್ರಹವಲ್ಲ, ಆದರೆ ರಾಮ್ ಲಲ್ಲಾನ ಮಗುವಿನ ರೂಪ ಎಂದು ಕಾಂಗ್ರೆಸ್ ನಾಯಕ ಹೇಳಿದರು.

ರಾಮ ಮಂದಿರ ನಿರ್ಮಾಣದಲ್ಲಿ ನರೇಂದ್ರ ಮೋದಿ ಶಿಷ್ಟಾಚಾರಕ್ಕೆ ವಿರುದ್ಧವಾಗಿ ವರ್ತಿಸಿದ್ದಾರೆ. ನಾವು ಅದನ್ನು ತಿದ್ದುಪಡಿ ಮತ್ತು ಧರ್ಮದ ಮೂಲಕ ಮಾಡುತ್ತೇವೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಅಯೋಧ್ಯೆ ತೀರ್ಪು ರದ್ದು ಮಾಡುವೆ ಎಂದಿದ್ದ ರಾಹುಲ್​​​​​​​​​ : ಮಾಜಿ ಕಾಂಗ್ರೆಸ್​​ ನಾಯಕ

ಮಹಾರಾಷ್ಟ್ರದ ಒಟ್ಟು 48 ಲೋಕಸಭಾ ಸ್ಥಾನಗಳಲ್ಲಿ ಇಂಡಿಯಾ ಬ್ಲಾಕ್ 35 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಪಟೋಲೆ ವಿಶ್ವಾಸ ವ್ಯಕ್ತಪಡಿಸಿದರು. ಏಕನಾಥ್ ಶಿಂಧೆ ನೇತೃತ್ವದ ರಾಜ್ಯದಲ್ಲಿ ಮಹಾಯುತಿ ಮೈತ್ರಿ ಪತನವಾಗಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.

ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಸರ್ಕಾರ ಪತನವಾಗಲಿದೆ ಎಂದು ಪಟೋಲೆ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More