AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election 2024: ರಾಯ್​ ಬರೇಲಿಯಲ್ಲಿ ರಾಹುಲ್​ ವಿರುದ್ಧ ಬಿಜೆಪಿ ಕಣ್ಣಕ್ಕಿಳಿಸಿರುವ ದಿನೇಶ್​ ಪ್ರತಾಪ್​ ಸಿಂಗ್ ಯಾರು?

ಭಾರತೀಯ ಜನತಾ ಪಕ್ಷ (ಬಿಜೆಪಿ) ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ರಾಯ್ ಬರೇಲಿಯನ್ನು ಗಾಂಧಿ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ದಿನೇಶ್ ಪ್ರತಾಪ್ ಸಿಂಗ್ ಸ್ಪರ್ಧಿಸಿದ್ದರು. ಆದರೆ ಸೋನಿಯಾ ಗಾಂಧಿ 1,67,178 ಮತಗಳಿಂದ ಗೆದ್ದಿದ್ದರು. ಪ್ರಸ್ತುತ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಎಂಎಲ್‌ಸಿ ದಿನೇಶ್ ಪ್ರತಾಪ್ ಸಿಂಗ್ ರಾಜ್ಯ ಸಚಿವರಾಗಿದ್ದಾರೆ.

Lok Sabha Election 2024: ರಾಯ್​ ಬರೇಲಿಯಲ್ಲಿ ರಾಹುಲ್​ ವಿರುದ್ಧ ಬಿಜೆಪಿ ಕಣ್ಣಕ್ಕಿಳಿಸಿರುವ ದಿನೇಶ್​ ಪ್ರತಾಪ್​ ಸಿಂಗ್ ಯಾರು?
ದಿನೇಶ್​ ಪ್ರತಾಪ್ ಸಿಂಗ್
ನಯನಾ ರಾಜೀವ್
|

Updated on: May 03, 2024 | 11:40 AM

Share

ಕಾಂಗ್ರೆಸ್ ಭದ್ರಕೋಟೆ ಎಂದು ಪರಿಗಣಿಸಲಾಗಿರುವ ರಾಯ್ ಬರೇಲಿ(Raebareli) ಲೋಕಸಭಾ ಕ್ಷೇತ್ರ(Lok Sabha Constituency) ದಿಂದ ಉತ್ತರ ಪ್ರದೇಶ ಸರ್ಕಾರದ ಸಚಿವ ದಿನೇಶ್ ಪ್ರತಾಪ್ ಸಿಂಗ್(Dinesh Pratap Singh) ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿದೆ. ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರನ್ನು ಎದುರಿಸಲಿದ್ದಾರೆ. ರಾಯ್ ಬರೇಲಿಯಿಂದ ರಾಹುಲ್ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಿದೆ. ಬ್ಲಾಕ್ ಮುಖ್ಯಸ್ಥರಾಗಿ ರಾಜಕೀಯ ಜೀವನ ಆರಂಭಿಸಿದ ದಿನೇಶ್ ಪ್ರತಾಪ್ ಸಿಂಗ್, ಪ್ರಸ್ತುತ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಅವರು 2004 ರಲ್ಲಿ ಸಮಾಜವಾದಿ ಪಕ್ಷದಿಂದ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.

ಎಸ್ಪಿಯಿಂದ ರಾಜಕೀಯ ಪಯಣ ಆರಂಭಿಸಿದರು

2004ರಲ್ಲಿ ಸಮಾಜವಾದಿ ಪಕ್ಷದ ಪರವಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದರು. ಇದರ ನಂತರ, 2007 ರಲ್ಲಿ, ಅವರು ಬಹುಜನ ಸಮಾಜ ಪಕ್ಷದ ಟಿಕೆಟ್‌ನಲ್ಲಿ ತಿಲೋಯ್ ಕ್ಷೇತ್ರದಿಂದ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರು, ಆದರೆ ಸೋಲನ್ನು ಎದುರಿಸಬೇಕಾಯಿತು. ಇದಾದ ಬಳಿಕ ದಿನೇಶ್ ಪ್ರತಾಪ್ ಸಿಂಗ್ ಕಾಂಗ್ರೆಸ್ ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. 2010 ರಲ್ಲಿ ಗ್ರೇಸ್ ಟಿಕೆಟ್‌ನಲ್ಲಿ ಮೊದಲ ಬಾರಿಗೆ ಕೌನ್ಸಿಲರ್ ಆದರು. 2011ರಲ್ಲಿ ಅತ್ತಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದರು. 2016 ರಲ್ಲಿ ಅವರು ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್‌ನಲ್ಲಿ ಕೌನ್ಸಿಲರ್ ಆದರು ಮತ್ತು ಅವರ ಸಹೋದರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದರು. ಅಷ್ಟೇ ಅಲ್ಲ, ಅವರ ಸಹೋದರರೊಬ್ಬರು 2017 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಹರಚಂದಪುರದಿಂದ ಶಾಸಕರಾದರು.

2019ರ ಚುನಾವಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿದ್ದರು ದಿನೇಶ್ ಪ್ರತಾಪ್ ಸಿಂಗ್ 2019 ರಲ್ಲಿ ಬಿಜೆಪಿ ಸೇರಿದರು ಮತ್ತು ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿದ್ದರು . ಇಲ್ಲಿಂದ ಗೆಲ್ಲದಿದ್ದರೂ ಸುಮಾರು ನಾಲ್ಕು ಲಕ್ಷ ಮತ ಗಳಿಸಿ ಎಲ್ಲರ ಗಮನ ಸೆಳೆದಿದ್ದರು.

ರಾಯ್ ಬರೇಲಿ ಇನ್ನು ಕಾಂಗ್ರೆಸ್ ಭದ್ರಕೋಟೆ: ದಿನೇಶ್ ಪ್ರತಾಪ್

ಟಿಕೆಟ್ ಸಿಕ್ಕ ಬಳಿಕ ಮಾತನಾಡಿದ ದಿನೇಶ್ ಪ್ರತಾಪ್ ಸಿಂಗ್, ನನ್ನಂತಹ ಸಣ್ಣ ಕಾರ್ಯಕರ್ತನನ್ನು ಬಿಜೆಪಿ ನಂಬಿದೆ ಮತ್ತು ಇದಕ್ಕಾಗಿ ಪಕ್ಷಕ್ಕೆ ಧನ್ಯವಾದ ಹೇಳುತ್ತೇನೆ, ಈ ನಂಬಿಕೆಯನ್ನು ಕಳೆದುಕೊಳ್ಳಲು ನಾನು ಬಿಡುವುದಿಲ್ಲ ಎಂದು ಭರವಸೆ ನೀಡುತ್ತೇನೆ. ರಾಯ್‌ಬರೇಲಿಯು ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದಿರಬಹುದು, ಆದರೆ ಮೋದಿಯವರು ದೇಶದ ಆಡಳಿತವನ್ನು ವಹಿಸಿಕೊಂಡ ನಂತರ, ರಾಯ್‌ಬರೇಲಿಯಲ್ಲಿ ಜಿಲ್ಲಾ ಪಂಚಾಯತಿ ಚುನಾವಣೆಯನ್ನು ಗೆಲ್ಲಲು ಕಾಂಗ್ರೆಸ್‌ನ ಮುಖಂಡನಿಗೆ ಸಾಧ್ಯವಾಗಲಿಲ್ಲ ಎಂದು, ಈಗ ರಾಯ್ ಬರೇಲಿ ಬಿಜೆಪಿಯ ಭದ್ರಕೋಟೆಯಾಗಿದೆ.

ನಕಲಿ ಗಾಂಧಿವಾದಿಗಳು ರಾಯ್ ಬರೇಲಿಯ ನಂಬಿಕೆಯನ್ನು ಮುರಿದರು ನಾನು ಸೋನಿಯಾ ವಿರುದ್ಧ ಸ್ಪರ್ಧಿಸಿ ಕಠಿಣ ಸವಾಲು ಹಾಕಿದರೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಹೇಗೆ ಎಂದು ಅವರು ಹೇಳಿದರು. ಅವರಿಗೆ ಭಾರತೀಯ ಮೌಲ್ಯಗಳಿಲ್ಲ ಮತ್ತು ನಮ್ಮ ಸಂಸ್ಕೃತಿಯಿಂದ ದೂರವಿದೆ, ಅವರು ಬಂದರೆ ಅವರು ಖಂಡಿತವಾಗಿಯೂ ಸೋಲನ್ನು ಎದುರಿಸಬೇಕಾಗುತ್ತದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!