AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟಿಕೆಟ್ ಬೇಡವೆಂದು ಧಿಕ್ಕರಿಸಿ ಹೋಗಿದ್ದ ಭೋಜ್​ಪುರಿ ನಟ ಪವನ್​ ಸಿಂಗ್​ ನಿರ್ಧಾರ ಮತ್ತೆ ಬದಲು

ಭೋಜ್​ಪುರಿ ನಟ ಪವನ್​ಸಿಂಗ್ ಮತ್ತೆ ಯೂಟರ್ನ್​ ಹೊಡೆದಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಪವನ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಟಿಕೆಟ್ ಬೇಡವೆಂದು ಧಿಕ್ಕರಿಸಿ ಹೋಗಿದ್ದ ಭೋಜ್​ಪುರಿ ನಟ ಪವನ್​ ಸಿಂಗ್​ ನಿರ್ಧಾರ ಮತ್ತೆ ಬದಲು
ಪವನ್​ ಸಿಂಗ್
ನಯನಾ ರಾಜೀವ್
|

Updated on:Mar 13, 2024 | 3:14 PM

Share

ಮುಂಬರುವ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ನಿರಾಕರಿಸಿದ್ದ ಭೋಜ್​ಪುರಿ ನಟ ಪವನ್​ ಸಿಂಗ್ ಮತ್ತೆ ಯು-ಟರ್ನ್​ ತೆಗೆದುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಪವನ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಭೋಜ್​ಪುರಿ ಗಾಯಕ, ನಟ ಪವನ್​ ಅವರನ್ನು ಪಶ್ಚಿಮ ಬಂಗಾಳದ ಅಸನ್ಸೋಲ್​ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಆದರೆ ಟಿಕೆಟ್ ಸಿಕ್ಕ ಕೇವಲ 24 ಗಂಟೆಗಳ ನಂತರ ಅವರು ಅಸನ್ಸೋಲ್​ನಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ಪ್ರಸ್ತುತ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು ಅಸನ್ಸೋಲ್​ ಕ್ಷೇತ್ರದಿಂದ ಟಿಎಂಸಿ ಸಂಸದರಾಗಿದ್ದಾರೆ.

ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಅಸನ್ಸೋಲ್​ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ ಬಳಿಕ ಪವನ್​ ಸಿಂಗ್ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಸಮಯ ಬಂದ ನಂತರ ತಿಳಿಸಲಾಗುವುದು ಎಂದು ಪವನ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ 24 ಗಂಟೆಗಳಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿದ ಪವನ್​ ಸಿಂಗ್

ಪವನ್​ ಸಿಂಗ್ ಯಾರು? ಪವನ್​ ಸಿಂಗ್ ಭೋಜ್​ಪುರಿ ಗಾಯಕ, ಅವರು ಬಿಹಾರದಲ್ಲಿ ಜನವರಿ 5, 1986ರಲ್ಲಿ ಜನಿಸಿದರು. ಅವರು ರಜಪೂತ ಕುಟುಂಬಕ್ಕೆ ಸೇರಿದವರು. ಅವರು ಭೋಜ್​ಪುರಿ ಚಿತ್ರರಂಗದ ಅತ್ಯಂತ ದುಬಾರಿ ನಟರಲ್ಲಿ ಒಬ್ಬರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:13 pm, Wed, 13 March 24

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ