AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಮಧ್ಯಪ್ರದೇಶದಲ್ಲಿ 40 ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

BJP Star Campaigners List:ಮಧ್ಯಪ್ರದೇಶ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಭಾರತೀಯ ಜನತಾ ಪಕ್ಷವು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಶಿವಪ್ರಕಾಶ್, ಡಾ.ಮೋಹನ್ ಯಾದವ್, ವಿಡಿ ಶರ್ಮಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರುಗಳು ಸೇರಿವೆ.

Lok Sabha Election: ಮಧ್ಯಪ್ರದೇಶದಲ್ಲಿ 40 ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ನರೇಂದ್ರ ಮೋದಿImage Credit source: Business Standard
ನಯನಾ ರಾಜೀವ್
|

Updated on:Mar 27, 2024 | 9:10 AM

Share

ಮಧ್ಯಪ್ರದೇಶ ಲೋಕಸಭಾ ಚುನಾವಣೆ(Lok Sabha Election)ಯ ಪ್ರಚಾರಕ್ಕಾಗಿ ಭಾರತೀಯ ಜನತಾ ಪಕ್ಷವು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಶಿವಪ್ರಕಾಶ್, ಡಾ.ಮೋಹನ್ ಯಾದವ್, ವಿಡಿ ಶರ್ಮಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರುಗಳು ಸೇರಿವೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರನ್ನು ಸಹ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ. ಕಾಂಗ್ರೆಸ್ ನಿಂದ ಬಿಜೆಪಿ ಸೇರಿದ ಸುರೇಶ್ ಪಚೌರಿ ಅವರನ್ನೂ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.

ಮಾಜಿ ಸಿಎಂ ಸಂಸದೆ ಹಾಗೂ ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕಿ ಉಮಾಭಾರತಿ ಹೆಸರಿಲ್ಲ. ಈ ಪಟ್ಟಿಯಲ್ಲಿ ಮಧ್ಯಪ್ರದೇಶದ ಹಲವು ನಾಯಕರೂ ಸ್ಥಾನ ಪಡೆದಿದ್ದಾರೆ. ಸಿಎಂ ಮೋಹನ್ ಯಾದವ್, ವಿಡಿ ಶರ್ಮಾ, ಉಪ ಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ, ಉಪಮುಖ್ಯಮಂತ್ರಿ ಜಗದೀಶ್ ದೇವ್ರಾ, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಭೂಪೇಂದ್ರ ಪಟೇಲ್ ಅವರ ಹೆಸರುಗಳು ಸೇರಿವೆ.

ಮತ್ತಷ್ಟು ಓದಿ: ಇಂಡಿಯಾ ಒಕ್ಕೂಟದ ನಾಯಕರನ್ನು ಭೇಟಿಯಾದ ತೇಜಸ್ವಿ ಯಾದವ್, ಸೀಟು ಹಂಚಿಕೆ ಬಹುತೇಕ ಅಂತಿಮ

ಆದರೆ, ಜ್ಯೋತಿರಾದಿತ್ಯ ಸಿಂಧಿಯಾ, ವೀರೇಂದ್ರ ಕುಮಾರ್ ಖಟಿಕ್, ಫಗ್ಗನ್ ಸಿಂಗ್ ಕುಲಸ್ತೆ, ಹಿತಾನಂದ್, ಪ್ರಹ್ಲಾದ್ ಪಟೇಲ್, ಕೈಲಾಶ್ ವಿಜಯವರ್ಗಿಯಾ, ಜೈಭನ್ ಸಿಂಗ್ ಪವಯ್ಯ, ರಾಕೇಶ್ ಸಿಂಗ್, ಲಾಲ್ ಸಿಂಗ್ ಆರ್ಯ, ನಾರಾಯಣ್ ಕುಶ್ವಾಹ, ತುಳಸಿ ಸಿಲಾವತ್, ನಿರ್ಮಲಾ ಭೂರಿಯಾ, ಎಡಲ್ ಸಿಂಗ್ ಕಂಸನಾ, ಗೋಪಾಲ್ ಭರ್ರೋತ್ ಮಿಲಗವಾ, ಇತ್ತೀಚೆಗೆ ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದ ಕವಿತಾ ಪಾಟಿದಾರ್, ಗೌರಿಶಂಕರ್ ಬಿಸೇನ್ ಮತ್ತು ಸುರೇಶ್ ಪಚೌರಿ ಅವರಿಗೂ ಸ್ಥಾನ ನೀಡಲಾಗಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೂ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್, ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಯುಪಿ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೆಸರುಗಳು ಸೇರಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:09 am, Wed, 27 March 24

Follow Us
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ