AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರವನ್ನು ಶುದ್ಧೀಕರಿಸುತ್ತೇವೆ: ನಾನಾ ಪಟೋಲೆ

ಇಂಡಿಯಾ ಮೈತ್ರಿಕೂಟ ಈ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮ ಮಂದಿರವನ್ನು ಶುದ್ಧೀಕರಿಸಲಾಗುವುದು ಎಂದು ಮಹಾರಾಷ್ಟ್ರದ ಕಾಂಗ್ರೆಸ್​ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ.

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರವನ್ನು ಶುದ್ಧೀಕರಿಸುತ್ತೇವೆ: ನಾನಾ ಪಟೋಲೆ
ನಾನಾ ಪಟೋಲೆImage Credit source: India Today
ನಯನಾ ರಾಜೀವ್
|

Updated on: May 10, 2024 | 2:57 PM

Share

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರ(Ram Mandir)ವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್​ ಅಧ್ಯಕ್ಷ ನಾನಾ ಪಟೋಲೆ(Nana Patole) ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿಷ್ಟಾಚಾರಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದು, ಪ್ರತಿಪಕ್ಷಗಳ ಮೈತ್ರಿಕೂಟ ಸರ್ಕಾರ ರಚಿಸಿದರೆ ಅದನ್ನು ಸರಿಪಡಿಸಲಾಗುವುದು ಎಂದು ಪಟೋಲೆ ಹೇಳಿದ್ದಾರೆ.

ಶಂಕರಾಚಾರ್ಯರು ಪ್ರಾಣಪತ್ರಿಷ್ಠೆಯನ್ನು ವಿರೋಧಿಸಿದ್ದರು. ಆ ಸ್ಥಳದಲ್ಲಿ ರಾಮ ದರ್ಬಾರ್ ಸ್ಥಾಪಿಸಲಾಗುವುದು. ಇದು ರಾಮನ ವಿಗ್ರಹವಲ್ಲ, ಆದರೆ ರಾಮ್ ಲಲ್ಲಾನ ಮಗುವಿನ ರೂಪ ಎಂದು ಕಾಂಗ್ರೆಸ್ ನಾಯಕ ಹೇಳಿದರು.

ರಾಮ ಮಂದಿರ ನಿರ್ಮಾಣದಲ್ಲಿ ನರೇಂದ್ರ ಮೋದಿ ಶಿಷ್ಟಾಚಾರಕ್ಕೆ ವಿರುದ್ಧವಾಗಿ ವರ್ತಿಸಿದ್ದಾರೆ. ನಾವು ಅದನ್ನು ತಿದ್ದುಪಡಿ ಮತ್ತು ಧರ್ಮದ ಮೂಲಕ ಮಾಡುತ್ತೇವೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಅಯೋಧ್ಯೆ ತೀರ್ಪು ರದ್ದು ಮಾಡುವೆ ಎಂದಿದ್ದ ರಾಹುಲ್​​​​​​​​​ : ಮಾಜಿ ಕಾಂಗ್ರೆಸ್​​ ನಾಯಕ

ಮಹಾರಾಷ್ಟ್ರದ ಒಟ್ಟು 48 ಲೋಕಸಭಾ ಸ್ಥಾನಗಳಲ್ಲಿ ಇಂಡಿಯಾ ಬ್ಲಾಕ್ 35 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಪಟೋಲೆ ವಿಶ್ವಾಸ ವ್ಯಕ್ತಪಡಿಸಿದರು. ಏಕನಾಥ್ ಶಿಂಧೆ ನೇತೃತ್ವದ ರಾಜ್ಯದಲ್ಲಿ ಮಹಾಯುತಿ ಮೈತ್ರಿ ಪತನವಾಗಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.

ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಸರ್ಕಾರ ಪತನವಾಗಲಿದೆ ಎಂದು ಪಟೋಲೆ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ