AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನ​ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್​ ಕೌರ್ ಬಿಜೆಪಿಗೆ ಸೇರ್ಪಡೆ

ಪಂಜಾಬ್​ನ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್​ ಕೌರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಕಾಂಗ್ರೆಸ್ ಫೆಬ್ರವರಿ 3, 2023 ರಂದು ಪ್ರಣೀತ್ ಅವರನ್ನು ಅಮಾನತುಗೊಳಿಸಿತ್ತು.

ಪಂಜಾಬ್​ನ​ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್​ ಕೌರ್ ಬಿಜೆಪಿಗೆ ಸೇರ್ಪಡೆ
ಪ್ರಣೀತ್​ ಕೌರ್Image Credit source: India TV
ನಯನಾ ರಾಜೀವ್
|

Updated on: Mar 14, 2024 | 2:42 PM

Share

ಲೋಕಸಭಾ ಚುನಾವಣೆ(Lok Sabha Election) ಹೊಸ್ತಿಲಲ್ಲಿ ಪಂಜಾಬ್​ನಲ್ಲಿ ಕಾಂಗ್ರೆಸ್​ಗೆ ಹೊಡೆತ ಬಿದ್ದಿದೆ. ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್​ ಕೌರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಪಟಿಯಾಲ ಸಂಸದೆ ಪ್ರಣೀತ್ ಕೌರ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಅಂದಿನಿಂದ ಅವರು ಶೀಘ್ರದಲ್ಲೇ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹ ಇತ್ತು.

ಪ್ರಣೀತ್ ಕೌರ್ ಪಂಜಾಬ್‌ನ ಪಟಿಯಾಲಾ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಸಂಸದರಾಗಿದ್ದಾರೆ. ಕಳೆದ 25 ವರ್ಷಗಳಿಂದ ಪಟಿಯಾಲಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾರಣ ಬಿಜೆಪಿಯು ಅವರಿಗೆ ಪಟಿಯಾಲ ಕ್ಷೇತ್ರವನ್ನು ನೀಡಬಹುದು. ಇದರೊಂದಿಗೆ ಬಿಜೆಪಿ ಅಭ್ಯರ್ಥಿಯೊಬ್ಬರು ಈ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವುದು 30 ವರ್ಷಗಳಲ್ಲಿ ಇದೇ ಮೊದಲು.

ಕಾಂಗ್ರೆಸ್ ಅಮಾನತು ಮಾಡಿತ್ತು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಕಾಂಗ್ರೆಸ್ ಫೆಬ್ರವರಿ 3, 2023 ರಂದು ಪ್ರಣೀತ್ ಅವರನ್ನು ಅಮಾನತುಗೊಳಿಸಿತ್ತು. ಲೋಕಸಭೆ ಸದಸ್ಯತ್ವ ಕಳೆದುಕೊಳ್ಳಲು ಇಷ್ಟವಿಲ್ಲದ ಕಾರಣ ಪ್ರಣೀತ್ ಕೌರ್ ಪಕ್ಷಕ್ಕೆ ರಾಜೀನಾಮೆ ನೀಡಿರಲಿಲ್ಲ. ಪ್ರಣೀತ್ ಅವರು ನಿರಂತರವಾಗಿ ಬಿಜೆಪಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದರು ಎಂಬ ಆರೋಪ ಪ್ರಣೀತ್ ವಿರುದ್ಧ ಕೇಳಿಬಂದಿದ್ದವು. ಅಷ್ಟೇ ಅಲ್ಲ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲೂ ಭಾಗವಹಿಸಿರಲಿಲ್ಲ.

ಮತ್ತಷ್ಟು ಓದಿ: ಪಂಜಾಬ್​ನಲ್ಲಿ ಏಕಾಂಗಿ ಸ್ಪರ್ಧೆ: 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಆಮ್​ ಆದ್ಮಿ ಪಕ್ಷ

ಪಂಜಾಬ್​ನಲ್ಲಿ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಆಮ್​ ಆದ್ಮಿ ಪಕ್ಷ ಆಮ್ ಆದ್ಮಿ ಪಕ್ಷ (ಎಎಪಿ) ಲೋಕಸಭಾ ಚುನಾವಣೆಗೆ ಪಂಜಾಬ್‌ನಿಂದ 8 ಅಭ್ಯರ್ಥಿಗಳ (ಎಎಪಿ ಅಭ್ಯರ್ಥಿಗಳ ಪಟ್ಟಿ) ಪಟ್ಟಿಯನ್ನು ಬಿಡುಗಡೆ ಮಾಡಿದೆ .

ಆಮ್ ಆದ್ಮಿ ಪಕ್ಷವು ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಅಮೃತಸರದಿಂದ ಕುಲದೀಪ್ ಸಿಂಗ್ ಧಲಿವಾಲ್, ಖದೂರ್ ಸಾಹಿಬ್‌ನಿಂದ ಲಾಲ್ಜಿತ್ ಸಿಂಗ್ ಭುಲ್ಲರ್, ಜಲಂಧರ್‌ನಿಂದ ಸುಶೀಲ್ ಕುಮಾರ್ ರಿಂಕು, ಫತೇಘರ್ ಸಾಹಿಬ್‌ನಿಂದ ಗುರುಪ್ರೀತ್ ಸಿಂಗ್ ಜಿಪಿ, ಫರೀದ್‌ಕೋಟ್‌ನಿಂದ ಕರಮ್‌ಜೀತ್ ಅನ್ಮೋಲ್, ಬಟಿಂಡಾದಿಂದ ಗುರ್ಮೀತ್ ಸಿಂಗ್ ಖುಡಿಯಾ, ಗುರ್ಮೀತ್ ಸಿಂಗ್ ಖುಡಿಯಾ ವೈದ್ಯ ಬಲ್ಬೀರ್ ಸಿಂಗ್ ಅವರಿಗೆ ಪಟಿಯಾಲ ಮತ್ತು ಮೀತ್ ಮತ್ತು ಪಟಿಯಾಲದಿಂದ ಟಿಕೆಟ್ ನೀಡಲಾಗಿದೆ.

ಆಮ್​ ಆದ್ಮಿ ಪಕ್ಷವು ಮೊದಲ ಪಟ್ಟಿಯಲ್ಲಿ ಟಿಕೆಟ್​ ನೀಡಿರುವ ಅಭ್ಯರ್ಥಿಗಳೆಂದರೆ ಪಂಜಾಬ್​ನ ಹಾಲಿ ಶಾಸಕರು ಹಾಗೂ ಸಚಿವರು. ದೆಹಲಿಯ ಮಾದರಿಯಲ್ಲಿ ಪಂಜಾಬ್​ನಲ್ಲಿಯೂ ಆಮ್​ ಆದ್ಮಿ ಪಕ್ಷ ಹೆಚ್ಚಿನ ಶಾಸಕರನ್ನು ಕಣಕ್ಕಿಳಿಸಿದೆ. ಆಮ್​ ಆದ್ಮಿ ಪಕ್ಷವು ಪಂಜಾಬ್​ನಲ್ಲಿ ಇಂಡಿಯಾ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ. ಪಂಜಾಬ್​ನಲ್ಲಿ 13 ಲೋಕಸಭಾ ಕ್ಷೇತ್ರಗಳಿವೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಇಲ್ಲಿಂದ ಒಂದು ಸ್ಥಾನವನ್ನು ಗೆದ್ದಿತ್ತು. ಆಗ ಭಗವಂತ್ ಮಾನ್ ಸಂಗ್ರೂರ್​ನಿಂದ ಗೆದ್ದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ