AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Kerala Visit: ಲೋಕಸಭೆ ಚುನಾವಣೆ, ಕೇರಳಕ್ಕೆ ಮತ್ತೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಎರಡು ದಿನಗಳ ಕೇರಳ(Kerala)  ಪ್ರವಾಸ ಕೈಗೊಳ್ಳಲಿದ್ದಾರೆ, ಒಂದು ತಿಂಗಳೊಳಗೆ ಇದು ಅವರ ಎರಡನೇ ಭೇಟಿಯಾಗಿದೆ. ಜನವರಿ 16ಕ್ಕೆ ಕೇರಳ ತಲುಪಲಿದ್ದು ಕೊಚ್ಚಿಯಲ್ಲಿ ರೋಡ್​ ಶೋ ನಡೆಸಲಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ಅಭಿನಂದಿಸಲು ಬಿಜೆಪಿಯ ರಾಜ್ಯ ಘಟಕವು ಆಯೋಜಿಸಿದ್ದ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ಜನವರಿ 3 ರಂದು ಕೇರಳಕ್ಕೆ ಬಂದಿದ್ದರು.

PM Modi Kerala Visit: ಲೋಕಸಭೆ ಚುನಾವಣೆ, ಕೇರಳಕ್ಕೆ ಮತ್ತೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
ನರೇಂದ್ರ ಮೋದಿImage Credit source: The Week
ನಯನಾ ರಾಜೀವ್
|

Updated on: Jan 10, 2024 | 10:52 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಎರಡು ದಿನಗಳ ಕೇರಳ(Kerala)  ಪ್ರವಾಸ ಕೈಗೊಳ್ಳಲಿದ್ದಾರೆ, ಒಂದು ತಿಂಗಳೊಳಗೆ ಇದು ಅವರ ಎರಡನೇ ಭೇಟಿಯಾಗಿದೆ. ಜನವರಿ 16ಕ್ಕೆ ಕೇರಳ ತಲುಪಲಿದ್ದು ಕೊಚ್ಚಿಯಲ್ಲಿ ರೋಡ್​ ಶೋ ನಡೆಸಲಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ಅಭಿನಂದಿಸಲು ಬಿಜೆಪಿಯ ರಾಜ್ಯ ಘಟಕವು ಆಯೋಜಿಸಿದ್ದ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ಜನವರಿ 3 ರಂದು ಕೇರಳಕ್ಕೆ ಬಂದಿದ್ದರು.

ನಂತರ ಜನವರಿ 17 ರಂದು ಗುರುವಾಯೂರಿನಲ್ಲಿ ನಡೆಯಲಿರುವ ನಟ-ರಾಜಕಾರಣಿ ಸುರೇಶ್ ಗೋಪಿ ಅವರ ಮಗಳ ಮದುವೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜನವರಿ 16ರಂದು ಕೊಚ್ಚಿಗೆ ತಲುಪಲಿದ್ದು, ಸಂಜೆ 5 ಗಂಟೆ ಸುಮಾರಿಗೆ ರೋಡ್​ ಶೋ ನಡೆಯಲಿದೆ. ಬುಧವಾರ ಗುರುವಾಯೂರಿಗೆ ತೆರಳಲಿದ್ದಾರೆ ಬೆಳಗ್ಗೆ 7 ಗಂಟೆಗೆ ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ 10 ಗಂಟೆಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಲೋಕಸಭೆ ಚುನಾವಣೆಯ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ಬಿಜೆಪಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ಅವರು ಕೇರಳದಲ್ಲಿ ಕೇಂದ್ರ ಸರ್ಕಾರದ ಪ್ರಾಯೋಜಿತ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಬುಧವಾರ ಸಂಜೆ ವೇಳೆಗೆ ಪ್ರಧಾನಿ ವಾಪಸಾಗಲಿದ್ದಾರೆ.

ಪ್ರಧಾನಿ ಮತ್ತು ಕೇಂದ್ರ ನಾಯಕರ ಭೇಟಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಉತ್ತೇಜನ ನೀಡಲಿದೆ ಎಂದು ಬಿಜೆಪಿ ನಂಬಿದೆ. ಅಮಿತ್​ ಶಾ ಕೂಡ ಆಗಮಿಸುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Narendra Modi: ಕೇರಳದ ಮಹಾನ್ ವ್ಯಕ್ತಿಗಳು ಯುವಕರಿಗೆ ಸ್ಫೂರ್ತಿಯಾಗಬೇಕು: ನರೇಂದ್ರ ಮೋದಿ

ಜನವರಿ 27 ರೊಳಗೆ ತನ್ನ ಸ್ಟಾರ್ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ನಿರ್ಧರಿಸಿದ್ದು, ಪಕ್ಷವು ಹಲವು ಕಡೆ ಪಾದಯಾತ್ರೆಗಳನ್ನು ನಡೆಸಲಿದೆ. ತ್ರಿಶೂರ್‌ನಲ್ಲಿ ಸುರೇಶ್ ಗೋಪಿ, ಅಟ್ಟಿಂಗಲ್‌ನಲ್ಲಿ ವಿ ಮುರಳೀಧರನ್ ಮತ್ತು ಪಾಲಕ್ಕಾಡ್‌ಗೆ ಸಿ ಕೃಷ್ಣಕುಮಾರ್ ಹೆಸರುಗಳು ಚರ್ಚೆಯಲ್ಲಿವೆ.

ತಿರುವನಂತಪುರಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸಲು ಬಿಜೆಪಿಯ ರಾಜ್ಯ ಘಟಕವು ಹೈಕಮಾಂಡ್​ ಅನ್ನು ಕೇಳಿದೆ ಎಂದು ವರದಿಯಾಗಿದೆ. ಬಿಜೆಪಿಗೆ ಹೊಸದಾಗಿ ಸೇರ್ಪಡೆಗೊಂಡಿರುವ ಅನಿಲ್ ಆಂಟೋನಿ ಮಧ್ಯ ಕೇರಳದ ಒಂದು ಕ್ಷೇತ್ರದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?