AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್‌ ನಾಥ್‌ ಜತೆಗೆ ಬಿಜೆಪಿ ಸೇರುವ ಹಾದಿಯಲ್ಲಿ ಇನ್ನೋರ್ವ ಕಾಂಗ್ರೆಸ್‌ ಹಿರಿಯ ಮುಖಂಡ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಾಗಿ ಕಟ್ಟಿದ್ದ ಇಂಡಿಯಾ ಒಕ್ಕೂಟದಿಂದ ಒಬ್ಬೊಬ್ಬರಾಗಿಯೇ ಹಿಂದೆ ಸರಿದು ಬಿಜೆಪಿ ಕಡೆ ಒಲವು ತೋರುತ್ತಿದ್ದಾರೆ. ಕಮಲ್​ ನಾಥ್​ ಬಿಜೆಪಿ ಕಡೆಗೆ ಮುಖ ಮಾಡಿದ್ದಾರೆ ಎನ್ನಲಾಗುತ್ತಿದ್ದು ಅವರ ಹಿಂದೆಯೇ ಕಾಂಗ್ರೆಸ್​ ಸಂಸದ ಮನೀಶ್​ ತಿವಾರಿ ಕೂಡ ಅದೇ ಹಾದಿ ತುಳಿಯಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಮಲ್‌ ನಾಥ್‌ ಜತೆಗೆ ಬಿಜೆಪಿ ಸೇರುವ ಹಾದಿಯಲ್ಲಿ ಇನ್ನೋರ್ವ ಕಾಂಗ್ರೆಸ್‌ ಹಿರಿಯ ಮುಖಂಡ
ಮನೀಶ್​ ತಿವಾರಿImage Credit source: Moneycontrol.com
ನಯನಾ ರಾಜೀವ್
|

Updated on: Feb 18, 2024 | 2:32 PM

Share

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್​ನಾಥ್​(Kamal Nath) ಬಿಜೆಪಿ ಸೇರುವ ಸುದ್ದಿ ಬೆನ್ನಲ್ಲೇ ಇನ್ನೋರ್ವ ಕಾಂಗ್ರೆಸ್​ ಹಿರಿಯ ಮುಖಂಡ ಮನೀಶ್​ ತಿವಾರಿ(Manish Tewari) ಕೂಡ ಬಿಜೆಪಿ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಕಮಲ್ ನಾಥ್ ಹಾಗೂ ಪುತ್ರ ನಕುಲ್ ನಾಥ್ ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.  ಇದೀಗ ಮನೀಶ್ ತಿವಾರಿ ಕೂಡ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದ್ದು, ಅವರ ಕಚೇರಿ ಮಾತ್ರ ಇದೊಂದು ವದಂತಿಯಷ್ಟೇ ತಿವಾರಿಯವರು ಇಂತಹ ಯಾವುದೇ ನಿರ್ಧಾರ ಮಾಡಿಲ್ಲ ಈ ಸುದ್ದಿಯಲ್ಲಿ ಹುರುಳಿಲ್ಲ ಎಂದು ಹೇಳಿದೆ.

ಕಾಂಗ್ರೆಸ್ ಸಂಸದರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಪಂಜಾಬ್‌ನ ಲೂಧಿಯಾನ ಲೋಕಸಭಾ ಕ್ಷೇತ್ರದಿಂದ ಕಮಲ ಚಿಹ್ನೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿದ್ದಾರೆ ಎಂದು ಮೂಲಗಳು ಈ ಹಿಂದೆ ಹೇಳಿಕೆ ನೀಡಿದ ನಂತರ ಸ್ಪಷ್ಟನೆ ಬಂದಿದೆ.

ಮತ್ತಷ್ಟು ಓದಿ: ಬಿಜೆಪಿಗೆ ಸೇರುತ್ತೀರಾ ಎಂದು ಕೇಳಿದಾಗ ಕಾಂಗ್ರೆಸ್ ನಾಯಕ ಕಮಲ್ ನಾಥ್ ಹೇಳಿದ್ದೇನು?

ಮನೀಶ್ ತಿವಾರಿ ಅವರು ತಮ್ಮ ಕ್ಷೇತ್ರದಲ್ಲಿದ್ದಾರೆ ಮತ್ತು ಅಲ್ಲಿ ಅಭಿವೃದ್ಧಿ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದಾರೆ. ನಿನ್ನೆ ರಾತ್ರಿ ಅವರು ಕಾಂಗ್ರೆಸ್ ಕಾರ್ಯಕರ್ತರ ಮನೆಯಲ್ಲಿ ತಂಗಿದ್ದರು ಎಂದು ಕಾಂಗ್ರೆಸ್ ಸಂಸದರ ಕಚೇರಿ ತಿಳಿಸಿದೆ. ಇದಕ್ಕೂ ಮುನ್ನ ಕಮಲ್ ನಾಥ್ ಅವರಿಗೆ ರಾಜ್ಯಸಭಾ ಸ್ಥಾನ ಸಿಗದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು ಎಂದು ಮೂಲಗಳು ತಿಳಿಸಿವೆ.

230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ 163 ಸ್ಥಾನಗಳೊಂದಿಗೆ ಪ್ರಮುಖ ವಿಜಯವನ್ನು ಸಾಧಿಸಿದೆ, ಆದರೆ ಕಾಂಗ್ರೆಸ್ ಕೇವಲ 66 ಸ್ಥಾನಗಳನ್ನು ಗೆದ್ದಿದೆ, ಇದು 2018 ರಲ್ಲಿ ಗೆದ್ದ 114 ಸ್ಥಾನಗಳಿಗಿಂತ ಕಡಿಮೆಯಾಗಿದೆ. ಮನೀಶ್​ ತಿವಾರಿ 17ನೇ ಲೋಕಸಭೆಯಲ್ಲಿ ಅವರು ಪಂಜಾಬ್​ನ ಆನಂದಪುರ ಸಾಹಿಬ್​ನಿಂದ ಕಾಂಗ್ರೆಸ್​ ಸಂಸದರಾಗಿ ಆಯ್ಕೆಯಾದರು. ಯುಪಿಎ ಸರ್ಕಾರದ ಅವಧಿಯಲ್ಲಿ ಅವರು 2012 ರಿಂದ 2014ರವರೆಗೆ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದರು.

2009ರಿಂದ 2014ರವರೆಗೆ ಲೂಧಿಯಾನದಿಂದ ಸಂಸದರಾಗಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್​ ವಕ್ತಾರರೂ ಆಗಿದ್ದರು. ತಿವಾರಿ ಅವರು 1988ರಿಂದ 1993ರವರೆಗೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿದ್ದರು. 1998 ರಿಂದ 2000ರವರೆಗೆ ಭಾರತೀಯ ಯುವ ಕಾಂಗ್ರೆಸ್​ ಅಧ್ಯಕ್ಷರಾಗಿದ್ದರು.

2004ರ ಲೋಕಸಭಾ ಚುನಾವಣೆಯಲ್ಲಿ ಸೋತರು ಆದರೆ 2009ರ ಲೋಕಸಭಾ ಚುನಾವಣೆಯಲ್ಲಿ ಶಿರೋಮಣಿ ಅಕಾಲಿದಳ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಗೆದ್ದರು. 2014ರ ಮಾರ್ಚ್​ನಲ್ಲಿ ಅನಾರೋಗ್ಯದ ಕಾರಣ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ