AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi 3.0 Cabinet: ಬಿಜೆಪಿ ಕೈಯಲ್ಲೇ ಉಳಿಯಲಿದೆ ಈ ನಾಲ್ಕು ಪ್ರಮುಖ ಖಾತೆಗಳು

4 ಪ್ರಮುಖ ಖಾತೆಗಳು ಬಿಜೆಪಿ ಕೈಯಲ್ಲೇ ಇರಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳು ಸೇರಿದಂತೆ ಎಲ್ಲಾ ನಾಲ್ಕು ಪ್ರಮುಖ ಸಚಿವಾಲಯಗಳನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಇದೆ ಎಂದು ಹೇಳಲಾಗುತ್ತಿದೆ.

Modi 3.0 Cabinet: ಬಿಜೆಪಿ ಕೈಯಲ್ಲೇ ಉಳಿಯಲಿದೆ ಈ ನಾಲ್ಕು ಪ್ರಮುಖ ಖಾತೆಗಳು
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Jun 09, 2024 | 3:19 PM

Share

ಲೋಕಸಭಾ ಚುನಾವಣೆ(Lok Sabha Election) ಮುಗಿದು ಬಿಜೆಪಿ ನೇತೃತ್ವದ ಎನ್​ಡಿ ಸರ್ಕಾರ ಬಹುಮತವನ್ನು ಪಡೆದುಕೊಂಡಿದೆ. ಇಂದು ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಹಾಗೆಯೇ 4 ಪ್ರಮುಖ ಖಾತೆಗಳು ಬಿಜೆಪಿ ಕೈಯಲ್ಲೇ ಇರಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳು ಸೇರಿದಂತೆ ಎಲ್ಲಾ ನಾಲ್ಕು ಪ್ರಮುಖ ಸಚಿವಾಲಯಗಳನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಇದೆ ಎಂದು ಹೇಳಲಾಗುತ್ತಿದೆ.

ಈ ನಾಲ್ಕು ಪ್ರಮುಖ ಖಾತೆಗಳನ್ನು ಹೊರತುಪಡಿಸಿ, ಬಿಜೆಪಿ ರೈಲ್ವೆ, ರಸ್ತೆ ಸಾರಿಗೆ, ಕಾನೂನು, ಮಾಹಿತಿ ತಂತ್ರಜ್ಞಾನ ಮತ್ತು ಶಿಕ್ಷಣದಂತಹ ಇತರ ಕೆಲವು ಪ್ರಮುಖ ಸಚಿವಾಲಯಗಳನ್ನು ತಾವೇ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ.

ಕಳೆದ ಸಚಿವ ಸಂಪುಟದ 10 ಸಚಿವರು ಪುನರಾವರ್ತನೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮಿತ್ ಶಾ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಎಸ್ ಜೈಶಂಕರ್, ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್, ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ ಮತ್ತು ಅಶ್ವಿನಿ ವೈಷ್ಣವ್ ಅವರು ಕೇಂದ್ರ ಸಚಿವರಾಗಿಯೇ ಮುಂದುವರಿಯಲಿದ್ದು, ಅನುರಾಗ್ ಠಾಕೂರ್ ಅವರನ್ನು ಕೈಬಿಡಲಾಗುತ್ತಿದೆ ಎನ್ನುವ ಮಾಹಿತಿಯೂ ಕೇಳಿಬಂದಿದೆ.

ಮತ್ತಷ್ಟು ಓದಿ: ಮೋದಿ ಸಂಪುಟ ಸೇರಲು ಅನುಪ್ರಿಯಾ, ಚಿರಾಗ್​, ಜಯಂತ್ ಸೇರಿ ಹಲವರಿಗೆ ಕರೆ

ಮೂಲಗಳ ಪ್ರಕಾರ, ಒಂದು ಡಜನ್‌ಗಿಂತಲೂ ಹೆಚ್ಚು ಬಿಜೆಪಿ ಸಂಸದರನ್ನು ಮಂತ್ರಿ ಪರಿಷತ್ತಿನಲ್ಲಿ ಹೆಸರಿಸಲಾಗಿದೆ ಮತ್ತು ಇನ್ನೊಂದು ಡಜನ್ ಮಿತ್ರಪಕ್ಷಗಳಿಂದ ಬಂದವರು. ಈ ಪಟ್ಟಿಯಲ್ಲಿ ಹೊಸ ಮುಖಗಳು ಮತ್ತು ಹಲವಾರು ಮಹಿಳೆಯರು ಸೇರಿದ್ದಾರೆ.

ನ್ಯೂಸ್​ 18 ವರದಿ ಮಾಡಿದಂತೆ ನಿತೀಶ್ ಕುಮಾರ್ ನೇತೃತ್ವದ JD(U) ಒಂದು ಕ್ಯಾಬಿನೆಟ್ ಸ್ಥಾನ ಮತ್ತು ಒಬ್ಬ ರಾಜ್ಯ ಸಚಿವ (MoS) ಪಡೆಯಲು ಸಿದ್ಧವಾಗಿದೆ ಎಂದು ತಿಳಿಸಿವೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಹೊಸದಾಗಿ ಚುನಾಯಿತರಾದ ಇಬ್ಬರು ಸಂಸದರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಲು ಸಿದ್ಧರಾಗಿದ್ದಾರೆ. ಈ ಚುನಾವಣೆಯಲ್ಲಿ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾದ ಚಂದ್ರಶೇಖರ್ ಪೆಮ್ಮಸಾನಿ ಅವರು ಇಂದು ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಟಿಡಿಪಿ ಇಂದು ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:19 pm, Sun, 9 June 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ