AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಹಿಂದೆಯೂ ಸೋತಿಲ್ಲ, ಇಂದೂ ಸೋತಿಲ್ಲ, ಗೆಲುವನ್ನು ಅರಗಿಸಿಕೊಳ್ಳುವುದೂ ತಿಳಿದಿದೆ: ಮೋದಿ

ನಾವು ಹಿಂದೆಯೂ ಸೋತಿಲ್ಲ, ಇಂದೂ ಸೋತಿಲ್ಲ ಆದರೆ ಗೆಲುವನ್ನು ಅರಗಿಸಿಕೊಳ್ಳುವ ಪರಿ ತಿಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಎನ್​ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, ನಾವು ಸೋತಿಲ್ಲ, ಗೆಲುವನ್ನು ಜೀರ್ಣಸಿಕೊಳ್ಳುವುದು ಹೇಗೆಂಬುದು ತಿಳಿದಿದೆ. ಸೋತವರನ್ನು ಅಪಹಾಸ್ಯ ಮಾಡುವುದು ನಮ್ಮ ಸಂಸ್ಕೃತಿಯಲ್ಲಿಲ್ಲ ಎಂದರು.

ನಾವು ಹಿಂದೆಯೂ ಸೋತಿಲ್ಲ, ಇಂದೂ ಸೋತಿಲ್ಲ, ಗೆಲುವನ್ನು ಅರಗಿಸಿಕೊಳ್ಳುವುದೂ ತಿಳಿದಿದೆ: ಮೋದಿ
ನರೇಂದ್ರ ಮೋದಿImage Credit source: Mint
Follow us
ನಯನಾ ರಾಜೀವ್
|

Updated on: Jun 07, 2024 | 3:25 PM

ನಾವು ಹಿಂದೆಯೂ ಸೋತಿಲ್ಲ, ಇಂದೂ ಸೋತಿಲ್ಲ ಆದರೆ ಗೆಲುವನ್ನು ಅರಗಿಸಿಕೊಳ್ಳುವ ಪರಿ ತಿಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಎನ್​ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, ನಾವು ಸೋತಿಲ್ಲ, ಗೆಲುವನ್ನು ಜೀರ್ಣಸಿಕೊಳ್ಳುವುದು ಹೇಗೆಂಬುದು ತಿಳಿದಿದೆ. ಸೋತವರನ್ನು ಅಪಹಾಸ್ಯ ಮಾಡುವುದು ನಮ್ಮ ಸಂಸ್ಕೃತಿಯಲ್ಲಿಲ್ಲ ಎಂದರು. ಲೋಕಸಭೆ ಚುನಾವಣೆಗೂ ಮುನ್ನವೂ ಎನ್​ಡಿಎ ಸರ್ಕಾರ ಇತ್ತು, ಲೋಕಸಭಾ ಚುನಾವಣೆ ಮುಗಿದ ಮೇಲೂ ಎನ್​ಡಿಎ ಸರ್ಕಾರವೇ ಇದೆ ಇದರಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಮೋದಿ ಹೇಳಿದರು.

2024 ರ ಈ ಜನಾದೇಶವು ಇಂದಿನ ಪರಿಸ್ಥಿತಿಯಲ್ಲಿ ದೇಶವು ಎನ್‌ಡಿಎಯಲ್ಲಿ ಮಾತ್ರ ನಂಬಿಕೆಯನ್ನು ಹೊಂದಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದಂತಾಗಿದೆ. ಸಾಮಾನ್ಯವಾಗಿ ಸಮ್ಮಿಶ್ರ ಸರ್ಕಾರ ಬರುತ್ತಿದ್ದಂತೆಯೇ ಪಕ್ಷಗಳ ನಡುವೆ ಒಡಕು, ಅಸಮಾಧಾನ ಎಲ್ಲವೂ ಸಾಮಾನ್ಯ ಆದರೆ ಎನ್​ಡಿಎ ಸರ್ಕಾರದಲ್ಲಿ ಒತ್ತಡ, ರಾಜಕೀಯ ಏನೇ ಇರಲಿ ದೇಶದ ಹಿತಾಸಕ್ತಿ ಬಲಿ ಕೊಡುವುದಿಲ್ಲ ಎಂದು ವಿರೋಧ ಪಕ್ಷವಾದ ಇಂಡಿ ಒಕ್ಕೂಟವನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಎನ್‌ಡಿಎ ಅತ್ಯಂತ ಯಶಸ್ವಿ ಮೈತ್ರಿಕೂಟ, ಮೂವತ್ತು ವರ್ಷಗಳಲ್ಲಿ ಎನ್‌ಡಿಎ ಮೂರು ಬಾರಿ ಪೂರ್ಣಾವಧಿಯನ್ನು ಪೂರೈಸಿದೆ. ನಾವು ನಾಲ್ಕನೇ ಅವಧಿಯನ್ನು ಪ್ರವೇಶಿಸುತ್ತಿದ್ದೇವೆ.

ಮತ್ತಷ್ಟು ಓದಿ: ಸರ್ಕಾರ ನಡೆಸಲು ಬಹುಮತ ಅಗತ್ಯ, ದೇಶ ಮುನ್ನಡೆಸಲು ಒಮ್ಮತ ಅಗತ್ಯ: ಮೋದಿ

ಎನ್‌ಡಿಎ ಅಧಿಕಾರ ಪಡೆಯಲು ಕೆಲವೇ ಜನರ ಕೂಟವಲ್ಲ. ದೇಶದ 22 ರಾಜ್ಯಗಳಲ್ಲಿ ಸರ್ಕಾರ ರಚಿಸುವ ಮೂಲಕ ಇಂದು ಜನರು ಎನ್‌ಡಿಎಗೆ ಸೇವೆ ಸಲ್ಲಿಸಲು ಅವಕಾಶವನ್ನು ನೀಡಿದ್ದಾರೆ ಎಂದು ಹೇಳಿದರು.

ಸರ್ಕಾರ ನಡೆಸಲು ಬಹುಮತ ಅಗತ್ಯ ದೇಶವನ್ನು ಮುನ್ನಡೆಸಲು ಒಮ್ಮತ ಅಗತ್ಯ’’ ಎಂದು ಹೇಳಿದರು. ಸರ್ಕಾರ ನಡೆಸಲು ಬಹುಮತ ಬೇಕು, ಅದು ಪ್ರಜಾಪ್ರಭುತ್ವದ ಏಕೈಕ ತತ್ವವಾಗಿದೆ. ದೇಶವನ್ನು ನಡೆಸಲು ಏಕಾಭಿಪ್ರಾಯ ಬಹಳ ಮುಖ್ಯ. 2019 ರಲ್ಲಿ, ನೀವೆಲ್ಲರೂ ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದಾಗ, ನಾನು ಒಂದು ವಿಷಯಕ್ಕೆ ಒತ್ತು ನೀಡಿದ್ದೆ ಅದು ನಂಬಿಕೆ. ಇಂದು ನೀವು ಮತ್ತೊಮ್ಮೆ ನನಗೆ ಈ ಜವಾಬ್ದಾರಿಯನ್ನು ನೀಡುತ್ತಿದ್ದೀರಿ ಎಂದರೆ ನಮ್ಮ ನಡುವಿನ ನಂಬಿಕೆಯ ಸೇತುವೆ ತುಂಬಾ ಬಲವಾಗಿದೆ. ಈ ಕ್ಷಣವೂ ಭಾವನಾತ್ಮಕವಾಗಿದೆ ಎಂದರು.

ಜೂನ್​ 1ರಂದು ಮತದಾನ ಪ್ರಕ್ರಿಯೆ ಮುಗಿದು ಜೂನ್​ 4 ರಂದು ಫಲಿತಾಂಶ ಹೊರ ಬಂದಿದೆ ಇದರ ನಡುವೆ ದೇಶವನ್ನು ಹಿಂಸೆಯ ಬೆಂಕಿಯಲ್ಲಿ ಸುಡುವ ಕೆಲಸ ಯೋಜನಾಬದ್ಧವಾಗಿ ನಡೆದಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್