AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುವೇಂದು ಅಧಿಕಾರಿ vs ಅಭಿಷೇಕ್ ಬ್ಯಾನರ್ಜಿ: ಬಿಜೆಪಿಗೆ ಟಿಎಂಸಿ ಬಹಿರಂಗ ಸವಾಲು

ಲೋಕಸಭಾ ಚುನಾವಣೆ(Lok Sabha Election) ದಿನಾಂಕ ಘೋಷಣೆಯಾಗಿದೆ, ಡೈಮಂಡ್ ಹಾರ್ಬರ್ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ(Suvendu Adhikari)ಯನ್ನು ಕಣಕ್ಕಿಳಿಸುವಂತೆ ಟಿಎಂಸಿ ವಕ್ತಾರ ಕುನಾಲ್​ ಘೋಷ್ ಸವಾಲು ಹಾಕಿದ್ದಾರೆ. ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಕ್ಷೇತ್ರದಲ್ಲಿ ಟಿಎಂಸಿ ಮೂರನೇ ಬಾರಿಗೆ ಅಭಿಷೇಕ್ ಬ್ಯಾನರ್ಜಿಯನ್ನು ಕಣಕ್ಕಿಳಿಸಿದೆ. ಆದರೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸುವುದು ವಿಳಂಬವಾಗುತ್ತಿದೆ.

ಸುವೇಂದು ಅಧಿಕಾರಿ vs ಅಭಿಷೇಕ್ ಬ್ಯಾನರ್ಜಿ: ಬಿಜೆಪಿಗೆ ಟಿಎಂಸಿ ಬಹಿರಂಗ ಸವಾಲು
ಸುವೇಂದು ಅಧಿಕಾರಿ, ಅಭಿಷೇಕ್ ಬ್ಯಾನರ್ಜಿ
ನಯನಾ ರಾಜೀವ್
|

Updated on:Mar 25, 2024 | 2:32 PM

Share

ಲೋಕಸಭಾ ಚುನಾವಣೆ(Lok Sabha Election) ದಿನಾಂಕ ಘೋಷಣೆಯಾಗಿದೆ, ಡೈಮಂಡ್ ಹಾರ್ಬರ್ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ(Suvendu Adhikari)ಯನ್ನು ಕಣಕ್ಕಿಳಿಸುವಂತೆ ಟಿಎಂಸಿ ವಕ್ತಾರ ಕುನಾಲ್​ ಘೋಷ್ ಸವಾಲು ಹಾಕಿದ್ದಾರೆ. ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಕ್ಷೇತ್ರದಲ್ಲಿ ಟಿಎಂಸಿ ಮೂರನೇ ಬಾರಿಗೆ ಅಭಿಷೇಕ್ ಬ್ಯಾನರ್ಜಿಯನ್ನು ಕಣಕ್ಕಿಳಿಸಿದೆ. ಆದರೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸುವುದು ವಿಳಂಬವಾಗುತ್ತಿದೆ.

ಹಾಗಾಗಿ ಬಿಜೆಪಿಯಿಂದ ಈ ಜಾಗಕ್ಕೆ ಸವೇಂದು ಅಧಿಕಾರಿಯನ್ನು ನಿಲ್ಲಿಸಿ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಗೆದ್ದು ತೋರಿಸಿ ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಡೈಮಂಡ್ ಹಾರ್ಬರ್ ಸೇರಿದಂತೆ ಮೂರು ಕ್ಷೇತ್ರಗಳಿಗೆ ಬಿಜೆಪಿ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಬಿಜೆಪಿ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.

ಇದು ಬಂಗಾಳದಿಂದ 19 ಹೆಸರುಗಳನ್ನು ಒಳಗೊಂಡಿತ್ತು. ಅಭಿಷೇಕ್ ಬ್ಯಾನರ್ಜಿಯ ಭದ್ರಕೋಟೆ ಎಂದು ಪರಿಗಣಿಸಲಾದ ಡೈಮಂಡ್ ಹಾರ್ಬರ್‌ನಲ್ಲಿ ಪಕ್ಷವು ಇನ್ನೂ ಅಭ್ಯರ್ಥಿಯನ್ನು ಹೆಸರಿಸಿಲ್ಲ. ತೃಣಮೂಲ ಕಾಂಗ್ರೆಸ್ ವರಿಷ್ಠೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸೋದರಳಿಯ 36 ವರ್ಷದ ಅವರು 2014 ರಿಂದ ಲೋಕಸಭೆಯಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಮತ್ತಷ್ಟು ಓದಿ: Lok Sabha Election: ಸಂದೇಶ್​ಖಾಲಿ ದುರ್ಘಟನೆಯ ಸಂತ್ರಸ್ತೆಯನ್ನೇ ಕಣಕ್ಕಿಳಿಸಿದ ಬಿಜೆಪಿ

2019 ರ ಸಾರ್ವತ್ರಿಕ ಚುನಾವಣೆಯಲ್ಲಿ, ಅಭಿಷೇಕ್ ಬ್ಯಾನರ್ಜಿ ಬಿಜೆಪಿಯ ನಿಲಂಜನ್ ರಾಯ್ ಅವರನ್ನು ಭಾರಿ ಅಂತರದಿಂದ ಸೋಲಿಸಿದರು. ಆದರೆ ಬಿಜೆಪಿಯು ಬಸಿರ್ಹತ್​ನಿಂದ ಸಂದೇಶ್​ಖಾಲಿ ಸಂತ್ರಸ್ತೆ ರೇಖಾರನ್ನು ಕಣಕ್ಕಿಳಿಸಿದೆ.

ಲೋಕಸಭೆ ಚುನಾವಣೆ ಪಶ್ಚಿಮ ಬಂಗಾಳದ 42 ಸಂಸದೀಯ ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯು ಏಳು ಹಂತಗಳಲ್ಲಿ ನಡೆಯಲಿದ್ದು, ಇದು ಏಪ್ರಿಲ್ 19 ರಂದು ಪ್ರಾರಂಭವಾಗಿ ಜೂನ್ 1 ರಂದು ಮುಕ್ತಾಯಗೊಳ್ಳಲಿದೆ. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.

ಹಂತ 1 (ಏಪ್ರಿಲ್ 19): ಕೂಚ್‌ಬೆಹಾರ್, ಅಲಿಪುರ್‌ದುವಾರ್ ಮತ್ತು ಜಲ್ಪೈಗುರಿ ಹಂತ 2 (ಏಪ್ರಿಲ್ 26): ಡಾರ್ಜಿಲಿಂಗ್, ರಾಯಗಂಜ್ ಮತ್ತು ಬಲೂರ್‌ಘಾಟ್ ಹಂತ 3 (ಮೇ 7): ಮಲ್ದಹಾ ಉತ್ತರ, ಮಲ್ದಹಾ ದಕ್ಷಿಣ, ಜಂಗಿಪುರ ಮತ್ತು ಮುರ್ಷಿದಾಬಾದ್ ಹಂತ 4 (ಮೇ 13): ಬಹರಂಪುರ್, ಕೃಷ್ಣನಗರ, ರಾಣಾಘಾಟ್, ಬರ್ಧಮಾನ್ ಪುರ್ಬಾ, ಬರ್ಧಮಾನ್-ದುರ್ಗಾಪುರ, ಅಸನ್ಸೋಲ್, ಬೋಲ್ಪುರ್ ಮತ್ತು ಬಿರ್ಭೂಮ್ ಹಂತ 5 (ಮೇ 20): ಬಂಗಾವ್, ಬರಾಕ್‌ಪುರ, ಹೌರಾ, ಉಲುಬೇರಿಯಾ, ಶ್ರೀರಾಂಪುರ, ಹೂಗ್ಲಿ ಮತ್ತು ಆರಂಬಾಗ್ ಹಂತ 6 (ಮೇ 25): ತಮ್ಲುಕ್, ಕಂಠಿ, ಘಟಾಲ್, ಜಾರ್ಗ್ರಾಮ್, ಮೇದಿನಿಪುರ್, ಪುರುಲಿಯಾ, ಬಂಕುರಾ ಮತ್ತು ಬಿಷ್ಣುಪುರ್ ಹಂತ 7 (ಜೂನ್ 1): ದಮ್ ದಮ್, ಬರಾಸತ್, ಬಸಿರ್ಹತ್, ಜಯನಗರ, ಮಥುರಾಪುರ, ಡೈಮಂಡ್ ಹಾರ್ಬರ್, ಜಾದವ್‌ಪುರ, ಕೋಲ್ಕತ್ತಾ ದಕ್ಷಿಣ ಮತ್ತು ಕೋಲ್ಕತ್ತಾ ಉತ್ತರ.

2019 ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) 22 ಸ್ಥಾನಗಳನ್ನು ಗಳಿಸಿದರೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದ 42 ಸಂಸದೀಯ ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಕೇವಲ ಎರಡು ಸ್ಥಾನಗಳಿಗೆ ಸೀಮಿತವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:32 pm, Mon, 25 March 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್