AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಮಹಾರಾಷ್ಟ್ರದಲ್ಲಿ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಠಾಕ್ರೆ ನೇತೃತ್ವದ ಶಿವಸೇನೆ

ಮುಣಬರಲಿರುವ ಲೋಕಸಭಾ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಅಭ್ಯರ್ಥಿಗಳನ್ನು ಘೋಷಿಸಿದೆ. ಉದ್ಧವ್ ಠಾಕ್ರೆ ಅವರ ಪಕ್ಷದ 17 ಲೋಕಸಭಾ ಅಭ್ಯರ್ಥಿಗಳಲ್ಲಿ ದೇಸಾಯಿ ಹೊರತುಪಡಿಸಿ, ಮಾಜಿ ಕೇಂದ್ರ ಸಚಿವರಾದ ಅನಂತ್ ಗೀತೆ ಮತ್ತು ಅರವಿಂದ್ ಸಾವಂತ್ ಪ್ರಮುಖ ಹೆಸರುಗಳಲ್ಲಿದ್ದಾರೆ. ಪಕ್ಷದ ಸಂಸದ ಗಜಾನನ ಕೀರ್ತಿಕರ್ ಅವರ ಪುತ್ರ ಅಮೋಲ್ ಕೀರ್ತಿಕರ್ ಅವರನ್ನೂ ಲೋಕಸಭೆ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ.

Lok Sabha Election: ಮಹಾರಾಷ್ಟ್ರದಲ್ಲಿ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಠಾಕ್ರೆ ನೇತೃತ್ವದ ಶಿವಸೇನೆ
ಉದ್ಧವ್ ಠಾಕ್ರೆ
ನಯನಾ ರಾಜೀವ್
|

Updated on: Mar 27, 2024 | 10:49 AM

Share

ಮಹಾರಾಷ್ಟ್ರದಲ್ಲಿ ಮುಂಬರುವ ಲೋಕಸಭೆ ಚುನಾವಣೆ(Lok Sabha Election)ಗೆ ಉದ್ಧವ್ ಠಾಕ್ರೆ(Uddhav Thackeray) ನೇತೃತ್ವದ ಶಿವಸೇನಾ(Shiv Sena) ಬಣವು ಬುಧವಾರ 17 ಅಭ್ಯರ್ಥಿಗಳನ್ನು ಘೋಷಿಸಿದೆ. ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹಿರಿಯ ನಾಯಕ ಅನಿಲ್ ದೇಸಾಯಿ ಅವರ ಹೆಸರನ್ನು ಮೊದಲೇ ಘೋಷಿಸಲಾಗಿತ್ತು.

ಉದ್ಧವ್ ಠಾಕ್ರೆ ಅವರ ಪಕ್ಷದ 17 ಲೋಕಸಭಾ ಅಭ್ಯರ್ಥಿಗಳಲ್ಲಿ ದೇಸಾಯಿ ಹೊರತುಪಡಿಸಿ, ಮಾಜಿ ಕೇಂದ್ರ ಸಚಿವರಾದ ಅನಂತ್ ಗೀತೆ ಮತ್ತು ಅರವಿಂದ್ ಸಾವಂತ್ ಪ್ರಮುಖ ಹೆಸರುಗಳಲ್ಲಿದ್ದಾರೆ. ಪಕ್ಷದ ಸಂಸದ ಗಜಾನನ ಕೀರ್ತಿಕರ್ ಅವರ ಪುತ್ರ ಅಮೋಲ್ ಕೀರ್ತಿಕರ್ ಅವರನ್ನೂ ಲೋಕಸಭೆ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ.

ಮುಂಬೈ ದಕ್ಷಿಣ ಮಧ್ಯ ಲೋಕಸಭೆ ಕ್ಷೇತ್ರದಲ್ಲಿ ಅನಿಲ್ ದೇಸಾಯಿ ಅಭ್ಯರ್ಥಿಯಾಗಿ, ವಾಯುವ್ಯ ಮುಂಬೈನಲ್ಲಿ ಅಮೋಲ್ ಕೀರ್ತಿಕರ್ ಮತ್ತು ದಕ್ಷಿಣ ಮುಂಬೈನಲ್ಲಿ ಅರವಿಂದ್ ಸಾವಂತ್ ಅವರನ್ನು ಅಭ್ಯರ್ಥಿಯಾಗಿ ಹೆಸರಿಸಲಾಗಿದೆ.

ಶಿವಸೇನಾ (UBT) ಲೋಕಸಭೆಯ ಅಭ್ಯರ್ಥಿಗಳು ಅರವಿಂದ್ ಸಾವಂತ್ – ದಕ್ಷಿಣ ಮುಂಬೈ ಅಮೋಲ್ ಕೀರ್ತಿಕರ್ – ವಾಯುವ್ಯ ಮುಂಬೈ ಸಂಜಯ್ ದಿನ ಪಾಟೀಲ್ – ಈಶಾನ್ಯ ಮುಂಬೈ ಅನಿಲ್ ದೇಸಾಯಿ – ದಕ್ಷಿಣ ಮಧ್ಯ ಮುಂಬೈ ಅನಂತ್ ಗೀತೆ – ರಾಯಗಡ

ವಿನಾಯಕ್ ರಾವತ್ – ರತ್ನಗಿರಿ ಸಿಂಧುದುರ್ಗ

ಭೌಸಾಹೇಬ್ ವಾಕ್ಚೌರೆ – ಶಿರಡಿ

ಚಂದ್ರಹರ ಪಾಟೀಲ್ – ಸಾಂಗ್ಲಿ

ಸಂಜಯ್ ಜಾಧವ್ – ಪರ್ಭಾನಿ

ಸಂಜೋಗ್ ವಾಘೆರೆ – ಮಾವಲ್

ಬುಲ್ಧಾನ – ನರೇಂದ್ರ ಖೇಡೇಕರ್

ನಾಗೇಶ ಪಾಟೀಲ ಅಷ್ಟಿಕರ್ – ಹಿಂಗೋಳಿ

ಸಂಜಯ್ ದೇಶಮುಖ್ – ಯವತ್ಮಲ್ ವಾಶಿಮ್

ಓಂರಾಜೆ ನಿಂಬಾಳ್ಕರ್ – ಧಾರಶಿವ್

ಚಂದ್ರಕಾಂತ್ ಖೈರೆ – ಛತ್ರಪತಿ ಸಂಭಾಜಿನಗರ

ರಾಜಭೌ ವಾಜೆ – ನಾಸಿಕ್

ರಾಜನ್ ವಿಚಾರೆ – ಥಾಣೆ

ಮತ್ತಷ್ಟು ಓದಿ: ನಮ್ಮನ್ನು ಏಕೆ ಅನರ್ಹಗೊಳಿಸಿಲ್ಲ?: ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿದ ಉದ್ದವ್ ಠಾಕ್ರೆ

ಮಹಾರಾಷ್ಟ್ರದ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಸೀಟು ಹಂಚಿಕೆ ಒಪ್ಪಂದವನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಎಂವಿಎ 44 ಕ್ಷೇತ್ರಗಳಿಗೆ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ ಎಂದು ವರದಿಯಾಗಿದೆ, ಉಳಿದ ನಾಲ್ಕು ಸ್ಥಾನಗಳನ್ನು ನಿರ್ಧರಿಸಲಾಗಿಲ್ಲ ಮತ್ತು ಇನ್ನೂ ಚರ್ಚೆಗಳು ನಡೆಯುತ್ತಿವೆ.

ಅಂತಿಮಗೊಂಡ 44 ಸ್ಥಾನಗಳಲ್ಲಿ ಶಿವಸೇನೆ 19, ಕಾಂಗ್ರೆಸ್ 16 ಮತ್ತು ಶರದ್ ಪವಾರ್ ಅವರ ಎನ್‌ಸಿಪಿ 9 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಏತನ್ಮಧ್ಯೆ, ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಪಕ್ಷವು 22 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಮತ್ತು ಉಳಿದ ಕ್ಷೇತ್ರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ 48 ಲೋಕಸಭಾ ಕ್ಷೇತ್ರಗಳಿದ್ದು, ಏಪ್ರಿಲ್ 19 ರಿಂದ ಐದು ಹಂತಗಳಲ್ಲಿ ಮತದಾನ ನಡೆಯಲಿದೆ. ಮಹಾರಾಷ್ಟ್ರದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ಐದು ಸ್ಥಾನಗಳಿಗೆ ನಡೆಯಲಿದ್ದು, ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು 8 ಕ್ಷೇತ್ರಗಳಿಗೆ ನಡೆಯಲಿದೆ. ಇದಲ್ಲದೇ ಮೂರನೇ ಹಂತದಲ್ಲಿ ಮೇ 7 ರಂದು 11 ಕ್ಷೇತ್ರಗಳಿಗೆ ಹಾಗೂ ನಾಲ್ಕನೇ ಹಂತದಲ್ಲಿ 11 ಕ್ಷೇತ್ರಗಳಿಗೆ ಮೇ 13 ರಂದು ಮತದಾನ ನಡೆಯಲಿದೆ. ಅಲ್ಲದೆ, ಐದನೇ ಹಂತದಲ್ಲಿ ಮೇ 20 ರಂದು 13 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!