AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election Results: ಇಂದು ದೆಹಲಿಯಲ್ಲಿ ಚಂದ್ರಬಾಬು ನಾಯ್ಡು ಸುದ್ದಿಗೋಷ್ಠಿ

ಇಂದು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

Lok Sabha Election Results: ಇಂದು ದೆಹಲಿಯಲ್ಲಿ ಚಂದ್ರಬಾಬು ನಾಯ್ಡು ಸುದ್ದಿಗೋಷ್ಠಿ
ಚಂದ್ರಬಾಬು ನಾಯ್ಡು
ನಯನಾ ರಾಜೀವ್
|

Updated on: Jun 05, 2024 | 10:41 AM

Share

2024ರ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಕಿಂಗ್ ಮೇಕರ್ ಆಗಿ ಹೊರಹೊಮ್ಮಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಇಂದು ದೆಹಲಿಗೆ ಆಗಮಿಸುತ್ತಿದ್ದಾರೆ. ಮಧ್ಯಾಹ್ನ 3 ರಿಂದ 4 ಗಂಟೆ ಸಮಯದಲ್ಲಿ ಸಭೆ ನಡೆಯಲಿದೆ.

ಆಂಧ್ರಪ್ರದೇಶದ 25 ರಲ್ಲಿ 21 ಸ್ಥಾನಗಳನ್ನು ಎನ್‌ಡಿಎ ಗೆದ್ದಿದೆ. ರಾಜ್ಯದಲ್ಲಿ ಟಿಡಿಪಿ 16 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಆದರೆ ಜನಸೇನೆ ಎರಡು, ಬಿಜೆಪಿ ಮೂರು ಮತ್ತು ವೈಎಸ್‌ಆರ್‌ಸಿಪಿ ಕೇವಲ 4 ಸ್ಥಾನಗಳನ್ನು ಪಡೆದುಕೊಂಡಿದೆ. ಈ ಅದ್ಭುತ ಗೆಲುವಿನೊಂದಿಗೆ ಟಿಡಿಪಿ ಎನ್‌ಡಿಎಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಮತ್ತಷ್ಟು ಓದಿ: Lok Sabha Election Results: ಸ್ಪರ್ಧಿಸಿದ ಅಷ್ಟೂ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಚಿರಾಗ್ ಪಾಸ್ವಾನ್ ಪಕ್ಷ

ಬಿಜೆಪಿ 240 ಸ್ಥಾನಗಳನ್ನು ಗೆದ್ದುಕೊಂಡಿದೆ, ಆದರೆ ಅದು ನಿರೀಕ್ಷೆಗಿಂತ ಕಡಿಮೆ, ಆದರೆ ಪ್ರತಿಪಕ್ಷವಾದ ಕಾಂಗ್ರೆಸ್​ಗಿಂತ ಮೇಲುಗೈ ಸಾಧಿಸಿದೆ. ಅದು 99 ಸ್ಥಾನಗಳನ್ನು ಗೆದ್ದಿದೆ. 2019ಕ್ಕಿಂತ ಕೊಂಚ ಸುಧಾರಿಸಿದೆ. ಜೆಡಿಯು 16 ಸ್ಥಾನಗಳ ಪೈಕಿ 12ರಲ್ಲಿ ಗೆಲುವು ಸಾಧಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ರಾಜ್ಯದ 175 ವಿಧಾನಸಭಾ ಸ್ಥಾನಗಳ ಪೈಕಿ 144 ಸ್ಥಾನಗಳನ್ನು ಗೆದ್ದಿದೆ. ಈ 144 ರಲ್ಲಿ 135 ಸ್ಥಾನಗಳು ಟಿಡಿಪಿಗೆ ಮಾತ್ರ, 8 ಸ್ಥಾನಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು 21 ಜನಸೇನಾ ಪಕ್ಷಗಳು. ಈ ಮೂರೂ ಪಕ್ಷಗಳು ಎನ್‌ಡಿಎ ಭಾಗವಾಗಿವೆ.

ರಾಜ್ಯದ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಕೇವಲ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಚಂದ್ರಬಾಬು ನಾಯ್ಡು ಜೂನ್ 9 ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು