AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಮಹಾರಾಷ್ಟ್ರದಲ್ಲಿ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಠಾಕ್ರೆ ನೇತೃತ್ವದ ಶಿವಸೇನೆ

ಮುಣಬರಲಿರುವ ಲೋಕಸಭಾ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಅಭ್ಯರ್ಥಿಗಳನ್ನು ಘೋಷಿಸಿದೆ. ಉದ್ಧವ್ ಠಾಕ್ರೆ ಅವರ ಪಕ್ಷದ 17 ಲೋಕಸಭಾ ಅಭ್ಯರ್ಥಿಗಳಲ್ಲಿ ದೇಸಾಯಿ ಹೊರತುಪಡಿಸಿ, ಮಾಜಿ ಕೇಂದ್ರ ಸಚಿವರಾದ ಅನಂತ್ ಗೀತೆ ಮತ್ತು ಅರವಿಂದ್ ಸಾವಂತ್ ಪ್ರಮುಖ ಹೆಸರುಗಳಲ್ಲಿದ್ದಾರೆ. ಪಕ್ಷದ ಸಂಸದ ಗಜಾನನ ಕೀರ್ತಿಕರ್ ಅವರ ಪುತ್ರ ಅಮೋಲ್ ಕೀರ್ತಿಕರ್ ಅವರನ್ನೂ ಲೋಕಸಭೆ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ.

Lok Sabha Election: ಮಹಾರಾಷ್ಟ್ರದಲ್ಲಿ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಠಾಕ್ರೆ ನೇತೃತ್ವದ ಶಿವಸೇನೆ
ಉದ್ಧವ್ ಠಾಕ್ರೆ
ನಯನಾ ರಾಜೀವ್
|

Updated on: Mar 27, 2024 | 10:49 AM

Share

ಮಹಾರಾಷ್ಟ್ರದಲ್ಲಿ ಮುಂಬರುವ ಲೋಕಸಭೆ ಚುನಾವಣೆ(Lok Sabha Election)ಗೆ ಉದ್ಧವ್ ಠಾಕ್ರೆ(Uddhav Thackeray) ನೇತೃತ್ವದ ಶಿವಸೇನಾ(Shiv Sena) ಬಣವು ಬುಧವಾರ 17 ಅಭ್ಯರ್ಥಿಗಳನ್ನು ಘೋಷಿಸಿದೆ. ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹಿರಿಯ ನಾಯಕ ಅನಿಲ್ ದೇಸಾಯಿ ಅವರ ಹೆಸರನ್ನು ಮೊದಲೇ ಘೋಷಿಸಲಾಗಿತ್ತು.

ಉದ್ಧವ್ ಠಾಕ್ರೆ ಅವರ ಪಕ್ಷದ 17 ಲೋಕಸಭಾ ಅಭ್ಯರ್ಥಿಗಳಲ್ಲಿ ದೇಸಾಯಿ ಹೊರತುಪಡಿಸಿ, ಮಾಜಿ ಕೇಂದ್ರ ಸಚಿವರಾದ ಅನಂತ್ ಗೀತೆ ಮತ್ತು ಅರವಿಂದ್ ಸಾವಂತ್ ಪ್ರಮುಖ ಹೆಸರುಗಳಲ್ಲಿದ್ದಾರೆ. ಪಕ್ಷದ ಸಂಸದ ಗಜಾನನ ಕೀರ್ತಿಕರ್ ಅವರ ಪುತ್ರ ಅಮೋಲ್ ಕೀರ್ತಿಕರ್ ಅವರನ್ನೂ ಲೋಕಸಭೆ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ.

ಮುಂಬೈ ದಕ್ಷಿಣ ಮಧ್ಯ ಲೋಕಸಭೆ ಕ್ಷೇತ್ರದಲ್ಲಿ ಅನಿಲ್ ದೇಸಾಯಿ ಅಭ್ಯರ್ಥಿಯಾಗಿ, ವಾಯುವ್ಯ ಮುಂಬೈನಲ್ಲಿ ಅಮೋಲ್ ಕೀರ್ತಿಕರ್ ಮತ್ತು ದಕ್ಷಿಣ ಮುಂಬೈನಲ್ಲಿ ಅರವಿಂದ್ ಸಾವಂತ್ ಅವರನ್ನು ಅಭ್ಯರ್ಥಿಯಾಗಿ ಹೆಸರಿಸಲಾಗಿದೆ.

ಶಿವಸೇನಾ (UBT) ಲೋಕಸಭೆಯ ಅಭ್ಯರ್ಥಿಗಳು ಅರವಿಂದ್ ಸಾವಂತ್ – ದಕ್ಷಿಣ ಮುಂಬೈ ಅಮೋಲ್ ಕೀರ್ತಿಕರ್ – ವಾಯುವ್ಯ ಮುಂಬೈ ಸಂಜಯ್ ದಿನ ಪಾಟೀಲ್ – ಈಶಾನ್ಯ ಮುಂಬೈ ಅನಿಲ್ ದೇಸಾಯಿ – ದಕ್ಷಿಣ ಮಧ್ಯ ಮುಂಬೈ ಅನಂತ್ ಗೀತೆ – ರಾಯಗಡ

ವಿನಾಯಕ್ ರಾವತ್ – ರತ್ನಗಿರಿ ಸಿಂಧುದುರ್ಗ

ಭೌಸಾಹೇಬ್ ವಾಕ್ಚೌರೆ – ಶಿರಡಿ

ಚಂದ್ರಹರ ಪಾಟೀಲ್ – ಸಾಂಗ್ಲಿ

ಸಂಜಯ್ ಜಾಧವ್ – ಪರ್ಭಾನಿ

ಸಂಜೋಗ್ ವಾಘೆರೆ – ಮಾವಲ್

ಬುಲ್ಧಾನ – ನರೇಂದ್ರ ಖೇಡೇಕರ್

ನಾಗೇಶ ಪಾಟೀಲ ಅಷ್ಟಿಕರ್ – ಹಿಂಗೋಳಿ

ಸಂಜಯ್ ದೇಶಮುಖ್ – ಯವತ್ಮಲ್ ವಾಶಿಮ್

ಓಂರಾಜೆ ನಿಂಬಾಳ್ಕರ್ – ಧಾರಶಿವ್

ಚಂದ್ರಕಾಂತ್ ಖೈರೆ – ಛತ್ರಪತಿ ಸಂಭಾಜಿನಗರ

ರಾಜಭೌ ವಾಜೆ – ನಾಸಿಕ್

ರಾಜನ್ ವಿಚಾರೆ – ಥಾಣೆ

ಮತ್ತಷ್ಟು ಓದಿ: ನಮ್ಮನ್ನು ಏಕೆ ಅನರ್ಹಗೊಳಿಸಿಲ್ಲ?: ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿದ ಉದ್ದವ್ ಠಾಕ್ರೆ

ಮಹಾರಾಷ್ಟ್ರದ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಸೀಟು ಹಂಚಿಕೆ ಒಪ್ಪಂದವನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಎಂವಿಎ 44 ಕ್ಷೇತ್ರಗಳಿಗೆ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ ಎಂದು ವರದಿಯಾಗಿದೆ, ಉಳಿದ ನಾಲ್ಕು ಸ್ಥಾನಗಳನ್ನು ನಿರ್ಧರಿಸಲಾಗಿಲ್ಲ ಮತ್ತು ಇನ್ನೂ ಚರ್ಚೆಗಳು ನಡೆಯುತ್ತಿವೆ.

ಅಂತಿಮಗೊಂಡ 44 ಸ್ಥಾನಗಳಲ್ಲಿ ಶಿವಸೇನೆ 19, ಕಾಂಗ್ರೆಸ್ 16 ಮತ್ತು ಶರದ್ ಪವಾರ್ ಅವರ ಎನ್‌ಸಿಪಿ 9 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಏತನ್ಮಧ್ಯೆ, ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಪಕ್ಷವು 22 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಮತ್ತು ಉಳಿದ ಕ್ಷೇತ್ರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ 48 ಲೋಕಸಭಾ ಕ್ಷೇತ್ರಗಳಿದ್ದು, ಏಪ್ರಿಲ್ 19 ರಿಂದ ಐದು ಹಂತಗಳಲ್ಲಿ ಮತದಾನ ನಡೆಯಲಿದೆ. ಮಹಾರಾಷ್ಟ್ರದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ಐದು ಸ್ಥಾನಗಳಿಗೆ ನಡೆಯಲಿದ್ದು, ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು 8 ಕ್ಷೇತ್ರಗಳಿಗೆ ನಡೆಯಲಿದೆ. ಇದಲ್ಲದೇ ಮೂರನೇ ಹಂತದಲ್ಲಿ ಮೇ 7 ರಂದು 11 ಕ್ಷೇತ್ರಗಳಿಗೆ ಹಾಗೂ ನಾಲ್ಕನೇ ಹಂತದಲ್ಲಿ 11 ಕ್ಷೇತ್ರಗಳಿಗೆ ಮೇ 13 ರಂದು ಮತದಾನ ನಡೆಯಲಿದೆ. ಅಲ್ಲದೆ, ಐದನೇ ಹಂತದಲ್ಲಿ ಮೇ 20 ರಂದು 13 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ