AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ನನ್ನವರು, ಮೋದಿ ನಿಮ್ಮವ ಎಂದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಇಂದು ತೆಲಂಗಾಣ ಪ್ರವಾಸದಲ್ಲಿದ್ದಾರೆ, ಅವರು 56,000 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಬಳಿಕ ಮಾತನಾಡಿ, ನೀವು ನನ್ನವರು, ಮೋದಿ ನಿಮ್ಮವ ನಿಮ್ಮೆಲ್ಲಾ ಕಷ್ಟಗಳಿಗೆ ಮೋದಿ ಇದ್ದಾನೆ ಎಂದು ಹೇಳಿದ್ದಾರೆ.

ನೀವು ನನ್ನವರು, ಮೋದಿ ನಿಮ್ಮವ ಎಂದ ಪ್ರಧಾನಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Mar 04, 2024 | 2:45 PM

ನೀವು ನನ್ನವರು ಮೋದಿ ನಿಮ್ಮವ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ತೆಲಂಗಾಣದ ಆದಿಲಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ನನ್ನ ಜೀವನವು ತೆರೆದ ಪುಸ್ತಕವಾಗಿದೆ, ನಾನು ಬಾಲ್ಯದಲ್ಲಿ ನನ್ನ ಮನೆಯನ್ನು ತೊರೆದಿದ್ದೇನೆ, ನಾನು ದೇಶವಾಸಿಗಳಿಗಾಗಿ ಬದುಕುವ ಕನಸನ್ನು ಹೊಂದಿದ್ದೇನೆ. ನನಗೆ ಯಾವುದೇ ವೈಯಕ್ತಿಕ ಕನಸುಗಳಿಲ್ಲ, ಆದರೆ ನಿಮ್ಮ ಕನಸುಗಳು ನನ್ನ ನಿರ್ಣಯವಾಗಿರುತ್ತದೆ ಎಂದು ಪ್ರಧಾನಿ ಹೇಳಿದರು.

ದೇಶದ ಕೋಟ್ಯಂತರ ಜನರು ನನ್ನನ್ನು ತಮ್ಮ ಕುಟುಂಬದ ಸದಸ್ಯನೆಂದು ಪರಿಗಣಿಸುತ್ತಾರೆ ಎಂದು ಅವರು ಹೇಳಿದರು. ದೇಶದ 140 ಕೋಟಿ ಜನರಿಗೆ ನಾನು ಇದನ್ನು ಹೇಳುತ್ತೇನೆ, ಇದು ನನ್ನ ಕುಟುಂಬ, ಯಾರೂ ಇಲ್ಲದವರಿಗೂ ಮೋದಿ ಇದ್ದಾನೆ ಎಂದರು.

ಎರಡು ದಿನಗಳ ದಕ್ಷಿಣ ಭಾರತದ ಪ್ರಯಾಣದ ಮೊದಲ ದಿನವಾಗಿದೆ. 56,000 ಕೋಟಿ ರೂ.ಗೂ ಹೆಚ್ಚು ಮೊತ್ತದ 30 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನೂ ನೆರವೇರಿಸಿದರು. ಕಳೆದ 15 ದಿನಗಳಲ್ಲಿ, ಹಲವಾರು ಅಭಿವೃದ್ಧಿ ಯೋಜನೆಗಳು ಪ್ರಾರಂಭವಾಗಿವೆ, ನಾವು ಆತ್ಮನಿರ್ಭರ ಭಾರತದಿಂದ ವಿಕಸಿತ ಭಾರತಕ್ಕೆ ಹೋಗುತ್ತಿದ್ದೇವೆ. ಚುನಾವಣೆಗಳು ಮುಖ್ಯವಲ್ಲ, ಆದರೆ ಅಭಿವೃದ್ಧಿ ಮುಖ್ಯ ಎಂದರು.

ಮತ್ತಷ್ಟು ಓದಿ: PM Modi Telangana visit: ತೆಲಂಗಾಣದಲ್ಲಿ 62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರದ ಅಭಿವೃದ್ಧಿಗೆ ಬದ್ಧವಾಗಿದೆ. ಆದ್ದರಿಂದಲೇ ತೆಲಂಗಾಣದ ಜನರು ಕೂಡ ಅಬ್ಕಿ ಬಾರ್, 400 ಪಾರ್ ಎಂದು ಹೇಳುತ್ತಿದ್ದಾರೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣದಲ್ಲಿ ತೊಡಗಿರುವ ವಿರೋಧ ಪಕ್ಷದ ಇಂಡಿಯಾ ಬಣದ ನಾಯಕರು ಈಗ ಚಿಂತಿತರಾಗಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ