AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಒಕ್ಕೂಟದ ನಾಯಕರನ್ನು ಭೇಟಿಯಾದ ತೇಜಸ್ವಿ ಯಾದವ್, ಸೀಟು ಹಂಚಿಕೆ ಬಹುತೇಕ ಅಂತಿಮ

ರಾಷ್ಟ್ರೀಯ ಜನತಾದಳ(ಆರ್​ಜೆಡಿ) ನಾಯಕ ತೇಜಸ್ವಿ ಯಾದವ್ ಇಂಡಿಯಾ ಒಕ್ಕೂಟದ ನಾಯಕರನ್ನು ಭೇಟಿಯಾಗಿ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸಿದರು. ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್ ಅವರ ನಿವಾಸದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಖಿಲೇಶ್ ಪ್ರಸಾದ್ ಸಿಂಗ್ ಮತ್ತು ರಾಜ್ಯ ಉಸ್ತುವಾರಿ ಮೋಹನ್ ಪ್ರಕಾಶ್ ಕೂಡ ಉಪಸ್ಥಿತರಿದ್ದರು.

ಇಂಡಿಯಾ ಒಕ್ಕೂಟದ ನಾಯಕರನ್ನು ಭೇಟಿಯಾದ ತೇಜಸ್ವಿ ಯಾದವ್, ಸೀಟು ಹಂಚಿಕೆ ಬಹುತೇಕ ಅಂತಿಮ
ತೇಜಸ್ವಿ ಯಾದವ್
ನಯನಾ ರಾಜೀವ್
|

Updated on:Mar 27, 2024 | 8:48 AM

Share

ರಾಷ್ಟ್ರೀಯ ಜನತಾದಳ(ಆರ್​ಜೆಡಿ) ನಾಯಕ ತೇಜಸ್ವಿ ಯಾದವ್(Tejashwi Yadav) ಇಂಡಿಯಾ ಒಕ್ಕೂಟದ ನಾಯಕರನ್ನು ಭೇಟಿಯಾಗಿ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸಿದರು. ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್ ಅವರ ನಿವಾಸದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಖಿಲೇಶ್ ಪ್ರಸಾದ್ ಸಿಂಗ್ ಮತ್ತು ರಾಜ್ಯ ಉಸ್ತುವಾರಿ ಮೋಹನ್ ಪ್ರಕಾಶ್ ಕೂಡ ಉಪಸ್ಥಿತರಿದ್ದರು.

ಯಾದವ್ ಅವರು ತಮ್ಮ ಪಕ್ಷ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಬಿಹಾರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲಿವೆ ಎಂದು ಹೇಳಿದರು. ಇಂಡಿಯಾ ಒಕ್ಕೂಟ ಸೀಟು ಹಂಚಿಕೆ ಕುರಿತು ಮೌಖಿಕವಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಬಿಹಾರದಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿರುವ ಕೆಲವು ಸ್ಥಾನಗಳಲ್ಲಿ ಆರ್‌ಜೆಡಿ ಅಭ್ಯರ್ಥಿಗಳ “ಏಕಪಕ್ಷೀಯ” ಘೋಷಣೆಗಳ ಬಗ್ಗೆ ಕಾಂಗ್ರೆಸ್ ಅಸಮಾಧಾನಗೊಂಡಿದೆ ಎಂದು ಹೇಳಲಾಗಿದೆ. ಏತನ್ಮಧ್ಯೆ, ಮಾತುಕತೆಗಳು ಇನ್ನೂ ನಡೆಯುತ್ತಿವೆ ಮತ್ತು ಬುಧವಾರದ ಮತ್ತೊಂದು ಸಭೆಯು ಒಪ್ಪಂದಕ್ಕೆ ಮುದ್ರೆಯೊತ್ತಬಹುದು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಡ್ರೈವರ್​ ಸೀಟ್​ನಲ್ಲಿ ತೇಜಸ್ವಿ, ಜೀಪ್​ನಲ್ಲಿ ರಾಹುಲ್ ಬಿಹಾರ ಯಾತ್ರೆ

ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವಿನ ಬಾಂಧವ್ಯವು ಇಂಡಿಯಾ ಬ್ಲಾಕ್‌ನ ಮೊದಲ ಸಭೆಯಿಂದಲೇ ಸ್ಪಷ್ಟವಾಗಿದೆ.

ಬಿಹಾರದಲ್ಲಿ ಕಾಂಗ್ರೆಸ್​ನ ಭಾರತ್​ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ತೇಜಸ್ವಿ ಯಾದವ್ ಅವರು ರಾಹುಲ್ ಗಾಂಧಿ ಜತೆ ಮೆರವಣಿಗೆ ನಡೆಸಿದ್ದರು.

ಬಿಜೆಪಿ ಭಾನುವಾರ ಇನ್ನೂ 111 ಲೋಕಸಭಾ ಚುನಾವಣಾ ಅಭ್ಯರ್ಥಿಗಳನ್ನು ಹೆಸರಿಸಿದೆ, ಕೇಂದ್ರ ಸಚಿವರಾದ ಅಶ್ವಿನಿ ಕುಮಾರ್ ಚೌಬೆ ಮತ್ತು ವಿಕೆ ಸಿಂಗ್ ಮತ್ತು ಸಂಸದ ವರುಣ್ ಗಾಂಧಿ ಅವರನ್ನು ಕೈಬಿಟ್ಟು, ನಟರಾದ ಕಂಗನಾ ರನೌತ್ ಮತ್ತು ಅರುಣ್ ಗೋವಿಲ್ ಅವರನ್ನು ಕಣಕ್ಕಿಳಿಸಿದೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಂಬಲ್‌ಪುರದಿಂದ ಸ್ಪರ್ಧಿಸಲಿದ್ದಾರೆ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರಾ 2019 ರಲ್ಲಿ ನಿಕಟ ಸ್ಪರ್ಧೆಯಲ್ಲಿ ಸೋತ ನಂತರ ಪುರಿಯಿಂದ ಮತ್ತೊಮ್ಮೆ ತಮ್ಮ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:47 am, Wed, 27 March 24

Follow Us
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ