AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಕ್ಷೇತ್ರವನ್ನು ಆರಿಸಿ ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ, ರಾಹುಲ್ ಗಾಂಧಿಗೆ ಸ್ಮೃತಿ ಬಹಿರಂಗ ಸವಾಲು

ದೇಶದಲ್ಲಿ ಕತ್ತೆಲೆ ಇದ್ದಾಗ ಗಾಂಧಿ ಕುಟುಂಬದಲ್ಲಿ ಮಾತ್ರ ಬೆಳಕಿತ್ತು, ಆ ಅಹಂಕಾರ ಇನ್ನೂ ಹಾಗೆಯೇ ಇದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ರಾಮ ಮಂದಿರ ಶಂಕುಸ್ಥಾಪನೆ ನಡೆಯುತ್ತಿದ್ದಾಗ ಅವರನ್ನೂ ಆಹ್ವಾನಿಸಲಾಗಿತ್ತು. ಆದರೆ ಅವರು ಅದನ್ನು ತಿರಸ್ಕರಿಸಿದರು. ರಾಹುಲ್ ಗಾಂಧಿಯವರೇ ನೀವು ಕ್ಷೇತ್ರವನ್ನು ಆರಿಸಿ, ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ, ಹತ್ತು ವರ್ಷಗಳ ಚರ್ಚೆ ನಡೆದುಬಿಡಲಿ ಎಂದರು.

ನೀವು ಕ್ಷೇತ್ರವನ್ನು ಆರಿಸಿ ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ, ರಾಹುಲ್ ಗಾಂಧಿಗೆ ಸ್ಮೃತಿ ಬಹಿರಂಗ ಸವಾಲು
ರಾಹುಲ್ ಗಾಂಧಿ, ಸ್ಮೃತಿ ಇರಾನಿImage Credit source: Hindustan Times
ನಯನಾ ರಾಜೀವ್
|

Updated on:Mar 07, 2024 | 4:17 PM

Share

ನೀವು ಕ್ಷೇತ್ರವನ್ನು ಆರಿಸಿ ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ರಾಹುಲ್​ ಗಾಂಧಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ರಾಜಕೀಯ ಬಿಸಿ ಏರಿದೆ. ಏತನ್ಮಧ್ಯೆ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿಗೆ ಎನ್​ಡಿಎ ಹಾಗೂ ಯುಪಿಎ ಎರಡರ ಹತ್ತು ವರ್ಷಗಳ ಬಗ್ಗೆ ಚರ್ಚೆ ನಡೆಸುವಂತೆ ಬಹಿರಂಗ ಸವಾಲು ಹಾಕಿದ್ದಾರೆ.

ನೀವು ಕ್ಷೇತ್ರವನ್ನು ಆರಿಸಿ, ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ನಮೋ ಯುವ ಮಹಾಸಮ್ಮೇಳನದಲ್ಲಿ ಮಾತನಾಡಿದ ಸ್ಮೃತಿ ರಾಹುಲ್ ಗಾಂಧಿ ಅವರನ್ನು ಚರ್ಚೆಗೆ ಆಹ್ವಾನಿಸಿದರು. ನನ್ನ ಧ್ವನಿ ರಾಹುಲ್ ಗಾಂಧಿ ಅವರನ್ನು ತಲುಪುತ್ತಿದ್ದರೆ ತೆರೆದ ಕಿವಿಯಿಂದ ಎಲ್ಲವನ್ನೂ ಕೇಳಬೇಕು, ಯಾರ ಹತ್ತು ವರ್ಷಗಳು ಉತ್ತವೆಂದು ಚರ್ಚಿಸೋಣ ಎಂದಿದ್ದಾರೆ.

ರಾಹುಲ್​ ಗಾಂಧಿ ಅವರು ಭಾರತ್ ಜೋಡೋ ನ್ಯಾಯ ಯಾತ್ರೆಯ ಭಾಗವಾಗಿ ಅಮೇಥಿಗೆ ಭೇಟಿ ನೀಡಿದ್ದರು. ಅಲ್ಲಿ ಅವರ ಚಿಕ್ಕಪ್ಪ ಸಂಜಯ್ ಗಾಂಧಿ ಹಾಗೂ ತಂದೆ ರಾಜೀವ್​ ಗಾಂಧಿ ಮತ್ತು ಸೋನಿಯಾ ಗಾಂಧಿ ಸಂಸದರಾಗಿದ್ದರು.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆ: ಉತ್ತರ ಪ್ರದೇಶದ 40, ಬಿಹಾರದ 12 ಸೀಟುಗಳ ಮೇಲೆ ಕಾಂಗ್ರೆಸ್​ ಕಣ್ಣು

2004ರಲ್ಲಿ ಅಮೇಥಿಯಿಂದ ರಾಜಕೀಯ ಇನ್ನಿಂಗ್ಸ್​ ಆರಂಭಿಸಿದ ರಾಹುಲ್ ಗಾಂಧಿ ಭಾರಿ ಮತಗಳಿಂದ ಗೆಲುವು ಸಾಧಿಸಿದ್ದರು. ಆದಾಗ್ಯೂ 2014ರಲ್ಲಿ ಈ ಅಂತರವು ಗಮನಾರ್ಹವಾಗಿ ಕಡಿಮೆಯಾಗಿತ್ತು. ಏಕೆಂದರೆ ಅಮೇಥಿಯಲ್ಲಿ ಬಿಜೆಪಿಯ ಹುರುಪಿನ ಪ್ರಚಾರವಿತ್ತು. ಆಗಿನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ತಮ್ಮ ಸಹೋದರಿ ಸ್ಮೃತಿ ಇರಾನಿಗೆ ಮತ ನೀಡುವಂತೆ ಭಾವನಾತ್ಮಕವಾಗಿ ಮನವಿ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:03 pm, Thu, 7 March 24

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್