Modi 3.0 Cabinet: ಬಿಜೆಪಿ ಕೈಯಲ್ಲೇ ಉಳಿಯಲಿದೆ ಈ ನಾಲ್ಕು ಪ್ರಮುಖ ಖಾತೆಗಳು

4 ಪ್ರಮುಖ ಖಾತೆಗಳು ಬಿಜೆಪಿ ಕೈಯಲ್ಲೇ ಇರಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳು ಸೇರಿದಂತೆ ಎಲ್ಲಾ ನಾಲ್ಕು ಪ್ರಮುಖ ಸಚಿವಾಲಯಗಳನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಇದೆ ಎಂದು ಹೇಳಲಾಗುತ್ತಿದೆ.

Modi 3.0 Cabinet: ಬಿಜೆಪಿ ಕೈಯಲ್ಲೇ ಉಳಿಯಲಿದೆ ಈ ನಾಲ್ಕು ಪ್ರಮುಖ ಖಾತೆಗಳು
ನರೇಂದ್ರ ಮೋದಿ
Follow us
|

Updated on:Jun 09, 2024 | 3:19 PM

ಲೋಕಸಭಾ ಚುನಾವಣೆ(Lok Sabha Election) ಮುಗಿದು ಬಿಜೆಪಿ ನೇತೃತ್ವದ ಎನ್​ಡಿ ಸರ್ಕಾರ ಬಹುಮತವನ್ನು ಪಡೆದುಕೊಂಡಿದೆ. ಇಂದು ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಹಾಗೆಯೇ 4 ಪ್ರಮುಖ ಖಾತೆಗಳು ಬಿಜೆಪಿ ಕೈಯಲ್ಲೇ ಇರಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳು ಸೇರಿದಂತೆ ಎಲ್ಲಾ ನಾಲ್ಕು ಪ್ರಮುಖ ಸಚಿವಾಲಯಗಳನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಇದೆ ಎಂದು ಹೇಳಲಾಗುತ್ತಿದೆ.

ಈ ನಾಲ್ಕು ಪ್ರಮುಖ ಖಾತೆಗಳನ್ನು ಹೊರತುಪಡಿಸಿ, ಬಿಜೆಪಿ ರೈಲ್ವೆ, ರಸ್ತೆ ಸಾರಿಗೆ, ಕಾನೂನು, ಮಾಹಿತಿ ತಂತ್ರಜ್ಞಾನ ಮತ್ತು ಶಿಕ್ಷಣದಂತಹ ಇತರ ಕೆಲವು ಪ್ರಮುಖ ಸಚಿವಾಲಯಗಳನ್ನು ತಾವೇ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ.

ಕಳೆದ ಸಚಿವ ಸಂಪುಟದ 10 ಸಚಿವರು ಪುನರಾವರ್ತನೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮಿತ್ ಶಾ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಎಸ್ ಜೈಶಂಕರ್, ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್, ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ ಮತ್ತು ಅಶ್ವಿನಿ ವೈಷ್ಣವ್ ಅವರು ಕೇಂದ್ರ ಸಚಿವರಾಗಿಯೇ ಮುಂದುವರಿಯಲಿದ್ದು, ಅನುರಾಗ್ ಠಾಕೂರ್ ಅವರನ್ನು ಕೈಬಿಡಲಾಗುತ್ತಿದೆ ಎನ್ನುವ ಮಾಹಿತಿಯೂ ಕೇಳಿಬಂದಿದೆ.

ಮತ್ತಷ್ಟು ಓದಿ: ಮೋದಿ ಸಂಪುಟ ಸೇರಲು ಅನುಪ್ರಿಯಾ, ಚಿರಾಗ್​, ಜಯಂತ್ ಸೇರಿ ಹಲವರಿಗೆ ಕರೆ

ಮೂಲಗಳ ಪ್ರಕಾರ, ಒಂದು ಡಜನ್‌ಗಿಂತಲೂ ಹೆಚ್ಚು ಬಿಜೆಪಿ ಸಂಸದರನ್ನು ಮಂತ್ರಿ ಪರಿಷತ್ತಿನಲ್ಲಿ ಹೆಸರಿಸಲಾಗಿದೆ ಮತ್ತು ಇನ್ನೊಂದು ಡಜನ್ ಮಿತ್ರಪಕ್ಷಗಳಿಂದ ಬಂದವರು. ಈ ಪಟ್ಟಿಯಲ್ಲಿ ಹೊಸ ಮುಖಗಳು ಮತ್ತು ಹಲವಾರು ಮಹಿಳೆಯರು ಸೇರಿದ್ದಾರೆ.

ನ್ಯೂಸ್​ 18 ವರದಿ ಮಾಡಿದಂತೆ ನಿತೀಶ್ ಕುಮಾರ್ ನೇತೃತ್ವದ JD(U) ಒಂದು ಕ್ಯಾಬಿನೆಟ್ ಸ್ಥಾನ ಮತ್ತು ಒಬ್ಬ ರಾಜ್ಯ ಸಚಿವ (MoS) ಪಡೆಯಲು ಸಿದ್ಧವಾಗಿದೆ ಎಂದು ತಿಳಿಸಿವೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಹೊಸದಾಗಿ ಚುನಾಯಿತರಾದ ಇಬ್ಬರು ಸಂಸದರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಲು ಸಿದ್ಧರಾಗಿದ್ದಾರೆ. ಈ ಚುನಾವಣೆಯಲ್ಲಿ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾದ ಚಂದ್ರಶೇಖರ್ ಪೆಮ್ಮಸಾನಿ ಅವರು ಇಂದು ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಟಿಡಿಪಿ ಇಂದು ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:19 pm, Sun, 9 June 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್