ರಾಂಚಿ: ಅನಾರೋಗ್ಯ, ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಭಾಗವಹಿಸುತ್ತಿಲ್ಲ ರಾಹುಲ್ ಗಾಂಧಿ

|

Updated on: Apr 21, 2024 | 3:16 PM

ಇಂಡಿಯಾ ಒಕ್ಕೂಟವು ರಾಂಚಿಯಲ್ಲಿ ಹಮ್ಮಿಕೊಂಡಿರುವ ಚುನಾವಣಾ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.ಅನಾರೋಗ್ಯದ ಕಾರಣ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಬ್ಲಾಕ್ ರ್‍ಯಾಲಿಯಲ್ಲಿ ಭಾಗವಹಿಸಲು ಸಿದ್ಧರಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ರಾಂಚಿ: ಅನಾರೋಗ್ಯ, ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಭಾಗವಹಿಸುತ್ತಿಲ್ಲ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us on

ಅನಾರೋಗ್ಯದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ(Rahul Gandhi) ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಭಾಗವಹಿಸುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್​ ನಾಯಕ ಜೈರಾಮ್ ರಮೇಶ್​ ಈ ಕುರಿತು ಮಾಹಿತಿ ನೀಡಿದ್ದಾರೆ. ರಾಂಚಿಯಲ್ಲಿ ನಡೆಯುವ ಇಂಡಿಯಾ ಬ್ಲಾಕ್ ರ್‍ಯಾಲಿಯಲ್ಲಿ ಭಾಗವಹಿಸಲು ಸಿದ್ಧರಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಾರ್ಖಂಡ್ ರಾಜಧಾನಿಯಲ್ಲಿ ಆಪ್ ಮೈತ್ರಿಕೂಟದ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಮೇಶ್ ಹೇಳಿದರು. ರಾಹುಲ್ ಗಾಂಧಿ ಅವರು ಇಂದು ಭಾರತ ರ್‍ಯಾಲಿ ನಡೆಯುತ್ತಿರುವ ಸಾತ್ನಾ ಮತ್ತು ರಾಂಚಿಯಲ್ಲಿ ಪ್ರಚಾರಕ್ಕೆ ಸಿದ್ಧರಾಗಿದ್ದರು.

ಅವರು ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದರು ಮತ್ತು ಸದ್ಯಕ್ಕೆ ದೆಹಲಿಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಂಚಿ ರ್‍ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಯಾದವ್ ಸೇರಿದಂತೆ ಇಂಡಿಯಾ ಬ್ಲಾಕ್‌ನ ಹಲವಾರು ನಾಯಕರು ರಾಂಚಿಯಲ್ಲಿ ನಡೆಯುವ ಉಲ್ಗುಲನ್ (ದಂಗೆ) ನ್ಯಾಯ ರ್‍ಯಾಲಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಮತ್ತಷ್ಟು ಓದಿ: ವಯನಾಡಿನಲ್ಲಿ ಮತದಾನ ಮುಗಿಯುತ್ತಿದ್ದಂತೆ ರಾಹುಲ್ ಇನ್ನೊಂದು ಕಡೆ ಸ್ಪರ್ಧಿಸುವುದಾಗಿ ಘೋಷಿಸ್ತಾರೆ: ಮೋದಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಕೂಡ ರ್‍ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿರುವ ರ್ಯಾಲಿಯಲ್ಲಿ ಸುಮಾರು 5 ಲಕ್ಷ ಜನರು ಭಾಗವಹಿಸುವ ಸಾಧ್ಯತೆ ಇದೆ. ರಾಂಚಿಯ ಪ್ರಭಾತ್ ತಾರಾ ಮೈದಾನದಲ್ಲಿ ರ್ಯಾಲಿ ನಡೆಯಲಿದ್ದು, ಲೋಕಸಭೆ ಚುನಾವಣೆಯ ನಡುವೆ ಜಂಟಿ ಶಕ್ತಿ ಪ್ರದರ್ಶನವಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಆಯೋಜಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ