AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಥಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಘೋಷಣೆಯಾಗದಿದ್ದರೂ ಎಲ್ಲೆಲ್ಲೂ ರಾಬರ್ಟ್​ ವಾದ್ರಾ ಪೋಸ್ಟರ್

ಅಮೇಥಿಯಲ್ಲಿ ಮೇ 20ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಬಿಜೆಪಿ ಸ್ಮೃತಿ ಇರಾನಿಯನ್ನು ಮತ್ತೊಮ್ಮೆ ಕಣಕ್ಕಿಳಿಸಿದ್ದರೆ ಕಾಂಗ್ರೆಸ್​ ಇದುವರೆಗೂ ಅಭ್ಯರ್ಥಿಯ ಘೋಷಣೆ ಮಾಡಿಲ್ಲ.

ಅಮೇಥಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಘೋಷಣೆಯಾಗದಿದ್ದರೂ ಎಲ್ಲೆಲ್ಲೂ ರಾಬರ್ಟ್​ ವಾದ್ರಾ ಪೋಸ್ಟರ್
ರಾಬರ್ಟ್​ ವಾದ್ರಾ ಪೋಸ್ಟರ್
ನಯನಾ ರಾಜೀವ್
|

Updated on: Apr 24, 2024 | 2:44 PM

Share

ಲೋಕಸಭಾ ಚುನಾವಣೆ(Lok Sabha Election: ಯ ಮೊದಲ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನಕ್ಕೆ ರಾಜ್ಯಗಳು ಸಿದ್ಧವಾಗುತ್ತಿವೆ. ಅಮೇಥಿಯಲ್ಲಿ ಮೇ 20ರಂದು ಮತದಾನ ನಡೆಯಲಿದ್ದು ಕಾಂಗ್ರೆಸ್​ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡದೆ ಕುತೂಹಲ ಮುಂದುವರೆಸಿದೆ. ಆದರೆ ಈಗಾಗಲೇ ಅಮೇಥಿಯಲ್ಲಿ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್​ ವಾದ್ರಾ ಅವರ ಪೋಸ್ಟರ್​ ಎಲ್ಲೆಡೆ ರಾರಾಜಿಸುತ್ತಿವೆ. ಅದರಲ್ಲಿ ಈ ಬಾರಿ ರಾಬರ್ಟ್​ ವಾದ್ರಾ ಎನ್ನುವ ಅರ್ಥವನ್ನು ಕೊಡುವ ವಾಖ್ಯವನ್ನು ಬರೆಯಲಾಗಿದೆ.

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನದಲ್ಲಿ ಮೇ 20 ರಂದು ಅಮೇಥಿ ಮತದಾನ ನಡೆಯಲಿದ್ದು, ಮೇ 3 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬಿಜೆಪಿ ಹಾಲಿ ಸಂಸದೆ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸಿದ್ದರೂ, ಕಾಂಗ್ರೆಸ್ ತನ್ನ ಆಯ್ಕೆಯನ್ನು ಇನ್ನೂ ಹೆಸರಿಸಿಲ್ಲ.

ಅಮೇಥಿಯಿಂದ ರಾಬರ್ಟ್​ ವಾದ್ರಾ ಸ್ಪರ್ಧಿಸುತ್ತಾರೆ ಎನ್ನುವ ಊಹಾಪೋಹಗಳು ಎದ್ದಿದ್ದವು. ಇದಕ್ಕೂ ಮುನ್ನ ರಾಬರ್ಟ್​ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇರುವ ಬಗ್ಗೆ ಸುಳಿವು ನೀಡಿದ್ದರು.

ಮತ್ತಷ್ಟು ಓದಿ: ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ

ಅಮೇಥಿಯು ಗಾಂಧಿಯವರ ಕುಟುಂಬದ ಸ್ಥಾನವಾಗಿದ್ದು, ಹಿಂದೆ ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರತಿನಿಧಿಸಿದ್ದರು. 2019 ರ ಚುನಾವಣೆಯಲ್ಲಿ, ಕೇರಳದ ವಯನಾಡಿನಲ್ಲಿ ಗೆಲುವು ಸಾಧಿಸಲು ಯಶಸ್ವಿಯಾದ ರಾಹುಲ್ ಗಾಂಧಿ ಸ್ಮೃತಿ ಇರಾನಿ ವಿರುದ್ಧ ಪರಾಭವಗೊಂಡಿದ್ದರು. ನಿನ್ನೆಯಷ್ಟೇ ರಾಜಕೀಯ ಎಂಬುದು ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ಎಂದು ಸ್ಮೃತಿ ಇರಾನಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ