AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟಿಕೆಟ್ ಬೇಡವೆಂದು ಧಿಕ್ಕರಿಸಿ ಹೋಗಿದ್ದ ಭೋಜ್​ಪುರಿ ನಟ ಪವನ್​ ಸಿಂಗ್​ ನಿರ್ಧಾರ ಮತ್ತೆ ಬದಲು

ಭೋಜ್​ಪುರಿ ನಟ ಪವನ್​ಸಿಂಗ್ ಮತ್ತೆ ಯೂಟರ್ನ್​ ಹೊಡೆದಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಪವನ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಟಿಕೆಟ್ ಬೇಡವೆಂದು ಧಿಕ್ಕರಿಸಿ ಹೋಗಿದ್ದ ಭೋಜ್​ಪುರಿ ನಟ ಪವನ್​ ಸಿಂಗ್​ ನಿರ್ಧಾರ ಮತ್ತೆ ಬದಲು
ಪವನ್​ ಸಿಂಗ್
ನಯನಾ ರಾಜೀವ್
|

Updated on:Mar 13, 2024 | 3:14 PM

Share

ಮುಂಬರುವ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ನಿರಾಕರಿಸಿದ್ದ ಭೋಜ್​ಪುರಿ ನಟ ಪವನ್​ ಸಿಂಗ್ ಮತ್ತೆ ಯು-ಟರ್ನ್​ ತೆಗೆದುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಪವನ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಭೋಜ್​ಪುರಿ ಗಾಯಕ, ನಟ ಪವನ್​ ಅವರನ್ನು ಪಶ್ಚಿಮ ಬಂಗಾಳದ ಅಸನ್ಸೋಲ್​ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಆದರೆ ಟಿಕೆಟ್ ಸಿಕ್ಕ ಕೇವಲ 24 ಗಂಟೆಗಳ ನಂತರ ಅವರು ಅಸನ್ಸೋಲ್​ನಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ಪ್ರಸ್ತುತ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು ಅಸನ್ಸೋಲ್​ ಕ್ಷೇತ್ರದಿಂದ ಟಿಎಂಸಿ ಸಂಸದರಾಗಿದ್ದಾರೆ.

ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಅಸನ್ಸೋಲ್​ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ ಬಳಿಕ ಪವನ್​ ಸಿಂಗ್ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಸಮಯ ಬಂದ ನಂತರ ತಿಳಿಸಲಾಗುವುದು ಎಂದು ಪವನ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ 24 ಗಂಟೆಗಳಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿದ ಪವನ್​ ಸಿಂಗ್

ಪವನ್​ ಸಿಂಗ್ ಯಾರು? ಪವನ್​ ಸಿಂಗ್ ಭೋಜ್​ಪುರಿ ಗಾಯಕ, ಅವರು ಬಿಹಾರದಲ್ಲಿ ಜನವರಿ 5, 1986ರಲ್ಲಿ ಜನಿಸಿದರು. ಅವರು ರಜಪೂತ ಕುಟುಂಬಕ್ಕೆ ಸೇರಿದವರು. ಅವರು ಭೋಜ್​ಪುರಿ ಚಿತ್ರರಂಗದ ಅತ್ಯಂತ ದುಬಾರಿ ನಟರಲ್ಲಿ ಒಬ್ಬರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:13 pm, Wed, 13 March 24

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ